ಅರಣ್ಯ ಅತಿಕ್ರಮಣದಾರರಿಗೆ ಒಕ್ಕಲೆಬ್ಬಿಸದಿರಲು ಮನವಿ


Team Udayavani, Aug 22, 2018, 5:32 PM IST

22-agust-20.jpg

ಶಿರಹಟ್ಟಿ: ತಾಲೂಕಿನ ಕೆರೆಹಳ್ಳಿ ತಾಂಡಾದ ಜನತೆ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಸುಮಾರು ವರ್ಷಗಳಿಂದ ವಾಸಿಸುತ್ತಿದ್ದಾರೆ. ಇವರಿಗೆ ಅರಣ್ಯ ಹಕ್ಕು ನಿಯಮದಡಿ ಮತ್ತು ಪಾರಂಪರಿಕ ಅರಣ್ಯ ವಾಸಿಗಳ ಅರಣ್ಯ ಹಕ್ಕು ಅಧಿನಿಯಮದಂತೆ ವಾಸಿಸಲು ಅನುಕೂಲ ಕಲ್ಪಿಸಬೇಕೆಂದು ಆಗ್ರಹಿಸಿ ತಾಂಡಾದ ಜನತೆ ಹಾಗೂ ತಾಂಡಾ ಅಭಿವೃದ್ಧಿ ನಿಗಮದ ಜಿಲ್ಲಾಧ್ಯಕ್ಷ ಅಶೋಕ ಲಮಾಣಿ ಅವರು ಉಪತಹಶೀಲ್ದಾರ್‌ ಜಿ.ಪಿ. ಪೂಜಾರಗೆ ಮನವಿ ಸಲ್ಲಿಸಿದರು.

ಅರಣ್ಯ ಇಲಾಖೆ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ವಾಸಿಸುವ ತಾಂಡಾದ ಜನತೆಯನ್ನು ಅರಣ್ಯ ಇಲಾಖೆ ಒಕ್ಕಲೆಬ್ಬಿಸುವ ಕಾರ್ಯಕ್ಕೆ ಮುಂದಾಗಿದೆ. ಇದು ಅವರ ಜೀವನೋಪಾಯಕ್ಕೆ ತೊಂದರೆಯಾಗಿದೆ. ಮೇಲಿಂದ ಮೇಲೆ ಇಲಾಖೆಯವರು ಜನರಿಗೆ ತೊಂದರೆ ನೀಡುತ್ತಿದ್ದು, ಅಲ್ಲಿಂದ ಕಾಲ್ಕಿಳುವಂತೆ ಒತ್ತಾಯಿಸುತ್ತಿದ್ದಾರೆ. ಜೊತೆಗೆ ಅರಣ್ಯ ಇಲಾಖೆ ಅರಣ್ಯದಲ್ಲಿ ವಾಸಿಸುವ ಅರಣ್ಯ ಹಕ್ಕು ಕಾಯ್ದೆ ಮತ್ತು ಪಾರಂಪರಿಕ ಅರಣ್ಯ ವಾಸಿಗಳ ಅರಣ್ಯ ಹಕ್ಕು ಕಿತ್ತುಕೊಳ್ಳುತ್ತಿದ್ದು, ಅವರ ಜೀವನೋಪಾಯಕ್ಕೆ ತೊಂದರೆಯನ್ನುಂಟು ಮಾಡುತ್ತಿದ್ದಾರೆ. ಅವರಿಗೆ ಜೀವಿಸಲು ಅವಕಾಶ ಮತ್ತು ಜೀವನೋಪಾಯಕ್ಕೆ ಜಮೀನು ಒದಗಿಸಬೇಕು ಎಂದು ಮನವಿ ಮಾಡಿದರು.

ಇಲಾಖೆಯವರು ಅರಣ್ಯ ಹಕ್ಕು ಉಲ್ಲಂಘನೆ ಮಾಡುತ್ತಿದ್ದಾರೆ. ಸರಕಾರ ಅರಣ್ಯದಲ್ಲಿ ವಾಸಿಸುವ ಹಕ್ಕುನ್ನು ಅವರಿಗೆ ಒದಗಿಸಿದ್ದರೂ ಅರಣ್ಯ ಇಲಾಖೆ ಮೊಂಡು ಧೋರಣೆ ಅನುಸರಿಸುತ್ತಿದೆ. ಭಾರತ ಸರಕಾರ 2006 ಮತ್ತು 2008 ನಿಯಮಗಳ ತಿದ್ದುಪಡಿ 2012ರ ಪ್ರಕಾರ ಪರಿಶಿಷ್ಟ ಪಂಗಡ ಹಾಗೂ ಇತರೆ ಪಾರಂಪರಿಕ ಅರಣ್ಯ ವಾಸಿಗಳಿಗೆ ವಾಸಿಸಲು ಅವಕಾಶ ಕಲ್ಪಿಸಿದೆ. ಅದಕ್ಕಾಗಿ ಊಳುವವನೇ ಭೂಮಿ ಒಡೆಯ ಎಂಬ ನಿಯಮದಂತೆ ಲಂಬಾಣಿ ಜನಾಂಗಕ್ಕೆ ಜೀವಿಸಲು ಮತ್ತು ಜೀವನೋಪಾಯಕ್ಕೆ ಅವಕಾಶ ನೀಡಬೇಕು.

ಮುಗ್ದ ಜನರ ಮೇಲೆ ಇಲಾಖೆ ನಡೆಸುತ್ತಿರುವ ದೌರ್ಜನ್ಯ ಸಹಿಸಲಾಗುವುದಿಲ್ಲ. ಆದ್ದರಿಂದ ಈ ತಕ್ಷಣವೇ ಅರಣ್ಯಾಧಿಕಾರಿಗಳಿಗೆ ಲಂಬಾಣಿ ಜನಾಂಗಕ್ಕೆ ಜೀವನಕ್ಕೆ ಮತ್ತು ಜೀವನೋಪಾಯಕ್ಕಾಗಿ ಅಲ್ಲಿಯೇ ಮುಂದುವರೆಸಲು ಆದೇಶಿಸಬೇಕೆಂದು ಆಗ್ರಹಿಸಿ ಉಪ ತಹಶೀಲ್ದಾರ್‌ ಗೆ ಮನವಿ ಸಲ್ಲಿಸಿದರು.

ತಾಪಂ ಸದಸ್ಯ ದೇವಪ್ಪ ಲಮಾಣಿ, ತಾಪಂ ಮಾಜಿ ಸದಸ್ಯ ಜಾನು ಲಮಾಣಿ, ಶಂಕರ ಪವಾರ, ಶಿವಣ್ಣ ಲಮಾಣಿ, ಪಾಂಡಪ್ಪ ಲಮಾಣಿ, ಧನಸಿಂಗ್‌ ಲಮಾಣಿ, ಶಂಕ್ರಪ್ಪ ಲಮಾಣಿ, ಮಲ್ಲೇಶಪ್ಪ ಲಮಾಣಿ,  ದೀಪಕ್‌ ಲಮಾಣಿ, ಸುಮಿತ್ರಾ ಲಮಾಣಿ, ಗೌರವ್ವ ಲಮಾಣಿ, ಚಿನ್ನವ್ವ ಲಮಾಣಿ, ಗಂಗವ್ವ ಲಮಾಣಿ, ಲಕ್ಷ್ಮವ್ವ ಲಮಾಣಿ, ಪಾರವ್ವ ಲಮಾಣಿ, ಪೂಜಾ ಲಮಾಣಿ, ಥಾವರೆಪ್ಪ ಲಮಾಣಿ, ಶಿವಪ್ಪ ಲಮಾಣಿ, ರಮೇಶ ಲಮಾಣಿ, ಹೂಬಪ್ಪ ಲಮಾಣಿ, ಮೇಘಪ್ಪ ಲಮಾಣಿ, ಡಾಕಪ್ಪ ಲಮಾಣಿ ಹಾಗೂ ಕೆರೆಹಳ್ಳಿ ತಾಂಡಾದ ಜನರು ಮನವಿ ಸಲ್ಲಿಸುವ ನಿಯೋಗದಲ್ಲಿ ಇದ್ದರು. 

ಟಾಪ್ ನ್ಯೂಸ್

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Road Mishap ಕಾರ್ನಾಡು: ಢಿಕ್ಕಿ; ರಸ್ತೆ ಬದಿ ಉರುಳಿ ಬಿದ್ದ ಕಾರು

Road Mishap ಕಾರ್ನಾಡು: ಢಿಕ್ಕಿ; ರಸ್ತೆ ಬದಿ ಉರುಳಿ ಬಿದ್ದ ಕಾರು

Haleangadi ನಾಪತ್ತೆಯಾದ ಯುವಕನ ಬಟ್ಟೆ ಅಣೆಕಟ್ಟಿನ ಬಳಿ ಪತ್ತೆ

Haleangadi ನಾಪತ್ತೆಯಾದ ಯುವಕನ ಬಟ್ಟೆ ಅಣೆಕಟ್ಟಿನ ಬಳಿ ಪತ್ತೆ

utದಿ| ದಾಮೋದರ ಆರ್‌. ಸುವರ್ಣ ಸ್ಮಾರಕ; ಕುಂಜತ್ತಬೈಲಿನಲ್ಲಿ “ಬಿಲ್ಲವ ಹಾಸ್ಟೆಲ್‌’ ಉದ್ಘಾಟನೆ

ದಿ| ದಾಮೋದರ ಆರ್‌. ಸುವರ್ಣ ಸ್ಮಾರಕ; ಕುಂಜತ್ತಬೈಲಿನಲ್ಲಿ “ಬಿಲ್ಲವ ಹಾಸ್ಟೆಲ್‌’ ಉದ್ಘಾಟನೆ

ರಾಜ್ಯ ಆ್ಯತ್ಲೆಟಿಕ್‌ ಸಂಸ್ಥೆ : ಉಪಾಧ್ಯಕ್ಷರಾಗಿ ಮಹೇಶ್‌ ಠಾಕೂರ್‌ ಆಯ್ಕೆ

Udupi ರಾಜ್ಯ ಆ್ಯತ್ಲೆಟಿಕ್‌ ಸಂಸ್ಥೆ : ಉಪಾಧ್ಯಕ್ಷರಾಗಿ ಮಹೇಶ್‌ ಠಾಕೂರ್‌ ಆಯ್ಕೆ

Kundapura ವನವಾಸ: ಯುವಕ ಚೇತರಿಕೆ: ಫಲ ನೀಡಿತು ಮನೆಯವರ ಪ್ರಾರ್ಥನೆ

Kundapura ವನವಾಸ: ಯುವಕ ಚೇತರಿಕೆ: ಫಲ ನೀಡಿತು ಮನೆಯವರ ಪ್ರಾರ್ಥನೆ

saಸೌರಶಕ್ತಿಯ ಸದುಪಯೋಗ: ಸೆಲ್ಕೋ ಕಚೇರಿಗೆ ಆಫ್ರಿಕಾ ಪ್ರತಿನಿಧಿಗಳ ಭೇಟಿ

Manipal ಸೌರಶಕ್ತಿಯ ಸದುಪಯೋಗ: ಸೆಲ್ಕೋ ಕಚೇರಿಗೆ ಆಫ್ರಿಕಾ ಪ್ರತಿನಿಧಿಗಳ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

ರಾಷ್ಟ್ರಪತಿ ಹೆಸರಲ್ಲಿ ಕಾಂಗ್ರೆಸ್ ನಿಂದ ಚಿಲ್ಲರೆ ರಾಜಕಾರಣ: ಪ್ರಹ್ಲಾದ ಜೋಶಿ

NDA ಮೈತ್ರಿಕೂಟದ ಹೆಸರು ಬದಲಾವಣೆ ಮಾಡುವ ಅವಶ್ಯಕತೆ ಇಲ್ಲ: ಪ್ರಹ್ಲಾದ್ ಜೋಶಿ

NDA ಮೈತ್ರಿಕೂಟದ ಹೆಸರು ಬದಲಾವಣೆ ಮಾಡುವ ಅವಶ್ಯಕತೆ ಇಲ್ಲ: ಪ್ರಹ್ಲಾದ್ ಜೋಶಿ

Dharwad: ದೇಶದಲ್ಲಿ ಏಕರೂಪ ಶಿಕ್ಷಣ ವ್ಯವಸ್ಥೆ ಜಾರಿ ಅಗತ್ಯ

Dharwad: ದೇಶದಲ್ಲಿ ಏಕರೂಪ ಶಿಕ್ಷಣ ವ್ಯವಸ್ಥೆ ಜಾರಿ ಅಗತ್ಯ

Hubli; ಮನೆ ಮಂದಿಯನ್ನು ಬೆದರಿಸಿ 70 ಲಕ್ಷ ರೂ. ಮೌಲ್ಯದ ನಗದು- ಚಿನ್ನ ಕಳವು

Hubli; ಮನೆ ಮಂದಿಯನ್ನು ಬೆದರಿಸಿ 70 ಲಕ್ಷ ರೂ. ಮೌಲ್ಯದ ನಗದು- ಚಿನ್ನ ಕಳವು

accident

Dharwad: ಗಣೇಶೋತ್ಸವಕ್ಕೆ ಹೋಗಿದ್ದ ಪೊಲೀಸ್ ಪೇದೆ ಅಪಘಾತದಲ್ಲಿ ಮೃತ್ಯು

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

jds

JDS: ಮೈತ್ರಿಗೆ ಮುನಿಸು: ಶಾಸಕರು, ನಾಯಕರಿಗೆ ಅಸಮಾಧಾನ ಮೂಡಿಸಿದ ಗೆಳೆತನ

exam

PUC ಗೆ ಆಂತರಿಕ ಅಂಕ: ಪ್ರಶ್ನೆಪತ್ರಿಕೆಗೆ ಹೊಸ ರೂಪ

CONGRESS FLAG IMP

Congress: ಸಿಎಂ, ಡಿಸಿಎಂ ಚರ್ಚೆ ಸಲ್ಲದು: ಹೈಕಮಾಂಡ್‌

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Puttur: ಕಾಲೇಜು ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

Modi

Swatchhata Abhiyan: ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳಿ: ಮೋದಿ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.