ಪ್ರತಿ ವಾರ್ಡ್‌ಗೆ 25 ಲಕ್ಷ ರೂ. ಅನುದಾನ: ಮೇಯರ್‌ ಘೋಷಣೆ


Team Udayavani, Feb 1, 2017, 12:44 PM IST

hub2.jpg

ಧಾರವಾಡ: ಹು-ಧಾ ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರತಿ ವಾರ್ಡ್‌ಗೆ 25 ಲಕ್ಷ ರೂ.ಗಳ ಅನುದಾನವನ್ನು ಮೇಯರ್‌ ಮಂಜುಳಾ ಅಕ್ಕೂರ್‌ ಘೋಷಿಸಿ ಆದೇಶ ನೀಡಿದ್ದಾರೆ. ನಗರದಲ್ಲಿ ಮಂಗಳವಾರ ನಡೆದ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಪಾಲಿಕೆ ಸದಸ್ಯರ ಒತ್ತಡಕ್ಕೆ ಮಣಿದ ಮೇಯರ್‌,ಸಾಮಾನ್ಯ ಅನುದಾನದಡಿ ಪ್ರತಿ  ವಾರ್ಡ್‌ಗೆ 25 ಲಕ್ಷ ರೂ.ಗಳ ಅನುದಾನ ಘೋಷಿಸಿದರು. 

ಇದಕ್ಕೂ ಮುನ್ನ ಪಾಲಿಕೆ ಸದಸ್ಯ ದೀಪಕ್‌ ಚಿಂಚೋರೆ ಹಾಗೂ ಗಣೇಶ ಟಗರಗುಂಟಿ ಮಾತನಾಡಿ, ಪಾಲಿಕೆ ಆಯುಕ್ತರು ನಿರೀಕ್ಷೆಗೂ ಮೀರಿ ಕರ ಸಂಗ್ರಹಿಸಿದ್ದಾರೆ. ಇದು ಒಳ್ಳೆಯ ಬೆಳವಣಿಗೆ ಆಗಿದ್ದು, ಇದೀಗ ವಾರ್ಡ್‌ಗಳ ಅಭಿವೃದ್ಧಿಗಾಗಿ ಮೇಯರ್‌ ಅನುದಾನ ಘೋಷಣೆ ಮಾಡದ ಹೊರತು ಸಭೆಯಲ್ಲಿ ಮುಂದಿನ ಚರ್ಚೆ ಅಸಾಧ್ಯ ಎಂದು ಪಟ್ಟು ಹಿಡಿದರು. 

ಈ ಚರ್ಚೆಗೆ ಸಾಥ್‌ ನೀಡಿದ ಪಾಂಡುರಂಗ ಪಾಟೀಲ ಪಾಲಿಕೆ ಆಯುಕ್ತರಿಂದ ಫಂಡ್‌ ಬೇಸ್‌ ಅಕೌಂಟ್ಸ್‌ ಬಗ್ಗೆ ಮಾಹಿತಿ ಪಡೆದು, ಪಾಲಿಕೆ ಆಯುಕ್ತರ ಉತ್ತರಗಳಲ್ಲಿ ಅವರನ್ನೇ ಸಿಲುಕಿಸಿದರು. ಈ ಹಿಂದೆ ಮಾಡಿದ್ದು ಸರಿಯಾಗಿದ್ದರೆ ಈಗಲೂ ವಾರ್ಡ್‌ಗಳಿಗೆ ಅನುದಾನ ಘೋಷಣೆ ಮಾಡೋದು ಸರಿಯೇ…ಇದು ತಪ್ಪಾದರೆ ಹಿಂದೆ ಮಾಡಿದ್ದು ಕೂಡಾ ತಪ್ಪು..ಹೀಗಾಗಿ ಅನುದಾನ ಘೋಷಣೆ ಮಾಡುವಂತೆ ಆಗ್ರಹಿಸಿದರು. 

ಅನುದಾನ ಘೋಷಣೆಯಾಗಿ ಐದಾರು ತಿಂಗಳಿಗೆ ಕೆಲಸ ಪ್ರಾರಂಭವಾಗುತ್ತಿದ್ದು, ಮೇಯರ್‌ ಅವರು ಪ್ರತಿ ವಾರ್ಡ್‌ಗೆ 25 ಲಕ್ಷ ಅನುದಾನ ಘೋಷಿಸಿದರೆ ಮುಂದಿನ ಐದಾರು ತಿಂಗಳಿಗೆ ಈ ಹಣ ವಾರ್ಡ್‌ಗೆ ತಲುಪಲಿದೆ ಎಂದರು. ಆಗ ಆಯುಕ್ತರು ಸಾಮಾನ್ಯ ಅನುದಾನವನ್ನು ಈಗಾಗಲೇ 64 ಕೋಟಿ ನೀಡಿದ್ದು, ಅದರ ಮಿತಿ ಮುಗಿದಿದೆ ಎಂದರು.

ಎದ್ದು ನಿಂತ ಬಿಜೆಪಿ ಹಿರಿಯ ಸದಸ್ಯ ಡಾ| ಪಾಂಡುರಂಗ ಪಾಟೀಲ, ಪಾಲಿಕೆ ಇಷ್ಟು ದಿನ ಸಾಮಾನ್ಯ ಅನುದಾನಕ್ಕೆ ಬೇರೆ-ಬೇರೆ ಮೂಲಗಳ ಅನುದಾನ ಬಳಸಿದ್ದು, ಅದೇ ರೀತಿ ಈಗಲೂ ಪ್ರತಿ ವಾರ್ಡ್‌ಗೆ 25ಲಕ್ಷ ನೀಡಿ ಎಂದು ಸಲಹೆ ನೀಡಿದರು. ಇದಕ್ಕೆ ಸಾಥ್‌ ನೀಡಿದ ಸದಸ್ಯರೆಲ್ಲ ಎದ್ದು ನಿಂತು ಅನುದಾನ ಘೋಷಣೆ ಮಾಡದ ಹೊರತು ಮುಂದಿನ ಚರ್ಚೆಗೆ ಅವಕಾಶ ನೀಡಲಾಗದು ಎಂದು ಪಟ್ಟು ಹಿಡಿದರು. 

ಕೊನೆಗೆ ಇದಕ್ಕೆ ಮಣಿದ ಮೇಯರ್‌, ಪ್ರತಿ ವಾರ್ಡ್‌ಗೆ 25 ಲಕ್ಷ ರೂ.ಗಳ ಅನುದಾನ ಘೋಷಣೆ ಮಾಡಿದರು. ಪಾಲಿಕೆಗೆ ಬಂದಿರುವ 3 ವಿಶೇಷ 100 ಕೋಟಿ ಅನುದಾನ ಪೈಕಿ ಕೈಗೊಳ್ಳಬೇಕಿರುವ ಕಾಮಗಾರಿಗಳ ವಿಳಂಬ ಬಗ್ಗೆ ಕೆಲವು ಸದಸ್ಯರು ಪ್ರಶ್ನಿಸಿದರು. ತಾಂತ್ರಿಕ ದೋಷಗಳ ನೆಪದಲ್ಲಿ ವಿಳಂಬ ಸರಿಯಲ್ಲ. ಇದರಿಂದ ಜನರಿಂದ ನಾವು ಬೈಯಿಸಿಕೊಳ್ಳುತ್ತಿದ್ದೇವೆ. ಅದರಲ್ಲೂ ಹಿರಿಯ ಸದಸ್ಯರ ವಾರ್ಡ್‌ಗಳಲ್ಲೇ ಕಾಮಗಾರಿಗಳು ಸರಿಯಾಗಿ ಆರಂಭಗೊಂಡಿಲ್ಲ.

ಇನ್ನೂ ಈಗಷ್ಟೇ ಹೊಸದಾಗಿ ಬಂದಿರುವ ಸದಸ್ಯರ ಪಾಡಂತೂ ಹೇಳತೀರದು. ಹೀಗಾಗಿ ಫೆ.11ರೊಳಗೆ ಎಲ್ಲ ಕಾಮಗಾರಿಗಳ ಆರಂಭಕ್ಕೆ ಸಮಯ ನಿಗದಿಗೊಳಿಸಿ  ಸೂಚನೆ ನೀಡಿದರು. 100 ಕೋಟಿ ವಿಶೇಷ ಅನುದಾನ ನೀಡಿದ ಸರ್ಕಾರ ಹಲವು ಮಾರ್ಗದರ್ಶಿಗಳನ್ನು ರೂಪಿಸಿದೆ. ಅಲ್ಲದೇ, ಸರ್ಕಾರದ ಮೇಲ್ವಿಚಾರಣೆ ಮೇಲೆಯೇ ಈ ಕೆಲಸಗಳು ನಡೆಯಬೇಕಾದ ಕಾರಣ ತಡವಾಗಿದೆ.  ಫೆ.10ರ ವರೆಗೆ ವರ್ಕ್‌ ಆರ್ಡರ್‌ ಕೊಡಲಿದ್ದೇವೆ ಎಂದು ಆಯುಕ್ತ ಸಿದ್ಧಲಿಂಗಯ್ಯ ಹಿರೇಮಠ ಸ್ಪಷ್ಟಪಡಿಸಿದರು.   

ಟಾಪ್ ನ್ಯೂಸ್

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ

Hubli; ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ

Hubli ಘಟನೆಗಳಿಗೆ ಪೋಲಿಸ್ ಇಲಾಖೆಯ ಭ್ರಷ್ಟಾಚಾರವೇ ಕಾರಣ: ಅರವಿಂದ ಬೆಲ್ಲದ್

Hubli ಘಟನೆಗಳಿಗೆ ಪೊಲೀಸ್ ಇಲಾಖೆಯ ಭ್ರಷ್ಟಾಚಾರವೇ ಕಾರಣ: ಅರವಿಂದ ಬೆಲ್ಲದ್

abh

Hubli; ಫಿನಾಯಿಲ್ ಸೇವಿಸಿದ ಅಂಜಲಿ ಅಂಬಿಗೇರ ಸಹೋದರಿ

police crime

Hubli; ನೇಹಾ & ಅಂಜಲಿ ಹತ್ಯೆ ಪ್ರಕರಣ: ಡಿಸಿಪಿ ತಲೆದಂಡ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police crime

National Conference ರೋಡ್‌ ಶೋ ವೇಳೆ ಮೂವರಿಗೆ ಚಾಕು ಇರಿತ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.