ಶೀಘ್ರ ರಸ್ತೆ ಅಗಲೀಕರಣ: ಡಿಸಿ
•ಹೊಸೂರು-ಉಣಕಲ್ಲ ಬೈಪಾಸ್ ರಸ್ತೆ•ಸ್ಥ§ಳ ಪರಿಶೀಲನೆ ನಡೆಸಿದ ದೀಪಾ
Team Udayavani, Aug 4, 2019, 9:39 AM IST
ಹುಬ್ಬಳ್ಳಿ: ಹೊಸೂರು-ಉಣಕಲ್ ಬೈಪಾಸ್ ರಸ್ತೆಯ ನೀಲನಕ್ಷೆಯನ್ನು ಜಿಲ್ಲಾಧಿಕಾರಿ ದೀಪಾ ಚೋಳನ್ ಪರಿಶೀಲಿಸಿದರು.
ಹುಬ್ಬಳ್ಳಿ: ಕೇಂದ್ರ ರಸ್ತೆ ನಿಧಿಯಿಂದ ನಿರ್ಮಿಸಲಾಗುತ್ತಿರುವ ಹೊಸೂರು- ಉಣಕಲ್ಲ ಬೈಪಾಸ್ ರಸ್ತೆಯಲ್ಲಿರುವ ನೂತನ ನ್ಯಾಯಾಲಯ ಸಂಕೀರ್ಣ ಸಂಪರ್ಕಿಸುವ ರಸ್ತೆ ನಿರ್ಮಾಣ ಕಾಮಗಾರಿಯನ್ನು ಶೀಘ್ರ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.
ಶನಿವಾರ ಹೊಸೂರು ವೃತ್ತದಿಂದ ನೂತನ ಕೋರ್ಟ್ ಸಂಕೀರ್ಣ ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿ ಹು-ಧಾ ಮಹಾನಗರ ಪಾಲಿಕೆ ಆಯುಕ್ತರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾರ್ಯನಿರ್ವಾಹಕ ಅಭಿಯಂತರು, ಲೋಕೋಪಯೋಗಿ ಇಲಾಖೆ ಅಭಿಯಂತರು, ಬಿಆರ್ಟಿಎಸ್ ಹಾಗೂ ಹೆಸ್ಕಾಂ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ರಸ್ತೆ ನಿರ್ಮಾಣ ಕಾಮಗಾರಿ ಈಗಾಗಲೇ ತಡವಾಗಿದೆ. ರಸ್ತೆ ಅಗಲೀಕರಣ ಕುರಿತು ಪಾಲಿಕೆ ಅಧಿಕಾರಿಗಳು ಸರ್ವೇ ಪೂರ್ಣಗೊಳಿಸಿದ್ದು, ದಾಖಲೆಗಳ ಅನುಸಾರ ಪಾಲಿಕೆ ಜಾಗ ಹೆಚ್ಚಿದೆ. ಹಾಗಾಗಿ ಕಾಮಗಾರಿ ಕೈಗೊಳ್ಳಲು ಯಾವುದೇ ತೊಂದರೆ ಇಲ್ಲ ಎಂದರು.
ರಸ್ತೆ ನಿರ್ಮಾಣದಿಂದ ನೂತನ ನ್ಯಾಯಾಲಯ ಸಂಕೀರ್ಣ ಹಾಗೂ ಬಿಆರ್ಟಿಎಸ್ ಬಸ್ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸಿದಂತೆ ಆಗುತ್ತದೆ. ರಸ್ತೆ ಕಿರಿದಾಗಿರುವುದರಿಂದ ಕಾಮಗಾರಿ ಕೈಗೊಳ್ಳಲು ಅಡಚಣೆ ಉಂಟಾಗಿತ್ತು. ರಸ್ತೆಯಲ್ಲಿ ಉಂಟಾಗಿರುವ ಒತ್ತುವರಿ ಮನೆಗಳು, ಮರಗಳು ಹಾಗೂ ಹೆಸ್ಕಾಂ ಕಂಬಗಳನ್ನು ಶೀಘ್ರ ಸ್ಥಳಾಂತರ ಮಾಡಲಾಗುವುದು. ಗೋಕುಲ ರಸ್ತೆ ಸಂಪರ್ಕಿಸುವ ವೃತ್ತದಿಂದ ನ್ಯಾಯಾಲಯದ ಕಡೆ 110 ಅಡಿ ವರೆಗೆ ಮನೆಗಳನ್ನು ನಿರ್ಮಿಸಲಾಗಿದೆ. ಇವರಿಗೆ ಆಶ್ರಯ ಯೋಜನೆಯಡಿ ಮನೆಗಳನ್ನು ನಿರ್ಮಿಸಿ ಕೊಡಲಾಗುವುದು. ಒಟ್ಟು 66 ಮನೆಗಳನ್ನು ಸ್ಥಳಾಂತರಿಸಲಾಗುತ್ತಿದೆ. 14 ಮರಗಳನ್ನು ಕಡಿಯಲು ಅರಣ್ಯ ಇಲಾಖೆಯಿಂದ ಅನುಮತಿ ಪಡೆಯಲಾಗಿದೆ. ನಿಗದಿತ ವೇಳಾಪಟ್ಟಿ ಸಿದ್ಧ್ದಪಡಿಸಿ ಕೆಲಸ ನಿರ್ವಹಿಸುವಂತೆ ಸೂಚಿಸಲಾಗಿದೆ ಎಂದು ವಿವರಿಸಿದರು.
ಪಾಲಿಕೆ ಆಯುಕ್ತ ಡಾ| ಸುರೇಶ ಇಟ್ನಾಳ, ಸ್ಮಾರ್ಟ್ಸಿಟಿ ಅಧಿಕಾರಿ ಶಕೀಲ್ ಅಹ್ಮದ್, ಲೋಕೋಪಯೋಗಿ ಇಲಾಖೆ ಕಾರ್ಯನಿರ್ವಾಹಕ ಅಭಿಯಂತ ವಿರೂಪಾಕ್ಷಪ್ಪ ಯಮಕನಮರಡಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ
Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್ ಸಲ್ಲಿಸಿಲ್ಲ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ