ಸೋತಾಗ ಚಿಕ್ಕನಗೌಡ್ರ ನೀರಿನ ಸಂಪರ್ಕ ಸ್ಥಗಿತಗೊಳಿಸಿದ್ದು ನೆನಪಿದೆಯಾ?: ಡಿಕೆಶಿ
Team Udayavani, May 13, 2019, 11:16 AM IST
ಹುಬ್ಬಳ್ಳಿ: ಈ ಹಿಂದೆ ಚುನಾವಣೆಯಲ್ಲಿ ಸೋತ ಸಂದರ್ಭದಲ್ಲಿ ಎಸ್.ಐ. ಚಿಕ್ಕನಗೌಡ್ರ ಕಡಿಮೆ ಮತಗಳು ಬಂದ ಕೆಲ ಗ್ರಾಮಗಳಿಗೆ ಕುಡಿಯುವ ನೀರಿನ ಸಂಪರ್ಕ ಸ್ಥಗಿತಗೊಳಸಿದ್ದು, ಬೂತ್ ಅಧ್ಯಕ್ಷರಿಂದ ಹಣ ವಾಪಸ್ ಪಡೆದಿರುವುದು ನಿಮಗೆಲ್ಲರಿಗೆ ನೆನಪಿದೆಯಾ ಎಂದು ಸಚಿವ ಡಿ.ಕೆ. ಶಿವಕುಮಾರ ಹೇಳಿದರು.
ನೂಲ್ವಿ ಗ್ರಾಮದಲ್ಲಿ ಪಾದಯಾತ್ರೆಯಲ್ಲಿ ಮಾತನಾಡಿದ ಅವರು, ಜನರ ನೀರಿಗಾಗಿ ಸಾಕಷ್ಟು ಹೋರಾಟ ಮಾಡಿದ ನಮ್ಮ ಸಿ.ಎಸ್. ಶಿವಳ್ಳಿ ಒಂದೆಡೆಯಾದರೆ, ತಮ್ಮ ಸೋಲಿಗೆ ಕಾರಣವಾದ ಗ್ರಾಮಗಳ ನೀರಿನ ಸಂಪರ್ಕ ಸ್ಥಗಿತೊಳಿಸುವ ಚಿಕ್ಕನಗೌಡರ ಹಾಗೂ ಬಿಜೆಪಿ ನಾಯಕರ ಮನಸ್ಥಿತಿಯನ್ನು ಈ ಕ್ಷೇತ್ರದ ಜನರು ಅರ್ಥ ಮಾಡಿಕೊಳ್ಳಬೇಕು ಎಂದರು.
ಸಾಲಗಾರರಂತೆ ನಿಮ್ಮ ಸೇವೆ: ಕುಂದಗೋಳ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕೆ ಇಡೀ ಮೈತ್ರಿ ಸರಕಾರವೇ ಶ್ರಮಿಸುತ್ತದೆ. ಮತಗಳನ್ನು ಸಾಲದ ಮೂಲಕ ನಮ್ಮ ಮೈತ್ರಿ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಅವರಿಗೆ ನೀಡಿ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ ಆದಿಯಾಗಿ ಈ ಕ್ಷೇತ್ರದ ಸಾಲಗಾರರಾಗಿ ನಿಮ್ಮ ಸೇವೆ ಮಾಡುತ್ತೇವೆ ಎಂದರು. ನಮ್ಮ ಸರಕಾರ ಐದು ವರ್ಷಗಳ ಕಾಲ ಆಡಳಿತ ಮಾಡುತ್ತದೆ. ಹಿಂದೆ ಆಪರೇಶನ್ ಕಮಲ ಮಾಡಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಹದಗೆಡಿಸಿದರು. ಇಂದು ನಮಗೂ ಆ ಶಕ್ತಿಯಿದೆ. ಆದರೆ ಅಧಿಕಾರ ದುರುಪಯೋಗ ಮಾಡಿಕೊಳ್ಳುವುದಿಲ್ಲ ಎಂದರು.
ಇಂದು ಕುಂದಗೋಳದಲ್ಲಿ ಸಿಎಂ ಕುಮಾರಸ್ವಾಮಿ ಪ್ರಚಾರ
ಬೆಂಗಳೂರು: ಕುಂದಗೋಳ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷಗಳ ಅಭ್ಯರ್ಥಿ ಕುಸುಮಾವತಿ ಪರ ಸೋಮವಾರ ಸಿಎಂ ಕುಮಾರಸ್ವಾಮಿ ಪ್ರಚಾರ ನಡೆಸಲಿದ್ದಾರೆ ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಸೋಮವಾರ ವಿಶೇಷ ವಿಮಾನದಲ್ಲಿ ಹುಬ್ಬಳ್ಳಿಗೆ ಆಗಮಿಸುವ ಸಿಎಂ ಸಂಜೆ 5 ಗಂಟೆಗೆ ಕುಂದಗೋಳದಲ್ಲಿ ಹಾಗೂ 7 ಗಂಟೆಗೆ ಹುಬ್ಬಳ್ಳಿ ತಾಲೂಕಿನ ವರೂರಿನಲ್ಲಿ ಸಮಾವೇಶದಲ್ಲಿ ಭಾಗವಹಿಸುವರು ಎಂದು ತಿಳಿಸಿದ್ದಾರೆ. ಇದಕ್ಕೂ ಮೊದಲು ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ್ದ ಡಿಕೆಶಿ, ತಮ್ಮನ್ನು ಪೇಪರ್ ಟೈಗರ್ ಎಂದು ಆರೋಪಿಸಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರಗೆ ತಿರುಗೇಟು ನೀಡಿದ್ದು, ನಾನು ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ನನಗೆ ಯಾವಾಗ ಏನು ಮಾಡಬೇಕೆಂದು ಗೊತ್ತಿದೆ ಎಂದು ತಿರುಗೇಟು ನೀಡಿದ್ದಾರೆ. ಅಲ್ಲದೇ ಮಂಡ್ಯದಲ್ಲಿ ಮೈತ್ರಿ ಧರ್ಮ ಪಾಲನೆ ಮಾಡದವರ ವಿರುದ್ಧ ಕ್ರಮ ಕೈಗೊಳ್ಳುವುದು ಕೆಪಿಸಿಸಿ ಅಧ್ಯಕ್ಷರಿಗೆ ಬಿಟ್ಟ ವಿಚಾರ ಎಂದು ಹೇಳಿದರು.
• ಡಿ.ಕೆ. ಶಿವಕುಮಾರ, ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ