ಪೌರಕಾರ್ಮಿಕರಿಗೆ ಸಂಚಾರಿ ವಿಶ್ರಾಂತಿ ಗೃಹ

ಪುರುಷ-ಮಹಿಳೆಯರಿಗೆ ಪ್ರತ್ಯೇಕ ವ್ಯವಸ್ಥೆ­ಸಮವಸ್ತ್ರ ಬದಲಿಸಲು ಬಹಳಷ್ಟು ಅನುಕೂಲ

Team Udayavani, Mar 11, 2021, 10:00 PM IST

Udayavani Kannada Newspaper

ಹುಬ್ಬಳ್ಳಿ: ಮಹಾನಗರ ಸ್ವತ್ಛತೆಗೆ ಶ್ರಮಿಸುತ್ತಿರುವ ಪೌರ ಕಾರ್ಮಿಕರಿಗಾಗಿ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಸಂಚಾರಿ ವಿಶ್ರಾಂತಿ ಗೃಹಗಳನ್ನು ನಿರ್ಮಿಸಲು ಮಹಾನಗರ ಪಾಲಿಕೆ ಯೋಜನೆ ರೂಪಿಸಿದೆ. ಸ್ವತ್ಛತಾ ಕಾರ್ಯದಲ್ಲಿ ತೊಡಗುವ ಪೌರ ಕಾರ್ಮಿಕರಿಗೆ ಬೆಳಗಿನ ಉಪಹಾರ, ಚಹಾ, ವಿಶ್ರಾಂತಿಗಾಗಿ ನಿಗದಿತ ಸ್ಥಳವಿಲ್ಲ. ಎಲ್ಲಿ ಬೇಕೆಂದರಲ್ಲಿ ಕುಳಿತು, ನಿಂತು ಬೆಳಗಿನ ಉಪಾಹಾರ ಸೇವಿಸುತ್ತಾರೆ. ಇನ್ನು ಮನೆಯಿಂದ ಬರುವಾಗ ಧರಿಸಿದ ಸಮವಸ್ತ್ರದ ಮೇಲೆಯೇ ಕೆಲಸ, ಇದರಲ್ಲಿಯೇ ಉಪಾಹಾರ ಎಲ್ಲವೂ ಮುಗಿಸುತ್ತಾರೆ.

ಇನ್ನು ಕೊಂಚ ದಣಿವಾರಿಸಿಕೊಳ್ಳಲು ಯಾವುದಾದರೂ ಮರದ ಕೆಳಗೋ, ಕಟ್ಟಡದ ನೆರಳನ್ನೋ  ಶ್ರಯಿಸಬೇಕು. ಕೆಲವೆಡೆ ಇದು ಕೂಡ ಇರಲ್ಲ. ಕುಡಿಯುವ ನೀರಿಗಾಗಿ ಅವರಿವರ ಮನೆ ತಡಕಾಡುವ  ಪರಿಸ್ಥಿತಿಯಿದೆ. ಹೀಗಾಗಿ ಮಹಾನಗರದ ಸ್ವತ್ಛತೆಯಲ್ಲಿ ಪ್ರಮುಖ ಪಾತ್ರ ವಹಿಸುವ ಪೌರ ಕಾರ್ಮಿಕರ ಆರೋಗ್ಯದ ದೃಷ್ಟಿಯಿಂದ ವಿಶ್ರಾಂತಿ ಅಗತ್ಯವಾಗಿದೆ ಎನ್ನುವ ಕಾರಣದಿಂದ ಮಹಾನಗರ ಪಾಲಿಕೆ 15 ಹಣಕಾಸು ಆಯೋಗದ ಅನುದಾನದಡಿ ವಿಶ್ರಾಂತಿ ಗೃಹಗಳನ್ನು ನಿರ್ಮಿಸಲು ಯೋಜನೆ ರೂಪಿಸಲಾಗಿದೆ.

ಹೇಗಿರುತ್ತೆ ವಿಶ್ರಾಂತಿ ಗೃಹ: ಹು-ಧಾ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿರ್ಮಿಸುವ ವಿಶ್ರಾಂತಿ ಗೃಹಗಳು ಸುಲಭವಾಗಿ ಸ್ಥಳಾಂತರಿಸುವ ಮೊಬೈಲ್‌ ವ್ಯವಸ್ಥೆ ಹೊಂದಿವೆ. ಪುರುಷ ಹಾಗೂ ಮಹಿಳೆಯರಿಗೆ ಪ್ರತ್ಯೇಕ ವ್ಯವಸ್ಥೆಯಿರುತ್ತದೆ. ಪ್ರತ್ಯೇಕ ಶೌಚಾಲಯಗಳು, ಶುಚಿಯಾಗಲು ನೀರು ಹಾಗೂ ಪೂರಕ ವ್ಯವಸ್ಥೆ ಇರುತ್ತದೆ. ವಿಶ್ರಾಂತಿ ಪಡೆಯಲು ಒಂದಿಷ್ಟು ಕುರ್ಚಿಗಳು, ಈ ಕೊಠಡಿಯಲ್ಲೇ ಬೆಳಗಿನ ಉಪಾಹಾರ ಮಾಡಲು ವ್ಯವಸ್ಥೆ ಕಲ್ಪಿಸಲಾಗಿರುತ್ತದೆ. ಇದೇ ಸ್ಥಳಕ್ಕೆ ಆಗಮಿಸಿ ತಮ್ಮ ಸಮವಸ್ತ್ರ ಧರಿಸುವುದು, ಕರ್ತವ್ಯ ಮುಗಿದ ನಂತರ ತಮ್ಮ ವಸ್ತ್ರಗಳನ್ನು ಧರಿಸಬಹುದಾಗಿದೆ.

ಇನ್ನು ಸ್ವತ್ಛತಾ ಕೆಲಸಕ್ಕೆ ಬಳಸುವ ಸಾಮಗ್ರಿಗಳನ್ನು ಇಲ್ಲಿಯೇ ಇಡಬಹುದಾಗಿದೆ. ಹೀಗೆ ಪ್ರತ್ಯೇಕ ವಿಶ್ರಾಂತಿ ಗೃಹದಿಂದ ಪ್ರಮುಖವಾಗಿ ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಬಹುದಾಗಿದೆ ಎನ್ನುತ್ತಾರೆ ಪಾಲಿಕೆ ಅ  ಧಿಕಾರಿಗಳು. ಕಡಿಮೆ, ಗುಣಮಟ್ಟ: ವಿಶ್ರಾಂತಿ ಗೃಹ ನಿರ್ಮಾಣಕ್ಕಾಗಿ 2.40 ಕೋಟಿ ರೂ. ಮೀಸಲಿಡಲಾಗಿದ್ದು, 12 ವಲಯಗಳಲ್ಲಿ ತಲಾ ಒಂದರಂತೆ ಶಾಶ್ವತ ವಿಶ್ರಾಂತಿ ಗೃಹಗಳನ್ನು ನಿರ್ಮಿಸಬೇಕೆಂದು ಆರಂಭದಲ್ಲಿ ಯೋಚಿಸಲಾಗಿತ್ತು. ಆದರೆ ಇದು ಅತ್ಯಂತ ವೆಚ್ಚದಾಯಕವಾಗಿದ್ದು, ಒಂದು ವಿಶ್ರಾಂತಿ ಗೃಹಕ್ಕೆ ಕನಿಷ್ಠ 30-32 ಲಕ್ಷ ರೂ. ಬೇಕಾಗುತ್ತದೆ.

ಇನ್ನು ಸ್ಥಳದ ಲಭ್ಯತೆ, ಕಾರ್ಮಿಕರಿಗೆ ಬೇಡಿಕೆ ಎಲ್ಲವನ್ನೂ ಅವಲೋಕಿಸಿದಾಗ ಶಾಶ್ವತ ವಿಶ್ರಾಂತಿ ಗೃಹ ಸೂಕ್ತವಲ್ಲ ಎನ್ನುವ ನಿರ್ಧಾರಕ್ಕೆ ಬಂದ ನಂತರ ಮೊಬೈಲ್‌ ವಿಶ್ರಾಂತಿ ಗೃಹಗಳಿಗೆ ಹೆಚ್ಚು ಆದ್ಯತೆ ನೀಡಲಾಗಿದೆ. ಈ ಗೃಹ ನಿರ್ಮಿಸಲು 8-9 ಲಕ್ಷ ರೂ. ವೆಚ್ಚವಾಗಲಿದೆ. ಈಗಾಗಲೇ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಕೆಲ ವಾರ್ಡುಗಳಲ್ಲಿ ಮೊಬೈಲ್‌ ವಿಶ್ರಾಂತಿ ಗೃಹಗಳನ್ನು ಸ್ಥಾಪಿಸಲಾಗಿದೆ. ಇವುಗಳ ಬಗ್ಗೆ ಅಧ್ಯಯನ ಮಾಡಿರುವ ಇಲ್ಲಿನ ಪಾಲಿಕೆ ಅ ಕಾರಿಗಳು ಮೊಬೈಲ್‌ ವಿಶ್ರಾಂತಿ ಗೃಹಗಳು ಅತ್ಯಂತ ಸೂಕ್ತ ಎನ್ನುವ ನಿರ್ಧಾರಕ್ಕೆ ಬಂದಿದ್ದಾರೆ. ಇವುಗಳನ್ನು ಕೆಲವೇ ಗಂಟೆಗಳಿಗೆ ಬೇಕಾದ ಸ್ಥಳಗಳಿಗೆ ಸ್ಥಳಾಂತರ ಮಾಡಬಹುದಾಗಿದ್ದು, ಖರ್ಚು ಕೂಡ ಕಡಿಮೆಯಿದೆ.

ಮೊದಲು ಪ್ರಾಯೋಗಿಕ: ಪ್ರತಿಯೊಂದು ವಾರ್ಡಿನಲ್ಲಿ ಸೂಕ್ತ ಸ್ಥಳ ಗುರುತಿಸಿ ವಿಶ್ರಾಂತಿ ಗೃಹ ನಿರ್ಮಿಸಬೇಕೆನ್ನುವ ಗುರಿಯಿದೆ. ಆದರೆ ಇದರ ಸಾಧಕ-ಬಾಧಕ ಅರಿಯುವ ಉದ್ದೇಶದಿಂದ ಆರಂಭದಲ್ಲಿ ಒಂದು ವಿಶ್ರಾಂತಿ ಗೃಹ ಯಾವುದಾದರೂ ಒಂದು ವಾರ್ಡಿನಲ್ಲಿ ಕೂಡಿಸಲಿದ್ದಾರೆ. ಈ ವಿಶ್ರಾಂತಿ ಗೃಹದ ಬಳಕೆಯ ಪರಿಣಾಮ, ಎಷ್ಟರ ಮಟ್ಟಿಗೆ ಪೌರಕಾರ್ಮಿಕರಿಗೆ ಅನುಕೂಲವಾಗಲಿದೆ, ಇರುವ ವ್ಯವಸ್ಥೆಯಲ್ಲಿ ಏನಾದರೂ ಬದಲಾವಣೆ ಮಾಡಬೇಕಾದ ಎಂಬಿತ್ಯಾದಿ ಅಂಶಗಳನ್ನು ಅರಿತು ಉಳಿದ ವಾರ್ಡುಗಳಿಗೆ ವಿಸ್ತರಿಸುವ ಗುರಿಯಿದೆ. ವಿಶ್ರಾಂತಿ ಗೃಹಗಳ ನಿರ್ವಹಣೆ ಆಯಾ ಪೌರಕಾರ್ಮಿಕರದ್ದಾಗಿದೆ. ಸಂಬಂಧಿ ಸಿದ ಆರೋಗ್ಯ ನಿರೀಕ್ಷಕರು ಇದರ ಮೇಲುಸ್ತುವಾರಿಯಾಗಿರುತ್ತಾರೆ. ಸ್ವತ್ಛತೆ, ಸುಸ್ಥಿತಿಯಲ್ಲಿ ಕಾಪಾಡುವುದು ಇವರ ಜವಾಬ್ದಾರಿಯಾಗಿರುತ್ತದೆ. ಪ್ರಾಯೋಗಿಕ ಹಂತದಲ್ಲಿ ವಿಶ್ರಾಂತಿ ಕೊಠಡಿ ಯಶಸ್ವಿಯಾದರೆ.

ಹೇಮರಡ್ಡಿ ಸೈದಾಪುರ

ಟಾಪ್ ನ್ಯೂಸ್

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

 Lok Sabha Election: ಉಡುಪಿ- ಜಯಪ್ರಕಾಶ್‌ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.