ಬರದಿಂದ ಜನ ತತ್ತರಿಸುತ್ತಿದ್ದರೆ ಸಿಎಂ ರೆಸಾರ್ಟ್ನಲ್ಲಿ ವಿಶ್ರಾಂತಿ: ಕರಂದ್ಲಾಜೆ
• ಅರಳಿಕಟ್ಟಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಐ. ಚಿಕ್ಕನಗೌಡ್ರ ಪರ ಪ್ರಚಾರ ಸಭೆ
Team Udayavani, May 15, 2019, 9:54 AM IST
ಹುಬ್ಬಳ್ಳಿ: ಅರಳಿಕಟ್ಟಿ ಗ್ರಾಮದಲ್ಲಿ ಸಭೆ ನಡೆಸಿ ಬಿಜೆಪಿ ಅಭ್ಯರ್ಥಿ ಪರ ಮತಯಾಚಿಸಲಾಯಿತು.
ಹುಬ್ಬಳ್ಳಿ: ಬರಗಾಲದಿಂದ ಜನರು ನೀರಿಗಾಗಿ ಪರದಾಡುತ್ತಿರುವಾಗ ಸಿಎಂ ಎಚ್.ಡಿ. ಕುಮಾರಸ್ವಾಮಿ ರೆಸಾರ್ಟ್ ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.
ಕುಂದಗೋಳ ವಿಧಾನಸಭಾ ಕ್ಷೇತ್ರದ ಅರಳಿಕಟ್ಟಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಐ. ಚಿಕ್ಕನಗೌಡ್ರ ಪರ ಪ್ರಚಾರ ಸಭೆ ನಡೆಸಿ ಮಾತನಾಡಿದ ಅವರು, ಸರಕಾರದ ದುರಾಡಳಿತ ದಿಂದಾಗಿ ಕೂಲಿ ಕಾರ್ಮಿಕರಿಗೆ ಕೆಲಸವಿಲ್ಲದಾಗಿದೆ. ಸಮ್ಮಿಶ್ರ ಸರಕಾರವು ಗರ್ಭಿಣಿಯರಿಗೆ ಹುಳುವಿದ್ದ ಆಹಾರ ನೀಡುತ್ತಿದೆ. ಮುಖ್ಯಮಂತ್ರಿ ಆರಿಸಿ ಬಂದ 24 ತಾಸಿನೊಳಗೆ ರೈತರ ಸಾಲಮನ್ನಾ ಮಾಡುತ್ತೇನೆಂದು ಸುಳ್ಳು ಹೇಳಿದ್ದಾರೆ ಎಂದರು.
ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ, ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಣೆ, ರೈತರ ಪರವಾದ ಬಜೆಟ್, ಬಡ್ಡಿ ಮನ್ನಾ, ರೈತರ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ ನೀಡಿದ ಹೆಗ್ಗಳಿಕೆ ಯಡಿಯೂರಪ್ಪ ಅವರಿಗೆ ಸಲ್ಲುತ್ತದೆ. ಗರ್ಭಿಣಿಯರ ಮಡಿಲಿಗೆ ಕಿಟ್, ಮಹಿಳೆಯರ ರಕ್ಷಣೆ, ಮಠ-ಮಂದಿರಗಳಿಗೆ, ಶಾಲೆ-ಹೈಸ್ಕೂಲ್ಗೆ ವಸತಿ ಕಟ್ಟಿಸಲಿಕ್ಕೆ ಅನುದಾನ ನೀಡಿದ್ದು, ಕೇಂದ್ರ ಸರಕಾರವು ರಾಜ್ಯ ಸರಕಾರಕ್ಕೆ 400 ಕೋಟಿ ರೂ. ಕೊಟ್ಟಿದೆ ಎಂದು ಹೇಳಿದರು.
ಪ್ರಧಾನಿ ಮೋದಿಯವರು ಪ್ರಧಾನಿಯಾದ ನಂತರ ಉಜ್ವಲ ಗ್ಯಾಸ್ ಯೋಜನೆಯಡಿ ಬಿಪಿಎಲ್ ಕಾರ್ಡ್ದಾರರಿಗೆ ಉಚಿತ ಗ್ಯಾಸ್ ವಿತರಣೆ, ರೈತರಿಗೆ ವರ್ಷಕ್ಕೆ 6 ಸಾವಿರ ರೂ., ಮುದ್ರಾ ಯೋಜನೆಯಡಿ ಸ್ವಯಂ ಉದ್ಯೋಗ, ಆಯುಷ್ಮಾನ್ ಭಾರತ ಯೋಜನೆಯಡಿ ಒಂದು ಕುಟುಂಬದಲ್ಲಿ ಯಾರಾದರೂ ಅನಾರೋಗ್ಯಕ್ಕೀಡಾದರೆ 5 ಲಕ್ಷ ರೂ. ವರೆಗೆ ಖಾಸಗಿ ಆಸ್ಪತ್ರೆ ವೆಚ್ಚ ಹೀಗೆ ಹತ್ತು ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಎಂದರು.
ಮುಖಂಡರಾದ ಪ್ರಭಾಕರ ಕೋರೆ, ಹನುಮಂತ ನಿರಾಣಿ, ಎಸ್.ವಿ. ಸಂಕನೂರ, ಮಹಾಂತೇಶ ಕವಟಗಿಮಠ, ಸೀಮಾ ಮಸೂತಿ, ಭಾರತಿ ಅಳವಂಡಿ, ಶಿವು ಮೆಣಸಿನಕಾಯಿ, ಮೇನಕಾ ಹುರಳಿ ಸೇರಿದಂತೆ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ