ಹುಬ್ಬಳ್ಳಿಗೂ ಬಂತು ಬಾಡಿಗೆ ವಾಹನ ಸೇವಾ ಸಂಸ್ಥೆ ಡ್ರೈವ್‌ಜಿ


Team Udayavani, Jan 30, 2019, 11:12 AM IST

30-january-23.jpg

ಹುಬ್ಬಳ್ಳಿ: ದ್ವಿತೀಯ ಸ್ತರದ ನಗರವಾಗಿರುವ ಹುಬ್ಬಳ್ಳಿ-ಧಾರವಾಡ ತ್ವರಿತಗತಿಯಲ್ಲಿ ಬೆಳೆಯುತ್ತಿದೆ. ಒಂದೆಡೆ ವಿಮಾನ ನಿಲ್ದಾಣಕ್ಕೆ ಬಂದು ಹೋಗುವ ವಿಮಾನಗಳ ಸಂಖ್ಯೆ ಹೆಚ್ಚುತ್ತಿದ್ದರೆ ಇನ್ನೊಂದೆಡೆ ನಗರದ ರಸ್ತೆಗಳು ಅಭಿವೃದ್ಧಿಯಾಗುತ್ತಿವೆ. ವಾಹನಗಳ ದಟ್ಟಣೆ ದಿನದಿಂದ ದಿನಕ್ಕೆ ವೃದ್ಧಿಸುತ್ತಿದೆ. ಬಾಡಿಗೆ ವಾಹನಗಳನ್ನು ನೀಡುವ ಉದ್ಯಮದಲ್ಲಿ ತನ್ನದೇ ಆದ ವೈಶಿಷ್ಟ್ಯತೆ ಗಳಿಸಿಕೊಂಡಿರುವ ಡ್ರೈವಜಿ ಇಂಡಿಯಾ ಟ್ರಾವೆಲ್ಸ್‌ ಪ್ರೈವೇಟ್ ಲಿಮಿಟೆಡ್‌ ಸಂಸ್ಥೆ ಸೇವೆ ನೀಡಲು ಸಜ್ಜಾಗಿದೆ.

ಅವಳಿ ನಗರದಲ್ಲಿ ಡ್ರೈವ್‌ಜಿ ಇಂಡಿಯಾ ಟ್ರಾವೆಲ್ಸ್‌ ಪ್ರೈವೇಟ್ ಲಿಮಿಟೆಡ್‌ ಬಾಡಿಗೆ ಬೈಕ್‌ಗಳು ಹಾಗೂ ಬಾಡಿಗೆ ಕಾರುಗಳನ್ನು ಸೇವೆ ಒದಗಿಸಲಿದೆ. ಫೆ. 1ರಿಂದ ಅವಳಿ ನಗರದ ಜನರು ತಮ್ಮಿಷ್ಟದ ವಾಹನವನ್ನು ಚಾಲನೆ ಮಾಡುವ ಅವಕಾಶ ಲಭ್ಯವಾಗಲಿದೆ. ನಗರದ ಗಣೇಶಪೇಟ ವೃತ್ತ ಸಮೀಪದ ಲಕ್ಷ್ಮೀ ಬಾಲಕೃಷ್ಣ ಸ್ಕ್ವೇರ್‌ (ಹರ್ಷ ಕಾಂಪ್ಲೆಕ್ಸ್‌)ನಲ್ಲಿ ಸಂಸ್ಥೆಯ ಶಾಖಾ ಕಚೇರಿ ಆರಂಭಗೊಳ್ಳಲಿದೆ. ಈಗಾಗಲೇ 100 ಹೊಂಡಾ ಆಕ್ಟಿವಾ 5ಜಿ ಸ್ಕೂಟರ್‌ಗಳು ಬಂದಿದ್ದು, ನಗರದ ಜನರ ಬೇಡಿಕೆಗೆ ಅನುಗುಣವಾಗಿ ವಿವಿಧ ವಾಹನಗಳನ್ನು ರಸ್ತೆಗಿಳಿಸಲು ಸಂಸ್ಥೆ ನಿರ್ಧರಿಸಿದೆ.

ಬೆಂಗಳೂರಿನಲ್ಲಿ ಕೇಂದ್ರ ಕಚೇರಿ ಹೊಂದಿದ ಸಂಸ್ಥೆ ಈಗಾಗಲೇ ದೊಡ್ಡ ನಗರಗಳಲ್ಲದೇ ದೇಶದ ಪ್ರಮುಖ ದ್ವಿತೀಯ ಸ್ತರದ ನಗರಗಳಲ್ಲಿ ಸೇವೆ ಒದಗಿಸುತ್ತಿದೆ. ಬೆಂಗಳೂರು, ಮುಂಬೈ, ಪುಣೆ, ನಾಗಪುರ, ಕೊಚ್ಚಿ, ಮಂಗಳೂರು, ಮೈಸೂರು, ಹೈದರಾಬಾದ್‌ನಲ್ಲಿ ಈಗಾಗಲೇ ವಾಹನಗಳನ್ನು ಬಾಡಿಗೆ ನೀಡುವ ಉದ್ಯಮದಲ್ಲಿ ಜನಮನ್ನಣೆ ಗಳಿಸಿದೆ.

ಎಚ್-ಡಿ ಬಿಆರ್‌ಟಿಎಸ್‌ ಅನುಷ್ಠಾನದಿಂದಾಗಿ ಅವಳಿ ನಗರದ ಮಧ್ಯೆ ರಸ್ತೆ ಅಗಲೀಕರಣಗೊಂಡಿದೆ. ಅವಳಿ ನಗರದ ಮಧ್ಯೆ ಸಹಸ್ರಾರು ಜನರು ಸಂಚರಿಸುತ್ತಾರೆ. ಹಲವಾರು ಕಾರಣಗಳಿಂದಾಗಿ ತಮ್ಮ ಬೈಕ್‌ ಅಥವಾ ಕಾರು ಬಳಕೆ ಮಾಡಲು ಸಾಧ್ಯವಾಗದವರು ಸಾರ್ವಜನಿಕ ಸಾರಿಗೆ ಅವಲಂಬಿಸುವುದು ಅನಿವಾರ್ಯವಾಗುತ್ತದೆ. ಬಸ್‌ಗಳಿಗೆ ಕಾಯುತ್ತ ನಿಲ್ಲಬೇಕಾಗುತ್ತದೆ. ಇದನ್ನು ಮನಗಂಡು ಡ್ರೈವ್‌ಜಿ ಸಂಸ್ಥೆ ಹುಬ್ಬಳ್ಳಿ-ಧಾರವಾಡಕ್ಕೂ ಸೇವೆ ವಿಸ್ತರಿಸಲು ನಿರ್ಧರಿಸಿದೆ.

ಏನಿದು ಬಾಡಿಗೆ ವಾಹನ ಉದ್ಯಮ
ಗಂಟೆಗಳ ಆಧಾರದ ಮೇಲೆ ದ್ವಿಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳನ್ನು ಬಾಡಿಗೆಗೆ ನೀಡಲಾಗುತ್ತದೆ. 18 ವರ್ಷಕ್ಕಿಂತ ಹೆಚ್ಚಿನ ವಯೋಮಿತಿಯ ಹಾಗೂ ಚಾಲನಾ ಲೈಸೆನ್ಸ್‌ ಹೊಂದಿರುವವವರು ವಾಹನ ಬಾಡಿಗೆ ಪಡೆದುಕೊಳ್ಳಬಹುದಾಗಿದೆ. ಡ್ರೈವ್‌ಜಿ ವಾಹನ ಬಾಡಿಗೆ ಪಡೆಯುವ ಪ್ರಕ್ರಿಯೆ ಸರಳೀಕರಿಸಿದೆ. ವಾಹನಗಳಿಗಾಗಿ ಕಾಯಬೇಕಾಗಿಲ್ಲ. ಸ್ಮಾರ್ಟ್‌ ಫೋನ್‌ನಿಂದ ಡ್ರೈವಜಿ ಅಪ್ಲಿಕೇಶನ್‌ ಮೂಲಕ ವಾಹನ ಪಡೆದುಕೊಳ್ಳಬಹುದು. ಇಲ್ಲವೇ ವೆಬ್‌ಸೈಟ್ ಮೂಲಕವೂ ಬುಕ್‌ ಮಾಡಬಹುದು. ಅಗತ್ಯ ದಾಖಲೆ ಒದಗಿಸಿದರೆ ಬಳಕೆದಾರರಿರುವ ಸ್ಥಳಕ್ಕೆ ಬಂದು ವಾಹನ ನೀಡಲಾಗುತ್ತದೆ. ಒಮ್ಮೆ ಹೆಸರು ನೋಂದಣಿಯಾದರೆ ವಾಹನ ಬಾಡಿಗೆ ಪಡೆಯುವುದು ಅತ್ಯಂತ ಸುಲಭ. ಇದೇ ಕಾರಣಕ್ಕೆ ಡ್ರೈವ್‌ಜಿ ಸಂಸ್ಥೆ ಸೇವೆ ಒದಗಿಸುವ ನಗರಗಳಲ್ಲಿ ಮನ್ನಣೆ ಪಡೆದುಕೊಂಡಿದೆ.

ದರಪಟ್ಟಿ ಹೀಗಿದೆ
ಹೊಂಡಾ ಆಕ್ಟಿವಾ ದ್ವಿಚಕ್ರ ವಾಹನವನ್ನು ಕನಿಷ್ಟ 6 ಗಂಟೆ ಬಾಡಿಗೆ ಪಡೆಯಬೇಕಾಗುತ್ತದೆ. ಪ್ರತಿ ಗಂಟೆಗೆ 15 ರೂ. ಬಾಡಿಗೆ ನಿಗದಿಪಡಿಸಲಾಗಿದೆ. ವಾರದ ದಿನಗಳಲ್ಲಿ 10ರೂ.ನಿಂದ 130ರೂ.ವರೆಗೆ ಪ್ರತಿ ಗಂಟೆಗೆ ಬೈಕ್‌ ಹಾಗೂ ಎಸ್‌ಯುವಿ ಕಾರುಗಳವರೆಗೆ ವಿವಿಧ ವಾಹನ ಬಾಡಿಗೆ ಪಡೆದುಕೊಳ್ಳಬಹುದು. ವಾಹನ ಪಡೆಯಲು ಯಾವುದೇ ಭದ್ರತಾ ಠೇವಣಿ ಇಡಬೇಕಾಗಿಲ್ಲ. ವಾರಾಂತ್ಯದಲ್ಲಿ ವಾಹನಗಳ ಬಾಡಿಗೆ ದರ ಹೆಚ್ಚಾಗುತ್ತದೆ. ಇಬ್ಬರು ಶೇರಿಂಗ್‌ ಮೂಲಕ ವಾಹನ ಬಾಡಿಗೆ ಪಡೆಯಬಹುದು.

ಟಾಪ್ ನ್ಯೂಸ್

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.