ಕೇಂದ್ರ ಸರ್ಕಾರದ ವಿರುದ್ಧ ಆರ್ಕೆಎಸ್ನಿಂದ ಪ್ರತಿಭಟನೆ
Team Udayavani, Oct 23, 2019, 8:16 AM IST
ಧಾರವಾಡ: ಕೇಂದ್ರ ಸರಕಾರವು ಆರ್ ಸಿಇಪಿ ಒಪ್ಪಂದಕ್ಕೆ ಸಹಿ ಹಾಕದಂತೆ ಆಗ್ರಹಿಸಿ ಆರ್ಕೆಎಸ್ ಜಿಲ್ಲಾ ಸಮಿತಿ ವತಿಯಿಂದ ಡಿಸಿ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ಭಾರತದ ರೈತರಿಗೆ ಮರಣಶಾಸನವಾದ ಆರ್ಸಿಇಪಿ ಒಪ್ಪಂದದಿಂದ ಹೊರಬಂದು ಹಾಲು ಉತ್ಪನ್ನಗಳ ಮುಕ್ತ ವ್ಯಾಪಾರ ಒಪ್ಪಂದ ತಿರಸ್ಕರಿಸಬೇಕು. ಇದರೊಂದಿಗೆ ಹಾಲು ಉತ್ಪಾದಕರಿಗೆ ಹೆಚ್ಚಿನ ಸಬ್ಸಿಡಿ ನೀಡಿ ದೇಶದಲ್ಲಿ ಹೈನುಗಾರಿಕೆ ಪ್ರೋತ್ಸಾಹಿಸಬೇಕು ಎಂದು ಆಗ್ರಹಿಸಲಾಯಿತು. ಆರ್ಕೆಎಸ್ ರಾಜ್ಯ ಖಜಾಂಚಿ ವಿ. ನಾಗಮ್ಮಾಳ್ ಮಾತನಾಡಿ, ಕೃಷಿ ಉತ್ಪನ್ನಗಳನ್ನೂ ಒಳಗೊಂಡಿರುವಂತಹ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ-ಮುಕ್ತ ವ್ಯಾಪಾರ ಒಪ್ಪಂದಕ್ಕೆ ಕೇಂದ್ರ ಸರ್ಕಾರ ಅಂಕಿತ ಹಾಕಲು ಮುಂದಾಗಿದೆ. ಕೃಷಿ-ಹೈನುಗಾರಿಕೆ ನಂಬಿ ಜೀವನ ನಡೆಸುತ್ತಿರುವ ರೈತ-ಕೃಷಿಕಾರ್ಮಿಕರ ಪಾಲಿಗೆ ಈ ಒಪ್ಪಂದವು ಮರಣ ಶಾಸನವಾಗಲಿದೆ.
ಈ ಒಪ್ಪಂದ ಜಾರಿಯಾದರೆ ವಿದೇಶಿ ಕೃಷಿ ಹಾಗೂ ಡೈರಿ ಉತ್ಪನ್ನಗಳು ದೇಶದ ಮಾರುಕಟ್ಟೆಗೆ ಮುಕ್ತವಾಗಿ ಲಗ್ಗೆ ಹಾಕಲಿವೆ. ಇದರಿಂದ ನಮ್ಮ ದೇಶದ ಕೃಷಿ ಮಾರುಕಟ್ಟೆಯಲ್ಲಿ ನಮ್ಮರೈತರ ಉತ್ಪನ್ನಗಳ ಮಾರಾಟಕ್ಕೆ ಹೊಡೆತ ಬೀಳಲಿದೆ ಎಂದು ಆರೋಪಿಸಿದರು.
ಆರ್ಸಿಇಪಿ ಒಪ್ಪಂದ ತಿರಸ್ಕರಿಸಿ ಪಶುಸಂಗೋಪನಾ ಇಲಾಖೆಯನ್ನು ಬಲಪಡಿಸಬೇಕು. ಈ ಮೂಲಕ ಹಾಲು ಒತ್ಪಾದಕರಿಗೆ ಹೆಚ್ಚಿನ ಸಬ್ಸಿಡಿ ನೀಡಿ ದೇಶದಲ್ಲಿ ಹೈನುಗಾರಿಕೆಯನ್ನು ಪ್ರೋತ್ಸಾಹಿಸಬೇಕು ಎಂದು ಒತ್ತಾಯಿಸಿದರು. ಜಿಲ್ಲಾಧ್ಯಕ್ಷ ಲಕ್ಷ್ಮಣ ಜಡಗನ್ನವರ, ಶರಣು ಗೋನವಾರ, ಅಲ್ಲಾವುದ್ದಿನ್ ಅಡ್ಲಿ, ಎ.ಎಫ್.ಪುರದನ್ನವರ, ಐ.ಬಿ. ನಾಡಿಗೇರ, ಪಿ.ಜಿ. ಕುಲಕರ್ಣಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
MUST WATCH
ಹೊಸ ಸೇರ್ಪಡೆ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
ನಟ, ಕಾಂಗ್ರೆಸ್ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ
ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ ಟಿಕೆಟ್ ಡೌಟ್
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ