ಮಹದಾಯಿಗಾಗಿ ಮತ್ತೆ  ಪ್ರಧಾನಿ ಭೇಟಿಗೆ ಸಿದ್ಧತೆ 


Team Udayavani, May 24, 2018, 5:34 PM IST

24-may-19.jpg

ಧಾರವಾಡ: ರೈತ, ದಲಿತ, ಕನ್ನಡಪರ, ಕಾರ್ಮಿಕ, ನಾಗರಿಕ ಸಂಘಟನೆಗಳ ಸಹಯೋಗ ಹಾಗೂ ಸಹ್ಯಾದ್ರಿ ನೆಲ-ಜಲ ಸಂರಕ್ಷಣೆ ಸಂಸ್ಥೆ ನೇತೃತ್ವದಲ್ಲಿ ಮಹದಾಯಿಗಾಗಿ ಮಹಾವೇದಿಕೆ ಸಭೆ ಬುಧವಾರ ಇಲ್ಲಿನ ಕವಿಸಂನಲ್ಲಿ ನಡೆಯಿತು.

ಮಹದಾಯಿ ವಿವಾದ ಇತ್ಯರ್ಥಕ್ಕಾಗಿ ಜೂನ್‌ 15ರೊಳಗೆ ಬಾಗಲಕೋಟೆ, ಬೆಳಗಾವಿ, ಧಾರವಾಡ ಹಾಗೂ ಗದಗ ಜಿಲ್ಲೆಯ 9 ತಾಲೂಕಿನ ರೈತ ಹೋರಾಟಗಾರ ನಿಯೋಗ ದೆಹಲಿಗೆ ತೆರಳಿ ಪ್ರಧಾನಮಂತ್ರಿ ಭೇಟಿ ಮಾಡಿ ವಾಸ್ತವ ಸಂಗತಿ ತಿಳಿ ಹೇಳಿಯುವ ಮೂಲಕ ಯೋಜನೆ ಅನುಷ್ಠಾನಕ್ಕೆ ಮನವಿ ಮಾಡಿಕೊಳ್ಳಲು ಒಮ್ಮತದಿಂದ ನಿರ್ಣಯ ಕೈಗೊಳ್ಳಲಾಯಿತು.

ಇದರೊಂದಿಗೆ ಈ ಕುರಿತು ಸಹಕಾರ ನೀಡುವಂತೆ ಆಯಾ ರಾಜ್ಯ ಸರಕಾರಗಳಿಗೆ ಪತ್ರಗಳನ್ನು ಬರೆಯಲು ಹಾಗೂ ಮಹದಾಯಿ ಯೋಜನೆಯ ಉಪಯೋಗ ಪಡೆಯುವ ಪತ್ರಿಯೊಂದು ತಾಲೂಕಿನ ಜನರಿಗೆ ಸಹ್ಯಾದ್ರಿ ನೆಲ-ಜಲ ಸಂಸ್ಥೆ ವತಿಯಿಂದ ಜನರಿಂದ ನೇರವಾಗಿ ಮಾಹಿತಿ ಪಡೆಯಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ಈ ವೇಳೆ ಮಾತನಾಡಿದ ಸಹ್ಯಾದ್ರಿ ನೆಲ-ಜಲ ಸಂರಕ್ಷಣೆ ಸಂಸ್ಥೆಯ ಅಧ್ಯಕ್ಷ ಡಾ| ಎಂ.ಆರ್‌. ರಂಗನಾಥ, ಕುಡಿಯುವ ನೀರು ಪ್ರತಿಯೊಬ್ಬರ ಹಕ್ಕು. ಹೀಗಾಗಿ ಮಹದಾಯಿ ನೀರಿಗಾಗಿ ಸುದೀರ್ಘ‌ ಹೋರಾಟ ಮಾಡದೇ ತಮ್ಮ ಸಂಸ್ಥೆಯೊಂದಿಗೆ ಕೈ ಜೋಡಿಸಿದರೆ ಶೀಘ್ರವೇ ಸಮಸ್ಯೆ ಇತ್ಯರ್ಥಪಡಿಸಲಾಗುವುದು. ಮಹದಾಯಿ ವಿಷಯ ಕುರಿತಂತೆ ನ್ಯಾಯಾಧೀಕರಣ ಆಗಷ್ಟ್ 21ರಂದು ಮಹದಾಯಿ ತೀರ್ಪು  ನೀಡಲಿದೆ. ಅಷ್ಟರಲ್ಲಿಯೇ ಜೂನ್‌ ತಿಂಗಳ ಒಳಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಜಲಸಂಪನ್ಮೂಲ ಸಚಿವರನ್ನು ಪುನಃ ಭೇಟಿ ಮಾಡಿ ಅವರ ಮುಂದೆ ಮಹದಾಯಿ ವಿಷಯ ಮಂಡಿಸಿ, ಅನುಷ್ಠಾನಕ್ಕೆ ಒಪ್ಪಿಗೆ ಕೊಡಿಸಲಿದ್ದು, ಈ ಭಾಗದವರು ತಮಗೆ ಸಹಕಾರ ನೀಡುವಂತೆ ಮನವಿ ಮಾಡಿದರು.

ಮಹದಾಯಿ ಹಾಗೂ ಕಳಸಾ-ಬಂಡೂರಿ ವಿಷಯ ಕುರಿತಂತೆ ಈಗಾಗಲೇ ಗೋವಾ ಹಾಗೂ ಮಹಾರಾಷ್ಟ್ರ ಸರಕಾರದ ಅಧಿಕಾರಿಗಳು ಹಾಗೂ ನಾಯಕರೊಂದಿಗೆ ಒಂದು ಸುತ್ತಿನ ಮಾತುಕತೆ ನಡೆಸಿ ಒಪ್ಪಿಗೆ ಪಡೆಯಲಾಗಿದೆ. ಕರ್ನಾಟಕ ಸರಕಾರ ಹಾಗೂ ಮಲಪ್ರಭೆ ಅಚ್ಚುಕಟ್ಟು ಪ್ರದೇಶದ ರೈತರ ಸಹಕಾರ ಅಗತ್ಯವಿದೆ ಎಂದು ತಿಳಿಸಿದರು.

ಮಹದಾಯಿ ಹೋರಾಟಗಾರ ಶಂಕರ ಅಂಬಲಿ ಮಾತನಾಡಿ, ಮಹದಾಯಿ ವಿಷಯದಲ್ಲಿ ರೈತರ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ. 1300 ಸಂಘಟನೆಗಳು ಬೆಂಬಲದಿಂದ ಮೂರು ವರ್ಷ ಹೋರಾಟ ನಡೆಸಿದರೂ ಗುರಿ ತಲುಪಲಿಲ್ಲ. ಒಗ್ಗಟ್ಟಿನ ಕೊರತೆ, ಭಿನ್ನಾಭಿಪ್ರಾಯ, ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದ ಹೋರಾಟ ನೆಲಕಚ್ಚಿದೆ ಎಂದರು. ಮಾಜಿ ಶಾಸಕ ಬಿ.ಎಂ. ಹೊರಕೇರಿ ಅವರ ಕನಸಿನ ಕೂಸು ಮಹದಾಯಿ. ಹೀಗಾಗಿ 1040 ದಿನಗಳ ಸುದೀರ್ಘ‌ ಹೋರಾಟಕ್ಕೆ ಅಂತ್ಯ ಹಾಡುವ ಕಾಲ ಬಂದಿದೆ. ಮಹದಾಯಿಗಾಗಿ ಮಹಾವೇದಿಕೆಯಿಂದ ಪ್ರಧಾನಮಂತ್ರಿ, ರಾಷ್ಟ್ರಪತಿ, ಗೋವಾ-ಮಹಾರಾಷ್ಟ್ರ ಸರಕಾರಗಳ ಕಣ್ಣು ತೆರೆಸುವ ಕೆಲಸ ನಡೆಯಲಿದೆ ಎಂದರು.

ಸಹ್ಯಾದ್ರಿ ಸಂಸ್ಥೆಯ ಪದಾಧಿಕಾರಿ ಹೊನ್ನಾಳಿ ನಾರಾಯಣ, ಶಂಕರಗೌಡ ಪಾಟೀಲ, ಮಧುಸೂದನ ತಿವಾರಿ, ಲಕ್ಪಣ ಬಕ್ಕಾಯಿ, ಬಸವರಾಜ ಸಾಭಳೆ ಸೇರಿದಂತೆ 9 ತಾಲೂಕಿನ ರೈತರು ಪಾಲ್ಗೊಂಡಿದ್ದರು.

ಕೆಲವರಿಗೆ ಹೋರಾಟ ಅಂತ್ಯ ಗೊಳ್ಳುವುದು ಬೇಕಿಲ್ಲ. ಈ ಹಿಂದಿನ ತಪ್ಪು ತಿದ್ದಿಕೊಂಡು ಎಲ್ಲರೂ ಮಹದಾಯಿಗಾಗಿ ಮಹಾವೇದಿಕೆ ಅಡಿಯಲ್ಲಿ ಬರುವ ಮೂಲಕ ನ್ಯಾಯಾಧಿಕರಣದ ಒಳಗೆ ಅಥವಾ ಹೊರಗಡೆಗೆ ಸಮಸ್ಯೆ ಇತ್ಯರ್ಥಗೊಂಡು ಕರ್ನಾಟಕಕ್ಕೆ ಮಹದಾಯಿ ಹರಿದು ಬಂದರೆ ನಮ್ಮೇಲ್ಲರ ಹೋರಾಟ ಸಾರ್ಥಕವಾಗಲಿದೆ.
 ಶಂಕರ ಅಂಬಲಿ, ಹೋರಾಟಗಾರ 

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.