ಕೈಕೊಟ್ಟ ಮಳೆ; ಬೆಳೆ ರಕ್ಷಣೆಗೆ ಟ್ಯಾಂಕರ್ ನೀರಿಗೆ ಮೊರೆ
Team Udayavani, Jun 23, 2019, 8:54 AM IST
ನವಲಗುಂದ: ಮಳೆ ಕೈಕೊಟ್ಟಿದ್ದರಿಂದ ಹತ್ತಿ ಬೆಳೆಗೆ ಟ್ಯಾಂಕರ್ ಮೂಲಕ ನೀರನ್ನು ಹಾಯಿಸುತ್ತಿರುವುದು.
ನವಲಗುಂದ: ತಾಲೂಕಿನಲ್ಲಿ ನಾಲ್ಕೈದು ವರ್ಷಗಳಿಂದ ರೈತರನ್ನು ಬರಗಾಲ ಪೀಡಿಸುತ್ತಿದೆ. ಪ್ರಸಕ್ತ ಮುಂಗಾರು ವಿಳಂಬದಿಂದ ಬಿತ್ತಿದ ಹತ್ತಿ ಬೆಳೆ ಉಳಿಸಿಕೊಳ್ಳಲು ಕೆಲ ರೈತರು ಟ್ಯಾಂಕರ್ ನೀರಿಗೆ ಮೊರೆ ಹೋಗಿದ್ದಾರೆ.
ಜಯಣ್ಣ ಜಿನಗಾ ಎಂಬುವರ ಜಮೀನು ಲಾವಣೆ ಮಾಡಿದ ರೈತ ಮಂಜುನಾಥ ಅಲಂಗದ ಬೆಳೆ ಉಳಿಸಿಕೊಳ್ಳಲು ಹತ್ತಿ ಸಸಿಗಳಿಗೆ ಟ್ಯಾಂಕರ್ ಮೂಲಕ ನೀರನ್ನು ಹಾಯಿಸಿ ಬೆಳೆಗಳ ರಕ್ಷಣೆ ಮಾಡುತ್ತಿದ್ದಾರೆ.
ಪ್ರತಿ ಎಕರೆಗೆ 6500 ರೂ.ದಂತೆ 6 ಎಕರೆ ಜಮೀನು ಲಾವಣೆ ಮಾಡಿದ್ದು, 4 ಎಕರೆಯಲ್ಲಿ ಹೆಸರು ಹಾಗೂ 2 ಎಕರೆಯಲ್ಲಿ ಹತ್ತಿ ಬೀಜ ಬಿತ್ತನೆ ಮಾಡಿದ್ದಾನೆ. ಆದರೆ ಮಳೆ ಕಣ್ಮರೆಯಾಗಿದ್ದರಿಂದ ಬೆಳೆ ಉಳಿಸಿಕೊಳ್ಳಲು ಟ್ಯಾಂಕರ್ ನೀರಿಗೆ ಮೊರೆ ಹೋಗಿದ್ದಾರೆ. ಮುಂದೆಯೂ ಮಳೆ ಕೈಕೊಟ್ಟರೆ ಈಗಿನ ಪ್ರಯತ್ನ ವ್ಯರ್ಥವಾಗಲಿದ್ದು, ಖರ್ಚು ಮಾಡಿದ ಹಣವೂ ಮೈಮೇಲೆ ಬರಲಿದೆ.
ಇದು ಕೇವಲ ಒಬ್ಬ ರೈತನ ಕಷ್ಟವಲ್ಲ, ಮುಂಗಾರಿನಲ್ಲಿ ಬಿತ್ತನೆ ಮಾಡಿದ ಪ್ರತಿಯೊಬ್ಬ ರೈತನ ಪರಿಸ್ಥಿತಿಯಾಗಿದೆ. ಎಲ್ಲರಿಗೂ ಟ್ಯಾಂಕರ್ ಮೂಲಕ ನೀರನ್ನು ಹಾಯಿಸುವ ಶಕ್ತಿ ಇರುವುದಿಲ್ಲ. ಇದ್ದವರು ಈಗ ಕೊನೇ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಮಳೆಗಾಗಿ ದೇವರಲ್ಲಿ ಪ್ರಾರ್ಥಿಸಿಕೊಳ್ಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ