ಬಡವರ ಬದುಕು ಬೆದರಿಸಿದ ಮಳೆ
ಮೇದಾರ ಓಣಿ ಜನರ ಪರದಾಟ | ಅಕ್ಷರಶಃ ಬೀದಿಗೆ ಬಿದ್ದ ಕುಟುಂಬಗಳು
Team Udayavani, Aug 14, 2019, 9:25 AM IST
ಹುಬ್ಬಳ್ಳಿ: ಮಳೆ ಅವಾಂತರದಿಂದಾಗಿ ಬಡವರ ಸಂಕಷ್ಟ ಹೇಳತೀರದಾಗಿದೆ. ಮುಂದೇನು ಎನ್ನುವ ಚಿಂತೆ ಅನೇಕರನ್ನು ಕಾಡತೊಡಗಿದೆ. ಕಳೆದ ಕೆಲವು ದಿನಗಳಿಂದ ನಗರದಲ್ಲಿ ಸುರಿದ ನಿರಂತರ ಮಳೆಗೆ ಹಳೇ ಹುಬ್ಬಳ್ಳಿ ಮೇದಾರ ಓಣಿಯ ಜನರು ಜೀವನೋಪಾಯಕ್ಕೆ ಪರದಾಡುವಂತಾಗಿದೆ.
ಮಳೆಯಿಂದಾಗಿ ಆಹಾರಧಾನ್ಯಗಳು, ಗೃಹಬಳಕೆ ವಸ್ತುಗಳು, ವಿವಿಧ ಸಾಮಗ್ರಿಗಳು ನೀರಿಗೆ ತೇಲಿಕೊಂಡು ಹೋಗಿವೆ. ಕೆಸರುಮಯ ಮನೆ ನೋಡಿದರೆ ಇದು ನಮ್ಮ ಮನೆಯೇ ಎಂಬ ಅನುಮಾನ ಬರುವಂತಾಗಿದೆ ಎಂಬುದು ಹಲವು ಸಂತ್ರಸ್ತರ ಅನಿಸಿಕೆಯಾಗಿದೆ.
ಜೀವನ ಮೂರಾಬಟ್ಟೆ: ಜೀವನಕ್ಕೆಂದು ಸಣ್ಣ ಸಣ್ಣ ಕೊಠಡಿಗಳಲ್ಲಿ ಪುಟ್ಟ ಉದ್ಯಮ ನಡೆಸುತ್ತಿರುವ ಹಲವು ಕುಟುಂಬಗಳು ಇಂದು ಅಕ್ಷರಶಃ ಬೀದಿಗೆ ಬಿದ್ದಿವೆ. ಗ್ಯಾರೇಜ್ ನಡೆಸುವವರು, ವೆಲ್ಡಿಂಗ್ ಮಾಡುವವರು ತಮ್ಮ ಸಾಮಗ್ರಿಗಳು ಇಲ್ಲದೆ ರೋಧಿಸುತ್ತಿದ್ದಾರೆ. ಇನ್ನು ಅದೆಷ್ಟೋ ಸಾಮಗ್ರಿಗಳು ನೀರಿಗೆ ಸಿಕ್ಕು ತುಕ್ಕು ಹಿಡಿಯುವ ಸ್ಥಿತಿಗೆ ಬಂದಿವೆ. ನಿತ್ಯದ ಆದಾಯದಲ್ಲಿ ಬದುಕುತ್ತಿದ್ದ ನಮಗೆ ಈ ಅನಾಹುತದಿಂದ ಮುಂದೆ ಬದುಕು ಸಾಗಿಸುವುದು ಹೇಗೆ ಎಂಬ ನೋವು ಕಾಡುತ್ತಿದೆ ಎಂದು ಬಡಗಿ ಕೆಲಸದಲ್ಲಿರುವ ಮಕ್ತುಂಹುಸೇನ ಬೆಟಗೇರಿ ಅಳಲು ತೋಡಿಕೊಂಡರು.
6 ಅಡಿಗೂ ಹೆಚ್ಚು ನೀರು: ಬುಧವಾರ ಮಧ್ಯರಾತ್ರಿ ನಾಲಾದಲ್ಲಿ ಹರಿದು ಬಂದ ಅಪಾರ ಪ್ರಮಾಣದ ನೀರು ಸುಮಾರು 6 ಅಡಿಗೂ ಹೆಚ್ಚು ಎತ್ತರದಲ್ಲಿ ಹರಿದಿದೆ. ಇದರಿಂದ ಆ ಭಾಗದಲ್ಲಿ ನಿಲ್ಲಿಸಿದ್ದ ಆಟೋ ರಿಕ್ಷಾ, ವಾಹನಗಳು ಸೇರಿದಂತೆ ಎಲ್ಲವೂ ಜಲಾವೃತಗೊಂಡಿದ್ದವು. ಮಳೆ ಪ್ರಮಾಣ ಕಡಿಮೆಯಾದ ನಂತರ ನೀರಿನ ಪ್ರವಾಹ ಕಡಿಮೆಯಾಗಿದೆ.
ಹಳೇಹುಬ್ಬಳ್ಳಿ ಮೇದಾರ ಓಣಿಯಲ್ಲಿರುವ ಸಣ್ಣ ನಾಲಾದಲ್ಲಿ ಅಪಾರ ಪ್ರಮಾಣದ ನೀರು ಹರಿಯುತ್ತಿದ್ದರಿಂದ ಅದರ ಗೋಡೆಗಳು ಕುಸಿದು ಪಕ್ಕದಲ್ಲಿದ್ದ ಮನೆಗಳಿಗೆ ಹಾನಿಯಾಗಿದೆ. ಜೊತೆಯಲ್ಲಿ ಅಪಾರ ಪ್ರಮಾಣದ ನೀರು ಒಳಭಾಗಕ್ಕೆ ನುಗ್ಗಿದ್ದರಿಂದ ಅಲ್ಲಿನ ಎಲ್ಲ ಸಾಮಗ್ರಿಗಳು ಹಾಳಾಗಿ ಹೋಗಿವೆ. ಜೊತೆಯಲ್ಲಿಯೇ ಅಲ್ಲಿದ್ದ ನೂರಾರು ಮನೆಗಳಿಗೆ ನೀರು ನುಗ್ಗಿದೆ.
ಹಳೇಹುಬ್ಬಳ್ಳಿ ಮೇದಾರ ಓಣಿಯಲ್ಲಿ ಕುಸಿದಿರುವ ನಾಲಾ ಗೋಡೆ ಹಾಗೂ ಮೇದಾರ ಓಣಿಯಲ್ಲಿ ಪ್ರವಾಹದಿಂದ ಹಾಳಾಗಿರುವ ವಿದ್ಯುತ್ ಉಪಕರಣಗಳನ್ನು ತೋರಿಸುತ್ತಿರುವುದು.
ಸತತ ಮಳೆಯಿಂದ ನಾಲಾ ಉಕ್ಕೇರಿ ಪಕ್ಕದಲ್ಲಿದ್ದ ಅಂಗಡಿಗಳಿಗೆ ನೀರು ಹೊಕ್ಕು ಎಲ್ಲ ಸಾಮಗ್ರಿಗಳು ಹಾಳಾಗಿವೆ. ಸಣ್ಣ ಪುಟ್ಟ ಸಾಮಗ್ರಿಗಳು ತೇಲಿಕೊಂಡು ಹೋಗಿವೆ.•ಅಬ್ದುಲ್ ಗಣಿ, ವೆಲ್ಡಿಂಗ್ ಮಳಿಗೆದಾರ
ರಾತ್ರಿ 8 ಗಂಟೆ ಸುಮಾರಿಗೆ ಪೊಲೀಸರು, ಪಾಲಿಕೆಯವರು ಆಗಮಿಸಿ ಕೂಡಲೇ ಮನೆಗಳನ್ನು ಖಾಲಿ ಮಾಡಿ ಎಂದು ಹೇಳಿದಾಗ ದಿಕ್ಕು ತೋಚದಂತಾಯಿತು. ನಂತರ ಮನೆಯಲ್ಲಿದ್ದ ಮಕ್ಕಳನ್ನು ಕರೆದುಕೊಂಡು ಬಂದೆವು. ಕೆಲವರು ಗಂಜಿ ಕೇಂದ್ರಗಳಿಗೆ ತೆರಳಿದರೆ ಇನ್ನು ಕೆಲವರು ಪರಿಚಯಸ್ಥರ ಮನೆಗಳಿಗೆ ತೆರಳಿ ಆಶ್ರಯ ಪಡೆದುಕೊಂಡಿದ್ದರು.•ಸಂತೋಷ ಸವಣೂರ, ಮೇದಾರ ಓಣಿ ನಿವಾಸಿ
ಬುಧವಾರ ಮಧ್ಯರಾತ್ರಿ ಮನೆಯ ಹಿಂಭಾಗದಲ್ಲಿದ್ದ ನಾಲಾದಲ್ಲಿ ಅಪಾರ ಪ್ರಮಾಣದ ನೀರು ಹರಿದು ಬಂದು ನಾಲಾ ತಡೆಗೋಡೆ ಕುಸಿದು ಬಿದ್ದಿತು. ಇದರಿಂದ ಅಪಾರ ಪ್ರಮಾಣದ ನೀರು ನಮ್ಮ ಮನೆಗಳಿಗೆ ನುಗ್ಗಿ ಅಪಾರ ಪ್ರಮಾಣದ ಹಾನಿ ಮಾಡಿದೆ.•ಆಷಿಸರ್ ಕಂದಗಲ್ಲ, ಮೇದಾರ ಓಣಿ ನಿವಾಸಿ
•ಬಸವರಾಜ ಹೂಗಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ