![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ನಗರ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಲು ಮನವಿ
Team Udayavani, Jul 5, 2018, 5:24 PM IST
![5-july-20.jpg](https://www.udayavani.com/wp-content/uploads/2018/07/5/5-july-20.jpg)
ಬೆಳಗಾವಿ: ಬೆಳಗಾವಿ ದಕ್ಷಿಣ ಮತಕ್ಷೇತ್ರದ ಒಳಚರಂಡಿ ಹಾಗೂ ವಸತಿ ಸಮಸ್ಯೆ ಸೇರಿದಂತೆ ಹತ್ತು ಹಲವಾರು ಸಮಸ್ಯೆ ಬಗೆಹರಿಸಲು ಹೆಚ್ಚಿನ ಅನುದಾನ ನೀಡಬೇಕು ಎಂದು ಶಾಸಕ ಅಭಯ ಪಾಟೀಲ ನಗರಾಭಿವೃದ್ಧಿ ಹಾಗೂ ವಸತಿ ಸಚಿವ ಯು.ಟಿ. ಖಾದರ ಅವರಿಗೆ ಮನವಿ ಮಾಡಿದರು. ಬುಧವಾರ ವಿಧಾನ ಸಭೆಯಲ್ಲಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಶಾಸಕರು, ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಒಳಚರಂಡಿ ಸಮಸ್ಯೆಯಿದೆ. ಇದಕ್ಕೆ ಕೂಡಲೇ ಪರಿಹಾರ ನೀಡಬೇಕು. ಜೊತೆಗೆ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಎಲ್ಲರಿಗೂ ಸರಿಸಮನಾಗಿ ನೀರು ಹಂಚಿಕೆ ಮಾಡಲು ಕ್ರಮ ಜರುಗಿಸಬೇಕು ಎಂದು ಹೇಳಿದರು.
ನಗರದಲ್ಲಿ ಈಗ ಕೇವಲ 10 ವಾರ್ಡ್ಗಳಲ್ಲಿ ನಿರಂತರ ನೀರು ಪೂರೈಕೆ ವ್ಯವಸ್ಥೆ ಇದೆ. ಈ ಯೋಜನೆಯನ್ನು ಎಲ್ಲ 58 ವಾರ್ಡ್ ಗಳಲ್ಲಿ ವಿಸ್ತರಿಸಲು ಮರು ಟೆಂಡರ್ ಕರೆದು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು. ದಕ್ಷಿಣ ಮತಕ್ಷೇತ್ರದಲ್ಲಿ ನೇಕಾರ ಕುಟುಂಬಗಳಿಗೆ ವಿಶೇಷವಾದ ವಸತಿ ಸಮುಚ್ಚಯ ನಿರ್ಮಿಸಿ, ದಕ್ಷಿಣ ಮತಕ್ಷೇತ್ರದ ಬಡ ಕುಟುಂಬಗಳಿಗೆ ಹೆಚ್ಚುವರಿ ಆಶ್ರಯ ಮನೆಗಳನ್ನು ಮಂಜೂರು ಮಾಡಬೇಕು. ನಗರದಲ್ಲಿ ಸ್ವಚ್ಛತಾ ಕಾಮಗಾರಿಗಳು ಸರಿಯಾಗಿ ನಡೆಯುತ್ತಿಲ್ಲ ಸ್ಮಾರ್ಟ್ಸಿಟಿ ಪಟ್ಟಿಗೆ ಸೇರಿರುವ ಬೆಳಗಾವಿ ನಗರದಲ್ಲಿ ಸ್ವಚ್ಛತೆ ಕಾಣುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಯು. ಟಿ. ಖಾದರ ಮುಂದಿನ ವಾರ ಬೆಳಗಾವಿಗೆ ಭೇಟಿ ನೀಡುವುದಾಗಿ ಹೇಳಿ, ನಗರದ ಸ್ವಚ್ಛತಾ ಕಾಮಗಾರಿ ಸೇರಿದಂತೆ ಪಾಲಿಕೆಯ ಪ್ರಗತಿ ಪರಶೀಲನೆ ಮಾಡುವ ಮೂಲಕ ಅಲ್ಲಿನ ಸಮಸ್ಯೆಗಳ ನಿವಾರಣೆಗೆ ಕ್ರಮ ಕೈಕೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದು ಶಾಸಕ ಅಭಯ ಪಾಟೀಲ ಪ್ರಕಟಣೆ ಮೂಲಕ ತಿಳಿಸಿದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.