ಸಾಲಮನ್ನಾ ಸಾಧಕ-ಬಾಧಕ ಚಿಂತಿಸಿ: ರಮೇಶ
Team Udayavani, Aug 24, 2018, 5:16 PM IST
ಚಿಕ್ಕೋಡಿ: ಸರಕಾರಗಳು ಕೇವಲ ರಾಜಕಾರಣಕ್ಕಾಗಿ ಸಾಲ ಮತ್ತು ಬಡ್ಡಿ ಮನ್ನಾ ಮಾಡಿ ಹೋಗದೇ, ಬಜೆಟ್ನಲ್ಲಿ ಅದಕ್ಕೆ ಹಣ ತೆಗೆದಿಡುವ ಕೆಲಸ ಮಾಡಬೇಕು ಎಂದು ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಹೇಳಿದರು. ತಾಲೂಕಿನ ಕೇರೂರ ಗ್ರಾಮದಲ್ಲಿ ಬಿಡಿಸಿಸಿ ಬ್ಯಾಂಕಿನ 88ನೇ ಶಾಖೆ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಸರಕಾರ ಸಾಲ ಮತ್ತು ಬಡ್ಡಿ ಮನ್ನಾ ಮಾಡುವ ಮೊದಲು ಅದರ ಸಾಧಕ, ಬಾಧಕಗಳನ್ನು ವಿಚಾರಣೆ ಮಾಡಬೇಕು. ಸರಕಾರ ಪ್ರತಿಯೊಂದರಲ್ಲಿಯೂ ರಾಜಕಾರಣ ಮಾಡುವುದನ್ನು ನಿಲ್ಲಿಸಬೇಕು. ಹಿಂದಿನ ಸರಕಾರ ಘೋಷಣೆ ಮಾಡಿರುವ ಸಾಲ ಬಡ್ಡಿ ಹಣ ಬೆಳಗಾವಿ ಜಿಲ್ಲೆಗೆ ಇನ್ನೂ 619ಕೋಟಿ ರೂ. ಮೊದಲು ಕೊಡಬೇಕು. ರೈತರ ಜೀವನದೊಂದಿಗೆ ಚೆಲ್ಲಾಟವಾಡುವುದನ್ನು ನಿಲ್ಲಿಸಬೇಕು ಎಂದು ರಾಜ್ಯ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬ್ಯಾಂಕಿನ ನಿರ್ದೇಶಕ ಡಿ.ಟಿ.ಪಾಟೀಲ ಮಾತನಾಡಿ, ಬಿಡಿಸಿಸಿ ಬ್ಯಾಂಕು ಕೇವಲ ಬೆಳೆ ಸಾಲಕ್ಕೆ ಸೀಮಿತವಾಗಿಲ್ಲ. ಉಳಿದ ರಾಷ್ಟ್ರೀಕೃತ ಬ್ಯಾಂಕಿನಂತೆ ವಿವಿಧ ರೂಪದ ಸಾಲಗಳನ್ನು ಕಡಿಮೆ ಬಡ್ಡಿ ದರದಲ್ಲಿ ನೀಡಲಾಗುತ್ತಿದ್ದು, ಈ ಭಾಗದ ರೈತರು ಇದರ ಲಾಭ ಪಡೆದುಕೊಳ್ಳಬೇಕು ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ನಿರ್ದೇಶಕ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ, ಈ ಭಾಗದ ರೈತರು ಬ್ಯಾಂಕಿನಿಂದ ದೊರೆಯುವ ಸಾಲ ಸೌಲಭ್ಯ ಪಡೆದುಕೊಂಡು ಕೃಷಿ ಪದ್ಧತಿಯಲ್ಲಿ ಬದಲಾವಣೆ ಮಾಡಿಕೊಂಡು ಮಿಶ್ರ ಬೆಳೆ ಬೆಳೆಯುವ ಮುಖಾಂತರ ಹೆಚ್ಚಿನ ಲಾಭ ಪಡೆಯಲು ಮುಂದಾಗಬೇಕು ಎಂದು ಹೇಳಿದರು.
ಚಿಕ್ಕೋಡಿಯ ಸಂಪಾದನಾ ಚರಮೂರ್ತಿಮಠದ ಸಂಪಾದನಾ ಮಹಾಸ್ವಾಮಿಗಳು ಶಾಖೆ ಉದ್ಘಾಟಿಸಿದರು. ಮಾಜಿ ಶಾಸಕರಾದ ಬಾಳಾಸಾಹೇಬ ವಡ್ಡರ, ದತ್ತು ಹಕ್ಯಾಗೋಳ, ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಸುರೇಶ ಅಳಗುಂಡಿ, ಸುರೇಶ ಬೆಲ್ಲದ, ಅನ್ನಾಸಾಬ ಕೋಳಿ, ಮಲ್ಲಿಕಾರ್ಜುನ ಪಾಟೀಲ, ಚನಗೌಡ ಪಾಟೀಲ, ಎಂ.ಎ.ಪಾಟೀಲ, ಶೇಖರ ಪಾಟೀಲ, ಹರೀಶ ಇನಾಮದಾರ, ಮಹಾಂತೇಶ ಪಾಟೀಲ, ಟಿಸಿಒ ಎಂ.ಬಿ.ಖಟಾವಕರ, ಪಿ.ಡಿ.ನವಲೆ, ವಿ.ಎಸ್.ಮಾಳಿಂಗೆ, ಅನೀಲ ಅಂಬಿ ಮುಂತಾದವರು ಉಪಸ್ಥಿತರಿದ್ದರು. ಎ.ಸಿ.ಕಲ್ಮಟ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli ಅಪಾರ್ಟಮೆಂಟ್ ನಲ್ಲಿ ಸಿಕ್ಕ ಕೋಟಿ ಕೋಟಿ ಹಣ ಬ್ಯಾಂಕ್ ಗೆ ಜಮೆ
Hubli: ದಿಂಗಾಲೇಶ್ವರರು ಸ್ಪರ್ಧಿಸುತ್ತಿರುವ ಸಮಯ, ಜಾಗ ಸರಿಯಿಲ್ಲ: ಗುಣಧರನಂದಿ ಮಹಾರಾಜ
L.S Polls: ನಮ್ಮದು ಧರ್ಮ ಯುದ್ಧ, ಧರ್ಮದ ಹಾದಿಯಲ್ಲೇ ಸಾಗುತ್ತೇವೆ: ದಿಂಗಾಲೇಶ್ವರ ಶ್ರೀ
Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ
UPSC ಪರೀಕ್ಷೆಯಲ್ಲಿ 101ನೇ ರ್ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ
MUST WATCH
ಹೊಸ ಸೇರ್ಪಡೆ
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
UV Fusion: ಇಂಡಿ ಪಂಪ್ ಮಟ..