ಬೇಡಿಕೆ ಈಡೇರಿಸಲು ರೈಲ್ವೆ ಸಚಿವರಿಗೆ ಮನವಿ
Team Udayavani, Oct 27, 2019, 10:58 AM IST
ಹುಬ್ಬಳ್ಳಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ವಲಯ ರೈಲ್ವೆ ಬಳಕೆದಾರರ ಸಲಹಾ ಸಮಿತಿ ಸದಸ್ಯ ಮಹೇಂದ್ರ ಸಿಂಘಿ ಅವರು ರೈಲ್ವೆ ಸಹಾಯಕ ಸಚಿವ ಸುರೇಶ ಅಂಗಡಿ ಅವರಿಗೆ ಮನವಿ ಸಲ್ಲಿಸಿದರು.
ಮೈಸೂರು- ಉದಯಪುರ (19668) ರೈಲಿಗೆ ವಡೋದರ ಹಾಗೂ ರತ್ಲಾಂ ನಿಲ್ದಾಣಗಳ ಮಧ್ಯ ಇರುವ ಮೇಘನಗರ ನಿಲ್ದಾಣದಲ್ಲಿ ನಿಲುಗಡೆ ಕಲ್ಪಿಸಬೇಕು. ಇದರಿಂದ ಪವಿತ್ರ ಜೈನ ಕ್ಷೇತ್ರ ಮೋಹನಖೇಡಾಕ್ಕೆ ತೆರಳುವವರಿಗೆ ಅನುಕೂಲವಾಗುತ್ತದೆ. ಹುಬ್ಬಳ್ಳಿಯಿಂದ ಅರಸಿಕೆರೆ ಮಾರ್ಗವಾಗಿ ಮಂಗಳೂರಿಗೆ ತೆರಳುವ ನೂತನ ರೈಲು ಸೇವೆ ಒದಗಿಸಬೇಕು. ಇದರಿಂದ ಉಡುಪಿ, ಮಂಗಳೂರಿಗೆ ತೆರಳಲು ಅನುಕೂಲವಾಗುತ್ತದೆ. ಈ ಭಾಗದ ಹೊಟೇಲ್ ಮಾಲಿಕರು ತಮ್ಮ ಊರಿಗೆ ಹೋಗಲು ಅನುಕೂಲವಾಗುತ್ತದೆ. ಅಳ್ನಾವರ ಹಾಗೂ ದಾಂಡೇಲಿ ಮಧ್ಯೆ ಸರಕು ಹಾಗೂ ಪ್ರಯಾಣಿಕರ ರೈಲು ಸೇವೆ ಪುನರಾರಂಭಿಸಬೇಕು. ಇದರಿಂದ ಕೈಗಾರಿಕೆ ಕ್ಷೇತ್ರ ಹಾಗೂ ಪ್ರವಾಸೋದ್ಯಮ ಬೆಳೆಯಲು ಅನುಕೂಲವಾಗುತ್ತದೆ.
ಹುಬ್ಬಳ್ಳಿ ನಿಲ್ದಾಣದ ಅಂಡರ್ ಪಾಸ್ನಲ್ಲಿ ಪ್ಲಾಟ್ಫಾರ್ಮ್ ಟಿಕೆಟ್ ಕೌಂಟರ್ ಆರಂಭಿಸಬೇಕು. ಟಿಕೆಟ್ ವೆಂಡಿಂಗ್ ಯಂತ್ರ ಅಳವಡಿಸಿದರೆ ಅಂಡರ್ ಪಾಸ್ ಮೂಲಕ ನಿಲ್ದಾಣಕ್ಕೆ ಪ್ರವೇಶ ಪಡೆಯುವವರಿಗೆ ಅನುಕೂಲವಾಗುತ್ತದೆ. ಅಲ್ಲದೇ ಮುಖ್ಯ ದ್ವಾರದ ಟಿಕೆಟ್ ಕೌಂಟರ್ ನಲ್ಲಿ ಜನದಟ್ಟಣೆ ಕಡಿಮೆಯಾಗುತ್ತದೆ ಎಂದು ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ