ಹುಬ್ಬಳ್ಳಿಯ ಛಬ್ಬಿ ಗ್ರಾಮದಲ್ಲಿ ಸಚಿವ ಅಶೋಕ್ ಗ್ರಾಮ ವಾಸ್ತವ್ಯ: ಅದ್ದೂರಿ ಸ್ವಾಗತ
Team Udayavani, Mar 20, 2021, 2:42 PM IST
ಹುಬ್ಬಳ್ಳಿ: ಗ್ರಾಮ ವಾಸ್ತವ್ಯಕ್ಕಾಗಿ ತಾಲೂಕಿನ ಛಬ್ಬಿ ಗ್ರಾಮಕ್ಕೆ ಆಗಮಿಸಿದ ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಗ್ರಾಮಸ್ಥರಿಂದ ಅದ್ಧೂರಿ ಸ್ವಾಗತ ದೊರೆಯಿತು.
ಶನಿವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಆಗಮಿಸಿದ ಸಚಿವರು ಸಿದ್ದಾರೂಢಸ್ವಾಮಿ ಮಠಕ್ಕೆ ಆಗಮಿಸಿ ದರ್ಶನ ಪಡೆದರು. ನಂತರ ಗ್ರಾಮದ ಸೊಸೈಟಿಗೆ ಆಗಮಿಸಿದ ಸಚಿವರಿಗೆ ನೂರಾರು ಮಹಿಳೆಯರು ಪೂರ್ಣಕುಂಭ, ಆರತಿಗಳೊಂದಿಗೆ ಸ್ವಾಗತ ಕೋರಿದರು.
ಅಲಂಕೃತ ಎತ್ತಿನ ಬಂಡಿಯಲ್ಲಿ ಮೆರವಣಿಗೆಯಲ್ಲಿ ಪ್ರಾಥಮಿಕ ಶಾಲೆವರೆಗೂ ಸಾಗಿದರು. ಜಗ್ಗಲಿಗೆ, ಹಲಿಗೆ, ಬ್ಯಾಂಡ್, ಮರಕುದುರೆ ವಿವಿಧ ವಾದ್ಯಗಳು ಸಾಥ್ ನೀಡಿದವು.
ಗ್ರಾಮದ ವಿದ್ಯಾರ್ಥಿನಿಯರು ಗ್ರಾಮದಲ್ಲಿ ಪ್ರೌಢ ಶಾಲೆ ಇಲ್ಲವಾಗಿದ್ದು, ನಾಲ್ಕೈದು ಕಿ.ಮೀ.ದೂರದ ಅರಳಿಕಟ್ಟೆಗೆ ಹೋಗಬೇಕು. ಬಸ್ ಸೌಲಭ್ಯ ಇಲ್ಲವಾಗಿದೆ ಎಂದು ಮನವಿ ಮಾಡಿದರು.
ಇದಕ್ಕೆ ಸ್ಪಂದಿಸಿದ ಸಚಿವರು, ಶರೇವಾಡದ ಬಳಿ 6.5 ಎಕರೆ ಜಾಗದಲ್ಲಿ ಡಾ. ಅಂಬೇಡ್ಕರ ವಸತಿ ಶಾಲೆ ಆರಂಭಕ್ಕೆ ಸಂಜೆಯೇ ಜಾಗದ ಮಂಜೂರಾತಿ ಆದೇಶ ನೀಡುವುದಾಗಿ ಹೇಳಿದರು.
ದಲಿತರ ಕಾಲೊನಿಗೆ ಹೋಗಿ ಅಹವಾಲು ಆಲಿಸಿದರು. ಮನೆ ಬಾಗಿಲಿಗೆ ತೆರಳಿ ಮಾಸಾಶನ ಮಂಜೂರಾತಿ ಪತ್ರ ನೀಡಿದರು. ನಂತರ ಅಂಗವಿಕಲರಿಗೆ ಕೃತಕಕಾಲು ಸೇರಿದಂತೆ ವಿವಿಧ ಸಲಕರಣೆ ವಿತರಿಸಿದರು.
ಸಭಾಪತಿ ಬಸವರಾಜ ಹೊರಟ್ಟಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ ಸೇರಿದಂತೆ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್
ರಾಜ್ಯದಲ್ಲಿ ಎನ್ಕೌಂಟರ್ ಕಾನೂನು ಜಾರಿ ಅವಶ್ಯ: ಸಂತೋಷ್ ಲಾಡ್
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Lok Sabha Elections; ಕಾಂಗ್ರೆಸ್ಗೆ ಉತ್ತಮ ಅವಕಾಶ: ದಿನೇಶ್ ಗುಂಡೂರಾವ್
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್ಪಾಲ್
Lok Sabha Election ಫಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.
Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್, ಸುಜೀತ್