ವಿರೂಪಾಕ್ಷೇಶ್ವರ ಜಾತ್ರೆಯಿಂದ ಧಾರ್ಮಿಕ ಸಂಸ್ಕಾರ


Team Udayavani, Apr 11, 2019, 12:21 PM IST

hub-9
ಉಪ್ಪಿನಬೆಟಗೇರಿ: ಜನರನ್ನು ಸೇರಿಸಿ ಕೇವಲ ಜನಜಾತ್ರೆ ಮಾಡದೇ, ಜನರಿಗೆ ಧಾರ್ಮಿಕ ಸಂಸ್ಕಾರ ನೀಡುವ ಕಾರ್ಯವನ್ನು ಈ ಭಾಗದ ಪ್ರಮುಖ ವಿರೂಪಾಕ್ಷೇಶ್ವರ ಜಾತ್ರೆ ಮಾಡುತ್ತಿದೆ ಎಂದು ಅಮ್ಮಿನಭಾವಿ ಪಂಚಗೃಹ ಹಿರೇಮಠದ
ಶ್ರೀ ಅಭಿನವ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಗ್ರಾಮದ ಶ್ರೀಗುರು ವಿರೂಪಾಕ್ಷೇಶ್ವರ ಜಾತ್ರಾ ಮಹೋತ್ಸವ ಅಂಗವಾಗಿ ಬುಧವಾರ ಜರುಗಿದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ವಧು-  ವರರಿಗೆ ಶುಭ ಕೋರಿ ಆಶೀರ್ವಚನ ನೀಡಿದರು.
ಮಮದಾಪೂರ ವಿರಕ್ತಮಠದ ಶ್ರೀ ಮುರುಘೇಂದ್ರ ಸ್ವಾಮೀಜಿ ಮಾತನಾಡಿ, ಅತ್ತೆಯನ್ನು ತಾಯಿಯಂತೆ ಸೊಸೆ ಕಾಣಬೇಕು, ಸೊಸೆಯನ್ನು ಮಗಳಂತೆ ಅತ್ತೆ ಕಾಣಬೇಕು. ಅಂದಾಗ ಕುಟುಂಬ ಸಾಮರಸ್ಯದೊಂದಿಗೆ ನಡೆಯುವುದು. ನೂತನ ದಂಪತಿಗಳು ಮಜ್ಜಿಗೆಯಂತೆ ಇರದೇ ಹಾಲು ಮತ್ತು ನೀರಿನಂತೆ ಅನೋನ್ಯವಾಗಿ ಇರಬೇಕೆಂದರು. ನೂತನ ದಂಪತಿಗಳು ನೂರಾರು ಕಾಲ ಸುಖವಾಗಿ ಬಾಳಿ ಆರತಿಗೊಬ್ಬ ಮಗಳು ಕೀರುತಿಗೊಬ್ಬ ಮಗ ಎಂಬ ಕುಟುಂಬ ತತ್ವ ಪಾಲಿಸಬೇಕೆಂದು ಕಿವಿಮಾತು ಹೇಳಿದರು.
ನೇತೃತ್ವ ವಹಿಸಿದ್ದ ಸ್ಥಳೀಯ ಮೂರುಸಾವಿರ ವಿರಕ್ತಮಠದ ಶ್ರೀ ಕುಮಾರ ವಿರೂಪಾಕ್ಷ ಸ್ವಾಮೀಜಿ ಮಾತನಾಡಿ, ನಾವು ಬಂದಿದ್ದು ಬರಿಗೈಲಿ, ಸತ್ತ ನಂತರ ನಾವು ಹೋಗುವುದೂ ಬರಿಗೈಲಿ. ಸತ್ತ ನಂತರವೂ ನಾವು ಬದುಕಬೇಕಾದರೆ ದಾನ-ಧರ್ಮ ಮಾಡಿ ಸಮಾಜಕ್ಕೆ ಪರೋಪಕಾರಿಯಾಗಿ ಬದುಕಬೇಕು ಎಂದರು.
ಲವಣಗಿರಿ ಉತ್ಸವದ ಜಾತ್ರಾ ಮಹೋತ್ಸವ ಅಂಗವಾಗಿ ಶ್ರೀಗುರು ವಿರೂಪಾಕ್ಷೇಶ್ವರ ದೇವಸ್ಥಾನದಲ್ಲಿ ಒಟ್ಟು 9 ಜೋಡಿ ಹರ ಗುರು ಚರಮೂರ್ತಿಗಳ ದಿವ್ಯ ಸಾನಿಧ್ಯದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಖೇಡಗಿ ವಿರಕ್ತಮಠದ ಶ್ರೀ ಶಿವಬಸವ ಸ್ವಾಮೀಜಿ, ಮುನವಳ್ಳಿ ಸೋಮಶೇಖರ ಮಠದ ಶ್ರೀ ಮುರುಘೇಂದ್ರ ಸ್ವಾಮೀಜಿ, ಅಮೀನಗಡ ಪ್ರಭುಶಂಕರೇಶ್ವರ ಮಠದ ಶ್ರೀ ಶಂಕರರಾಜೇಂದ್ರ ಸ್ವಾಮೀಜಿ ಮತ್ತು ಗರಗ ಆರಕ್ಷಕ ಠಾಣೆ ಪಿಎಸ್‌ಐ ವೀರೇಶ ಮಠಪತಿ ಮಾತನಾಡಿದರು. ನರೇಂದ್ರ ಮಳೆಪ್ಪಜ್ಜನವರ ಮಠದ ಸಂಗಮೇಶ ಅಜ್ಜನವರು ಉಪಸ್ಥಿತರಿದ್ದರು.
ಗರಗದ ಶ್ರೀ ಮಡಿವಾಳೇಶ್ವರ ಟ್ರಸ್ಟ್‌ ಕಮಿಟಿ ಅಧ್ಯಕ್ಷ ಅಶೋಕ ದೇಸಾಯಿ ಮಹಾಪ್ರಸಾದ ಸೇವೆ ಸಲ್ಲಿಸಿದರು. ಶಾಸಕ ಅಮೃತ ದೇಸಾಯಿ, ಮಾಜಿ ಶಾಸಕಿ ಸೀಮಾ ಮಸೂತಿ, ಜಿಪಂ ಸದಸ್ಯ ಕಲ್ಲಪ್ಪ ಪುಡಕಲಕಟ್ಟಿ, ಗ್ರಾಪಂ ಅಧ್ಯಕ್ಷ ಮಹಾವೀರ ಅಷ್ಟಗಿ, ವೀರಣ್ಣಾ ಪರಾಂಡೆ, ರವಿ ಯಲಿಗಾರ, ಪರಮೇಶ್ವರ ದೊಡವಾಡ, ರಾಮಲಿಂಗಪ್ಪ ನವಲಗುಂದ, ತವನಪ್ಪ ಅಷ್ಟಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಮಂಜುಳಾ ಬೆನಕನಹಳ್ಳಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಫಕ್ಕೀರಪ್ಪ ಮಡಿವಾಳರ ಸ್ವಾಗತಿಸಿ, ವಂದಿಸಿದರು. ಬಸವರಾಜ ಕಬ್ಬೂರ ನಿರೂಪಿಸಿದರು.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.