50 ಕೋಟಿ ಹಂಚಲು ಡಿಕೆಶಿ ಅಣಿ: ರೇಣುಕಾಚಾರ್ಯ
Team Udayavani, May 17, 2019, 11:18 AM IST
ಕುಂದಗೋಳ: ಬೆನಕನಹಳ್ಳಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಪರ ರೇಣುಕಾಚಾರ್ಯ ಮತಯಾಚನೆ ಮಾಡಿದರು.
ಕುಂದಗೋಳ: ಉಪ ಚುನಾವಣೆಯಲ್ಲಿ ಡಿ.ಕೆ. ಶಿವಕುಮಾರ ಅವರು ಶತಾಯ ಗತಾಯವಾಗಿ ಕುಸುಮಾವತಿ ಅವರನ್ನು ಗೆಲ್ಲಿಸಲು ವಾಮಮಾರ್ಗದ ಮೂಲಕ ಯತ್ನಿಸುತ್ತಿದ್ದು, ಕ್ಷೇತ್ರಾದ್ಯಂತ ಮತದಾರರಿಗಾಗಿ 50 ಕೋಟಿ ಹಣ ಹಂಚುವ ಕಾರ್ಯಕ್ಕೆ ಅಣಿಯಾಗುತ್ತಿದ್ದಾರೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ಆರೋಪಿಸಿದರು.
ಬೆನಕನಹಳ್ಳಿ ಗ್ರಾಮದಲ್ಲಿ ಮಾತನಾಡಿದ ಅವರು, ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರನ್ನು ಮತ್ತು ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಹಣದ ಮೂಲಕ ಕ್ಷೇತ್ರದ ಜನತೆಯನ್ನು ಕೊಳ್ಳುವ ಹುನ್ನಾರ ನಡೆಸಿದ್ದು, ಸಚಿವರ ಬೆಂಗಾವಲು ವಾಹನ ಮೂಲಕ ಹಣ ಹಂಚುತ್ತಿದ್ದಾರೆ. ಚುನಾವಣಾಧಿಕಾರಿಗಳು ತಕ್ಷಣ ಸಚಿವರಿಗೆ ನೀಡಿದ ಬೆಂಗಾವಲನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.
ಡಿ.ಕೆ. ಶಿವಕುಮಾರ ಮುಕ್ತಿ ಮಂದಿರಕ್ಕೆ ಹೋಗಿ ಹುಟ್ಟುಹಬ್ಬ ಆಚರಿಸುವ ಮೂಲಕ ಲಿಂಗಾಯತ ಮತಗಳ ಮೇಲೆ ಕಣ್ಣುಹಾಕಿದ್ದಾರೆ. ಎಂ.ಬಿ. ಪಾಟೀಲ ಹಾಗೂ ಡಿಕೆಶಿ ಧರ್ಮ ವಿಚಾರದಲ್ಲಿ ಡ್ರಾಮಾ ಮಾಡುತ್ತಿದ್ದಾರೆ. ಮತದಾರರು ಪ್ರಜ್ಞಾವಂತರಿದ್ದು, ಬಿಎಸ್ವೈ ಹಾಗೂ ಚಿಕ್ಕನಗೌಡ್ರ ಮಾಡಿದ ಅಭಿವೃದ್ಧಿ ಕಾರ್ಯಗಳು ಅವರ ಗೆಲುವಿಗೆ ಕಾರಣವಾಗಲಿವೆ ಎಂದು ಹೇಳಿದರು.
ತಾಪಂ ಸದಸ್ಯ ಗುರುಶಿದ್ಧಗೌಡ ಮೇಲ್ಮಾಳ್ಗಿ, ವಿರೂಪಾಕ್ಷಪ್ಪ, ಗದಿಗೆಪ್ಪ ರಾಯನಾಳ, ಶ್ರೀಕಾಂತ ಹೂಗಾರ, ಬಸವರಾಜ ಶಿವಕ್ಕನವರ, ಶಿವಾನಂದ ನವಲಗುಂದ, ಬಸುರಾಜ ಹೂಗಾರ, ಯೋಗೇಶ ಶಿವಳ್ಳಿ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ