ತುಂಡುಗುತ್ತಿಗೆಯಲ್ಲಿ 10 ಸಾವಿರ ಕೋಟಿ ಅಕ್ರಮ
Team Udayavani, May 14, 2019, 11:41 AM IST
ಹುಬ್ಬಳ್ಳಿ: ತುಂಡುಗುತ್ತಿಗೆ ಕಾಮಗಾರಿಯಲ್ಲಿ ಮೈತ್ರಿ ಸರ್ಕಾರ ಹತ್ತು ಸಾವಿರ ಕೋಟಿ ಅವ್ಯವಹಾರ ನಡೆಸಿದೆ ಎಂದು ಎಸ್ಸಿ-ಎಸ್ಟಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಹದೇವಪ್ಪ ಅವರು ಎಸಿಬಿಗೆ ದೂರು ನೀಡಿದ್ದು, ನೈತಿಕ ಹೊಣೆ ಹೊತ್ತು ಸಿಎಂ ಕುಮಾರಸ್ವಾಮಿ ರಾಜೀನಾಮೆ ನೀಡಬೇಕೆಂದು ಶಾಸಕ ಶ್ರೀರಾಮುಲು ಆಗ್ರಹಿಸಿದ್ದಾರೆ.
ಕುಂದಗೋಳ ತಾಲೂಕಿನ ಚಾಕಲಬ್ಬಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ಐ. ಚಿಕ್ಕನಗೌಡರ ಪರ ಮತಯಾಚನೆ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿಯಮಾವಳಿಗಳನ್ನು ಗಾಳಿಗೆ ತೂರಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಅವರು ತುಂಡುಗುತ್ತಿಗೆ ಕಾಮಗಾರಿಗಳನ್ನು ನೀಡಿದ್ದಾರೆ. ಇದರಿಂದ ಸರ್ಕಾರಕ್ಕೆ ಸುಮಾರು 10 ಸಾವಿರ ಕೋಟಿ ರೂ. ನಷ್ಟವಾಗಿದೆ. ಈ ಕುರಿತು ಸಿಎಂ ಸ್ಪಷ್ಟೀಕರಣ ನೀಡಬೇಕು ಎಂದು ಒತ್ತಾಯಿಸಿದರು.
ಮೈತ್ರಿ ಸರ್ಕಾರದಲ್ಲಿ ಗೊಂದಲಗಳು ಎದ್ದಿದ್ದು, ಆಡಳಿತ ಯಂತ್ರ ಕುಸಿದು ಹೋಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜಗಳ ನೋಡಿದರೆ ಮೈತ್ರಿ ಸರ್ಕಾರ ಹೆಚ್ಚು ದಿನ ಇರಲಾರದು. ಮೈತ್ರಿಯ ಶಾಸಕರಿಗೂ ಈ ಸರ್ಕಾರ ಬೇಡವಾಗಿದೆ. ಸರ್ಕಾರ ರಚನೆ ಇಲ್ಲವೆ ಮಧ್ಯಂತರ ಚುನಾವಣೆಗೆ ನಾವು ಸಿದ್ಧರಿದ್ದೇವೆ ಎಂದರು.
ಸಿದ್ದರಾಮಯ್ಯ ಸಿಎಂ ಆಗಬೇಕೆಂದು ಅವರ ಹಿಂಬಾಲಕರು ಹೇಳುತ್ತಿದ್ದಾರೆ ಎನ್ನುವ ಎಚ್. ವಿಶ್ವನಾಥರ ಹೇಳಿಕೆ ನೂರಕ್ಕೆ ನೂರರಷ್ಟು ಸತ್ಯವಾಗಿದೆ. ಆದರೆ, ವಾಸ್ತವದಲ್ಲಿ ಸಿದ್ದರಾಮಯ್ಯ ಅವರ ಜತೆ ಯಾವೊಬ್ಬ ಶಾಸಕರೂ ಇಲ್ಲ ಎನ್ನುವುದು ಸಹ ಅಷ್ಟೇ ಸತ್ಯ ಎಂದರು.
ಕುಂದಗೋಳ ಕ್ಷೇತ್ರಕ್ಕೆ ಆಗಮಿಸುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಈ ಭಾಗದಲ್ಲಿರುವ ಬರ ಸ್ಥಿತಿ ನೋಡಬೇಕು. ಐದು ಜಿಲ್ಲೆಗಳಿಗೆ ನೀಡಿದ ಅನುದಾನವನ್ನು ಉತ್ತರ ಕರ್ನಾಟಕದ ಬರಗಾಲ ಪ್ರದೇಶಕ್ಕೆ ನೀಡಬೇಕು. ಕುಂದಗೋಳ ಕ್ಷೇತ್ರಕ್ಕೆ ಶಾಶ್ವತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ