ನಿವೃತ್ತಿ ಜೀವನದಿಂದ ಸಮಾಜಕ್ಕೆ ಹೆಚ್ಚಿನ ಸೇವೆ ಅಗತ್ಯ: ಶ್ರೀ


Team Udayavani, Jul 10, 2018, 5:29 PM IST

10-july-23.jpg

ಗುಳೇದಗುಡ್ಡ: ಸಮಾಜ ಸೇವೆಯಲ್ಲಿ ತೊಡಗಿ ಭಾವೈಕ್ಯತೆಯಿಂದ ಕಾರ್ಯನಿರ್ವಹಿಸಿ, ಸಮರ್ಥ ಶಿಕ್ಷಕಿಯಾಗಿ ಸೇವೆ ಸಲ್ಲಿಸಿರುವ ಡಾ.ಶಾಂತಾ ಕರಡಿಗುಡ್ಡ ಮುಂಬರುವ ದಿನಗಳಲ್ಲಿ ಇನ್ನಷ್ಟು ಸಮಾಜಕ್ಕೆ ಸೇವೆ ಸಲ್ಲಿಸಲಿ ಎಂದು ಗುರುಸಿದ್ಧೇಶ್ವರ ಬ್ರಹನ್ಮಠದ ಜಗದ್ಗುರು ಬಸವರಾಜ ಶ್ರೀಗಳು ಹೇಳಿದರು. ಸ್ಥಳೀಯ ಡಾ.ಶಾಂತಾ ಕರಡಿಗುಡ್ಡ ಅವರ ಶಿಷ್ಯಬಳಗ, ಅಭಿಮಾನಿಗಳು ಹಮ್ಮಿಕೊಂಡಿದ್ದ ಗುರುವಂದನಾ ಹಾಗೂ ಸಾರ್ಥಕ ಬದುಕು ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಾಜಿ ಶಾಸಕ ಎಸ್‌.ಜಿ. ನಂಜಯ್ಯನಮಠ ಮಾತನಾಡಿ, ಮನುಷ್ಯ ವೃತ್ತಿಯಿಂದ ನಿವೃತ್ತರಾದರೂ ಪ್ರವೃತ್ತಿಯಿಂದ ನಿವೃತ್ತರಾಗಬಾರದು, ನಾವು ಸಂಪೂರ್ಣ ಅಸಮರ್ಥತೆ, ಅಶಕ್ತತೆಯಾದಾಗ ಮಾತ್ರ ನಾವು ನಿವೃತ್ತಿಯಾಗಬೇಕು. ಡಾ.ಶಾಂತಾ ಕರಡಿಗುಡ್ಡ ಅವರ ಆದರ್ಶ ಬದುಕು ಇಂದಿನ ಶಿಕ್ಷಕ ಸಮುದಾಯದವರಿಗೆ ಮಾದರಿಯಾಗಬೇಕು ಎಂದರು.

ಖ್ಯಾತ ಕಥೆಗಾರ ಅಬ್ಟಾಸ ಮೇಲಿನಮನಿ ಮಾತನಾಡಿ. ನಿವೃತ್ತಿ ಬದುಕನ್ನು ಜೀವನದ ಹೊಸ ಆರಂಭ ಎಂದು ತಿಳಿದುಕೊಂಡರೆ ನಮ್ಮ ಬದುಕು ಸಾರ್ಥಕವಾಗುತ್ತದೆ. ಯಾರು ಮನುಷ್ಯರನ್ನು ರೂಪಿಸುತ್ತಾರೋ ಅವರೇ ನಿಜವಾದ
ಶಿಕ್ಷಕರಾಗುತ್ತಾರೆ. ನಲವತ್ತು ವರ್ಷಗಳವರೆಗೆ ಶಿಕ್ಷಕಿಯಾಗಿ ಸೇವೆಸಲ್ಲಿಸಿದ ಡಾ. ಶಾಂತಾ ಕರಡಿಗುಡ್ಡ ಅವರು ಶಿಕ್ಷಕಿಯಾಗಿ ಸಾವಿರಾರು ವಿದ್ಯಾರ್ಥಿಗಳ ಬದುಕು ರೂಪಿಸಿ, ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಏನು ಎಂಬುದನ್ನು ತೋರಿಸಿಕೊಟ್ಟಿದ್ದಾರೆ ಎಂದರು.

ಮರಡಿಮಠದ ಕಾಶೀನಾಥ ಸ್ವಾಮಿಗಳು, ಸುಮಡ್ಡಿ ಸಿಎಸ್‌ಐ ಚರ್ಚನ ವೈ.ಜೆ.ಹದ್ದನ್ನವರ, ಸಿ.ಎಸ್‌.ಹೂಲಗೇರಿ, ಬಸೀರ್‌ ಅಹಮದ್‌ ಮುಪ್ತಿ, ಜಯವಂತ ಹಿರೇಕೋಡಿ ಸಾನ್ನಿಧ್ಯ ವಹಿಸಿದ್ದರು. ಡಾ. ಪ್ರಕಾಶ ನರಗುಂದ, ಪತ್ರಕರ್ತ ಸುರೇಶ ವಗ್ಗಾ ಅವರ ಸಂಪಾದನೆಯ ಸಾರ್ಥಕ ಬದುಕು ಗ್ರಂಥ ಹಾಗೂ ವಸಂತ ಕರಡಿಗುಡ್ಡ ಅವರ ಕಂದನ ಕರೆಯೋಲೆ ಕವನ ಸಂಕಲನ ಬಿಡುಗಡೆಗೊಳಿಸಲಾಯಿತು.

ಮಾಜಿ ಶಾಸಕ ರಾಜಶೇಖರ ಶೀಲವಂತ, ಮಹೇಶ ಹೊಸಗೌಡರ, ಮಹಾಂತೇಶ ಮಮದಾಪುರ, ಪುರಸಭೆ ಅಧ್ಯಕ್ಷ ಶಿವಕುಮಾರ ಹಾದಿಮನಿ, ಮುಖಂಡ ಹೊಳಬಸು ಶೆಟ್ಟರ, ಸಾಹಿತಿ ಬಸವರಾಜ ಗವಿಮಠ, ಕ್ಷೇತ್ರ ಸಮನ್ವಯಾಧಿಕಾರಿ ಎಂ.ಪಿ. ಮಾಗಿ, ಪುರಸಭೆ ಸದಸ್ಯೆ ಅಮೀನಾಬಿ ಮುಜಾಹಿದ್‌, ವೈ.ಜಿ. ಬ್ಯಾಡಗಿ, ಎಂ.ಎಂ.ಜಮಖಾನಿ, ವಸಂತ ಕರಡಿಗುಡ್ಡ, ಶಾಂತವೀರ ಕರಡಿಗುಡ್ಡ, ಈಶ್ವರ ಕಂಠಿ, ಮಹಾದೇವ ಜಗತಾಪ, ಎನ್‌.ಬಿ. ಪೂಜಾರ, ಗೀತಾ ಕರಡಿಗುಡ್ಡ, ಈರಣ್ಣ ತಾವರಗೇರಿ ಸೇರಿದಂತೆ ಶಿಷ್ಯರು, ಅಭಿಮಾನಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 29  ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 29  ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.