ಮೂಲ ಸೌಲಭ್ಯ ಒದಗಿಸಲು ಆಗ್ರಹ 


Team Udayavani, Aug 4, 2018, 5:30 PM IST

4-agust-21.jpg

ಬೈಲಹೊಂಗಲ: ನೇಸರಗಿ ಗ್ರಾಮದಲ್ಲಿ ಬೀದಿದೀಪ, ಕುಡಿವ ನೀರು ಸೌಲಭ್ಯ, ರಸ್ತೆ ಬದಿಯ ಕಸ ತೆಗೆಸುವುದು, ಶೌಚಾಲಯ ನಿರ್ಮಾಣ, ಕುಡಿಯುವ ನೀರಿನ ವ್ಯವಸ್ಥೆ, ರಸ್ತೆ ಬದಿಯ ಮಲಮೂತ್ರ ವಿಸರ್ಜನೆ ನಿಲ್ಲಿಸಲು ಆಗ್ರಹಿಸಿ ಜನಜಾಗರಣ ಶ್ರಮಿಕ ಅಭಿವೃದ್ಧಿ ಸಂಘದ ಸದಸ್ಯರು ಶುಕ್ರವಾರ ಗ್ರಾಪಂ ಗೆ ಮುತ್ತಿಗೆ ಹಾಕಿ ಉಪವಾಸ ಸತ್ಯಾಗ್ರಹ ನಡೆಸಿ ಪ್ರತಿಭಟಿಸಿದರು.

ದೇಶನೂರ ಫಾ.ಮೆನಿನೋ, ನೇಸರಗಿ ಫಾ.ಪ್ರಕಾಶ, ಫಾ.ಥಾಮಸ್‌ ಚನ್ನಕಲಾ ಮಾತನಾಡಿ, ಹಲವಾರು ವರ್ಷಗಳಿಂದ ನೇಸರಗಿ ವೃತ್ತದಲ್ಲಿರುವ ಕ್ರಿಸ್ತ ನಿವಾಸ ಸುತ್ತಮುತ್ತಲಿನ ನಿವಾಸಿಗಳಿಗೆ ಸರಿಯಾದ ಬೀದಿದೀಪಗಳಿಲ್ಲ. ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಅನೈರ್ಮಲ್ಯ ತಾಂಡವವಾಡಿದರೂ ಕಸ ತೆಗೆಯುವ ಗೋಜಿಗೆ ಗ್ರಾ.ಪಂ ಆಡಳಿತ ಮಂಡಳಿ ಹೋಗಿಲ್ಲ. ಶಾಲೆಯ ಪಕ್ಕದಲ್ಲಿ ಅನಧಿಕೃತ ಡಬ್ಟಾ ಅಂಗಡಿಗಳನ್ನು ರಾಜಾರೋಷವಾಗಿ ನಡೆಸಿ ಶಾಲೆಯಲ್ಲಿ ಕಲುಷಿತ ವಾತಾವರಣಕ್ಕೆ ಕಾರಣವಾದರೂ ಅವುಗಳನ್ನು ತೆಗೆಸಲು ಹಿಂದೇಟು ಹಾಕಲಾಗುತ್ತಿದೆ. ಇಡೀ ಗ್ರಾಮದಲ್ಲಿ ಸಾರ್ವಜನಿಕ ಶೌಚಾಲಯವಿಲ್ಲದೇ ಇರುವುದರಿಂದ ಜನರು ರಸ್ತೆ ಬದಿಯಲ್ಲಿ ಮೂತ್ರವಿಸರ್ಜನೆ ಮಾಡುತ್ತಿದ್ದಾರೆ. ಕೂಡಲೇ ಗ್ರಾಮದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಿಸಬೇಕೆಂದು ಒತ್ತಾಯಿಸಿದರು. 

ಗ್ರಾಮದ ವಿವಿಧ ಭಾಗದಲ್ಲಿ ಕಸ ಎಲ್ಲೆಂದರಲ್ಲಿ ಬಿದ್ದಿರುತ್ತದೆ. ಅದನ್ನು ತೆಗೆಸದೇ ಇರುವುದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯಿದೆ. ಸಾಕಷ್ಟು ಮಳೆಯಾಗುತ್ತಿದ್ದರೂ ನೀರಿನ ವ್ಯವಸ್ಥೆ ಮಾಡಲು ಗ್ರಾಪಂ ಕ್ರಮ ಕೈಗೊಂಡಿಲ್ಲ. ಶೌಚಾಲಯ ನಿರ್ಮಿಸಲು ಸರ್ಕಾರ ಸಾಕಷ್ಟು ಅನುದಾನ ನೀಡುತ್ತದೆ. ಅನುದಾನ ಸದ್ಬಳಕೆಯಾಗುವಂತೆ ಗ್ರಾಪಂ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಗ್ರಾಪಂ ಅಧ್ಯಕ್ಷ ಎಸ್‌.ಬಿ. ಮೋಕಾಶಿ ಮಾತನಾಡಿ, ಗ್ರಾಪಂ ವತಿಯಿಂದ ಶೌಚಾಲಯ ನಿರ್ಮಿಸಲು ಅನುದಾನ ಲಭ್ಯವಿದೆ. ಅದನ್ನು ಬಳಸಿ ಎಲ್ಲರೂ ಶೌಚಾಲಯ ನಿರ್ಮಿಸಲು ಪಣ ತೊಡಬೇಕು. ಗ್ರಾಮದ ಸ್ವಚ್ಛತೆ ಬಗ್ಗೆ ಗ್ರಾಪಂನೊಂದಿಗೆ ಸಾರ್ವಜನಿಕರು ಕೈಜೋಡಿಸಬೇಕು. ಸಾರ್ವಜನಿಕ ಸ್ಥಳದಲ್ಲಿ ಶೌಚಾಲಯ ನಿರ್ಮಿಸಿ, ಪ್ರತಿಭಟನಾಕಾರರ ಸಮಸ್ಯೆಗಳನ್ನು ಪರಿಹರಿಸಲು ಆದಷ್ಟು ಬೇಗ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಇದಕ್ಕೂ ಮೊದಲು ಪ್ರತಿಭಟನಾಕಾರರು ಪ್ರತಿಭಟನಾ ಮೆರವಣಿಗೆ ನಡೆಸಿ ಗ್ರಾ.ಪಂ ಮುಂದೆ ಧರಣಿ ನಡೆಸಿದರು.

ಗ್ರಾಮಸ್ಥರಾದ ಯಲ್ಲಪ್ಪ ಬಾದರವಳ್ಳಿ, ಮಲ್ಲಪ್ಪ ಮಾಳನ್ನವರ, ಬಸನಗೌಡ ಪಾಟೀಲ, ರಾಮಲಿಂಗಪ್ಪ ಮಾಳನ್ನವರ, ಶಿವಾನಂದ ತೊಂಡಿಕಟ್ಟಿ,ಯಲ್ಲವ್ವ ಕೊಳದೂರ, ಶೋಭಾ ದೊಡಮನಿ, ಪಿಆರ್‌ ಡಿಸೋಜಾ, ಸಿಸ್ಟರ್‌ ಬ್ರೆಜಿಲ್‌, ಮಹಾದೇವಿ ಗ್ಯಾನಪ್ಪನ್ನವರ, ಚನ್ನವ್ವ ಮೆಣಶಿನಕಾಯಿ ಸೇರಿದಿಂತೆ ಇತರರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MONEY (2)

Hubli ಅಪಾರ್ಟಮೆಂಟ್‌ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.