ಕೋವಿಡ್‌ ಕರ್ತವ್ಯ ನಿರ್ವಹಣೆಗೆ ಅಗತ್ಯ ಮಾನವ ಸಂಪನ್ಮೂಲ ಒದಗಿಸಲು ಸಿದ್ಧ


Team Udayavani, Jul 28, 2020, 8:59 AM IST

ಕೋವಿಡ್‌ ಕರ್ತವ್ಯ ನಿರ್ವಹಣೆಗೆ ಅಗತ್ಯ ಮಾನವ ಸಂಪನ್ಮೂಲ ಒದಗಿಸಲು ಸಿದ್ಧ

ಧಾರವಾಡ: ಕೋವಿಡ್‌ ಸೋಂಕಿತರ ಚಿಕಿತ್ಸೆ, ಹೋಂ ಐಸೋಲೇಷನ್‌ನಲ್ಲಿ ಇರುವವರಿಗೆ ಕೌನ್ಸೆಲಿಂಗ್‌, ಸೀಲ್‌ಡೌನ್‌ ಪ್ರದೇಶಗಳ ನಿರ್ವಹಣೆ, ಜನದಟ್ಟಣೆ ಕಡಿಮೆ ಮಾಡಲು ಮಾರುಕಟ್ಟೆಗಳ ಸ್ಥಳಾಂತರಿಸಲು ಅಗತ್ಯವಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ, ಮಾನವ ಸಂಪನ್ಮೂಲ ಒದಗಿಸಲಾಗುವುದು. ಹೀಗಾಗಿ ಹು-ಧಾ ಮಹಾ ನಗರ ಪಾಲಿಕೆಯು ಪೊಲೀಸ್‌ ಇಲಾಖೆಯೊಂದಿಗೆ ಸಮನ್ವಯ ಮಾಡಿಕೊಂಡು ಕಾರ್ಯ ನಿರ್ವಹಿಸಬೇಕು ಎಂದು ಡಿಸಿ ನಿತೇಶ್‌ ಪಾಟೀಲ ಹೇಳಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಕೋವಿಡ್‌ 19 ನಿಯಂತ್ರಣಕ್ಕಾಗಿ ರಚಿಸಿರುವ ಕಣ್ಗಾವಲು ತಂಡಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೋವಿಡ್‌ ನಿರ್ವಹಣೆ ಎಲ್ಲಾ ಇಲಾಖೆಗಳ ಅಧಿ ಕಾರಿಗಳು, ಇಂಜನಿಯರ್‌ಗಳು ಹಾಗೂ ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು. ಪಾರ್ಥಿವ ಶರೀರಗಳ ಅಂತ್ಯಕ್ರಿಯೆ ನಿರ್ವಹಣೆಗೆ ನಗರ ಸ್ಥಳೀಯ ಸಂಸ್ಥೆಗಳು ಪ್ರತ್ಯೇಕ ಏಜೆನ್ಸಿ ಗುರುತಿಸಿ ಕಟ್ಟಿಗೆ, ಮಾನವ ಸಂಪನ್ಮೂಲ, ವಾಹನ ಮತ್ತಿತರ ಅಗತ್ಯ ಸೇವೆಗಳು 24¥7 ಲಭ್ಯವಿರುವಂತೆ ನೋಡಿಕೊಳ್ಳಬೇಕು. ಪಾರ್ಥಿವ ಶರೀರಗಳ ಅಂತ್ಯಕ್ರಿಯೆ ಸಂದರ್ಭದಲ್ಲಿ ನಿಯಮಗಳ ಪಾಲನೆ ಪರಿಶೀಲಿಸಲು ಪೊಲೀಸ್‌ ಇಲಾಖೆ ಸಹಕಾರ ಪಡೆಯಬೇಕೆಂದು ಸೂಚಿಸಿದರು.

ಮಹಾನಗರ ಪಾಲಿಕೆಯು ಜನಜಾಗೃತಿಗೆ ಮಾಸ್ಕ್ ಬಳಕೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಮನೆಗಳಲ್ಲಿ ಪ್ರತ್ಯೇಕವಾಗಿ ಇರುವಿಕೆ ಕುರಿತು ವ್ಯಂಗ್ಯಚಿತ್ರ, ಕಲೆ, ಫೋಟೋಗಳನ್ನು ಬಳಸಿ ಹೆದ್ದಾರಿ ಫಲಕಗಳನ್ನು ಅವಳಿನಗರದ ಪ್ರಮುಖ ಸ್ಥಳಗಳಲ್ಲಿ ಅಳವಡಿಸಬೇಕೆಂದು ಸೂಚನೆ ನೀಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಮೇಜರ್‌ ಸಿದ್ಧಲಿಂಗಯ್ಯ ಹಿರೇಮಠ ಮಾತನಾಡಿ, ಜಾಗೃತಿ ಮೂಡಿಸಲು ಚಿಕ್ಕಮಕ್ಕಳಿಂದ ಆನ್‌ ಲೈನ್‌ ಮೂಲಕ ಚಿತ್ರಕಲಾ ಸ್ಪರ್ಧೆ ಏರ್ಪಡಿಸಿ, ಉತ್ತಮ ಕಲಾಕೃತಿ ನೀಡಿದ ಮಕ್ಕಳನ್ನು ಜಿಲ್ಲಾ ಧಿಕಾರಿಗಳೊಂದಿಗೆ ಉಪಹಾರಕ್ಕೆ ಆಹ್ವಾನಿಸಿ, ಪ್ರೋತ್ಸಾಹಿಸಬೇಕೆಂಬ ಸಲಹೆ ನೀಡಿದಾಗ ಜಿಲ್ಲಾಧಿಕಾರಿಗಳು ಒಪ್ಪಿಗೆ ಸೂಚಿಸಿ, ಚಿತ್ರಕಲೆ,ಲೇಖನ, ಘೋಷವಾಕ್ಯ ರಚನೆ ಹೀಗೆ ವೈವಿಧ್ಯಮಯ ಸ್ಪರ್ಧೆ ಏರ್ಪಡಿಸಲು ಸೂಚಿಸಿದರು.

ಜಿಪಂ ಸಿಇಒ ಡಾ| ಬಿ.ಸಿ.ಸತೀಶ ಮಾತನಾಡಿ, ಜಿಲ್ಲೆಯ ಪ್ರತಿಯೊಂದು ಪ್ರಕರಣಗಳ ದಾಖಲೀಕರಣ ಮತ್ತು ಡಿಸ್‌ ಚಾರ್ಜ್‌ ವರದಿಗಳ ಕ್ರೋಢೀಕರಣ ಸರಳಗೊಳಿಸಲು ಗೂಗಲ್‌ ಸ್ಪ್ರೆಡ್‌ ಶೀಟ್‌ ರಚಿಸಿ ಆ ಮೂಲಕ ಅಪ್‌ಡೇಟ್‌ ಮಾಡುವ ಸೌಕರ್ಯ ಎಲ್ಲಾ ಸರ್ಕಾರಿ, ಖಾಸಗಿ ಆಸ್ಪತ್ರೆಗಳು ಹಾಗೂ ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ ಕಲ್ಪಿಸಬೇಕು ಎಂದರು.

ಹು-ಧಾ ಉಪ ಪೊಲೀಸ್‌ ಆಯುಕ್ತ ಕೃಷ್ಣಕಾಂತ್‌, ಮಹಾನಗರ ಪಾಲಿಕೆ ಆಯುಕ್ತ ಡಾ|ಸುರೇಶ ಇಟ್ನಾಳ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಹೆಸ್ಕಾಂ ಪ್ರಧಾನ ವ್ಯವಸ್ಥಾಪಕ ಇಬ್ರಾಹಿಂ ಮೈಗೂರ, ಡಿಮ್ಹಾನ್ಸ್‌ ಮುಖ್ಯ ಆಡಳಿತಾಧಿಕಾರಿ ಡಾ| ಷಣ್ಮುಖ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಸದಾಶಿವ ಮರ್ಜಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|ಯಶವಂತ ಮದೀನಕರ್‌ ಇದ್ದರು.

ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.