ರಮೇಶ ರಾಜೀನಾಮೆ ನಿಭಾಯಿಸುವಶಕ್ತಿ ಕೈ-ದಳ ನಾಯಕರಿಗೆ ಇದೆ: ಸತೀಶ
Team Udayavani, May 12, 2019, 11:29 AM IST
ಹುಬ್ಬಳ್ಳಿ: ಮಾಜಿ ಸಚಿವ ರಮೇಶ ಜಾರಕಿಹೊಳಿ ಪಕ್ಷ ಬಿಡುವ ವಿಚಾರ ಅವರಿಗೆ ಬಿಟ್ಟಿದ್ದು, ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಇಂತಹ ಹೇಳಿಕೆಗಳನ್ನು ಕಳೆದ ಒಂದು ವರ್ಷದಿಂದ ಕೇಳುತ್ತಿದ್ದೇವೆ. ಒಂದು ವೇಳೆ ರಾಜೀನಾಮೆ ನೀಡಿದರೂ ನಿಭಾಯಿಸುವ ಶಕ್ತಿ ಕಾಂಗ್ರೆಸ್-ಜೆಡಿಎಸ್ಗೆ ಇದೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ಕೊಡುತ್ತಾರೆ ಎಂದು ಹೇಳಲು ಆರಂಭಿಸಿ ಒಂದು ವರ್ಷವಾಯಿತು. ಒಂದು ವೇಳೆ ರಾಜೀನಾಮೆ ಕೊಟ್ಟರೆ ಅದನ್ನು ನಿಭಾಯಿಸುವ ಶಕ್ತಿ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ನಾಯಕರಿಗಿದೆ. ರಮೇಶ ಜಾರಕಿಹೊಳಿ ಪಕ್ಷ ಬಿಡುತ್ತಾರೋ ಇಲ್ಲವೋ ಎಂಬುದಕ್ಕೆ ಅವರಿಂದ ಉತ್ತರ ಪಡೆದರೆ ಸೂಕ್ತ. ಅದು ನನಗೆ ಸಂಬಂಧಿಸಿದ್ದಲ್ಲ. ಬಿಜೆಪಿಯವರು ಮಾಧ್ಯಮದವರನ್ನು ಕಂಡರೆ ಬಾಯಿಗೆ ಬಂದಂತೆ ಸುಳ್ಳು ಮಾತನಾಡುತ್ತಿದ್ದಾರೆ. ಸರ್ಕಾರ ಬೀಳುತ್ತದೆ ಎಂದು ಹೇಳಲು ಆರಂಭಿಸಿ ಒಂದು ವರ್ಷ ಕಳೆಯುತ್ತಿದೆ. ಒಂದೊಂದು ಕಾರಣದಿಂದ ಪಕ್ಷದಲ್ಲಿನ 80 ಶಾಸಕರು ಅಸಮಧಾನಗೊಂಡಿದ್ದಾರೆ. ಆದರೆ ಯಾರೂ ಪಕ್ಷ ತೊರೆಯುವ ಕುರಿತು ಮಾತನಾಡಿಲ್ಲ. ಇದಕ್ಕೆ ಹೆಚ್ಚಿನ ಒತ್ತು ಕೊಡುವ ಅಗತ್ಯವಿಲ್ಲ. ಚುನಾವಣೆಯಲ್ಲಿ ಎಲ್ಲ ಪಕ್ಷದವರು ಹಣ ಖರ್ಚು ಮಾಡುತ್ತಾರೆ. ದೇಶದಲ್ಲಿ ನಮಗಿಂತ ಹೆಚ್ಚು ಹಣ ಹಂಚಿದ ಪ್ರಶಸ್ತಿ ಬಿಜೆಪಿಯವರಿಗೆ ಕೊಡಬೇಕು. ಅವರೇ ನಂಬರ್ ಒನ್ ಎಂದರು.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಬೇಕು ಎನ್ನುವ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ. ಈ ರೀತಿ ಮಾತನಾಡಬಾರದು ಎಂದು ರಾಜ್ಯಾಧ್ಯಕ್ಷರು ಸೂಚನೆ ಕೊಟ್ಟಿದ್ದಾರೆ. ಆದರೂ ಕೆಲವರು ಹೇಳಿದರೆ ಅದನ್ನು ವೈಯಕ್ತಿಕ ಅಭಿಪ್ರಾಯ ಎಂದು ಪರಿಗಣಿಸಬೇಕಾಗುತ್ತದೆ. ಚುನಾವಣೆ ಸಂದರ್ಭದಲ್ಲಿ ಇಂತಹ ಹೇಳಿಕೆಗಳನ್ನು ಕೊಡಬಾರದು. ಕುಂದಗೋಳ ಉಪ ಚುನಾವಣೆಯಲ್ಲಿ ಜೆಡಿಎಸ್ ನಾಯಕರು, ಕಾರ್ಯಕರ್ತರು ಸಂಪೂರ್ಣ ಬೆಂಬಲ ನೀಡುತ್ತಿದ್ದಾರೆ ಎಂದರು.
ನನ್ನ ಬಳಿ ಹಣ ಇದ್ದರೆ ಶೋಭಾ ಅಕ್ಕನ ಬ್ಯಾಗ್ನಲ್ಲಿ ಇಟ್ಟು ಕಳಿಸುವೆ. ಯಡಿಯೂರಪ್ಪ ಅವರೊಂದಿಗೆ ಕೇವಲ 22 ಅಲ್ಲ 222 ಶಾಸಕರು ಸಂಪರ್ಕದಲ್ಲಿದ್ದಾರೆ. ಈಶ್ವರಪ್ಪ ಅವರಿಗೆ ನನ್ನನ್ನು ಕಂಡರೆ ಬಹಳ ಪ್ರೀತಿ.
•ಡಿ.ಕೆ.ಶಿವಕುಮಾರ, ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ