ಹುಬ್ಬಳ್ಳಿ ರೈಲ್ವೆ ನಿಲ್ದಾಣ ಭದ್ರತೆಗೆ “ಆರ್‌ಎಸ್‌ಪಿಎಫ್‌’ ಬಲ


Team Udayavani, Feb 27, 2020, 12:01 PM IST

huballi-tdy-1

ಹುಬ್ಬಳ್ಳಿ: ನಗರದ ರೈಲ್ವೆ ನಿಲ್ದಾಣ ಹಾಗೂ ಯಾರ್ಡ್‌ನಲ್ಲಿ ಹೆಚ್ಚಿನ ಭದ್ರತೆ ಹಾಗೂ ಪ್ರಯಾಣಿಕರ ಸುರಕ್ಷತೆಗಾಗಿ ರೈಲ್ವೆ ವಿಶೇಷ ಸುರಕ್ಷಾ ಬಲದ (ಆರ್‌ಎಸ್‌ಪಿಎಫ್‌) ಕಂಪನಿಯೊಂದು ಹುಬ್ಬಳ್ಳಿಗೆ ಆಗಮಿಸಿದೆ.

ರೈಲ್ವೆ ನಿಲ್ದಾಣ ಹಾಗೂ ಆವರಣಗಳಲ್ಲಿ ಅಹಿತಕರ ಘಟನೆಗಳು, ಅವಘಡಗಳನ್ನು ತಡೆಗಟ್ಟಲು ಹಾಗೂ ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಹಾಗೂ ಪ್ರಯಾಣಿಕರ ಸುರಕ್ಷತೆ ಹಾಗೂ ನಿಲ್ದಾಣ ಮತ್ತು ಯಾರ್ಡ್‌ನಲ್ಲಿಹೆಚ್ಚಿನ ಭದ್ರತೆ ದೃಷ್ಟಿಯಿಂದ ಆರ್‌ಎಸ್‌ಪಿಎಫ್‌ನ ಅಂದಾಜು 98 ಜನರುಳ್ಳ ಒಂದು ಕಂಪನಿಯು ನೈಋತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗಕ್ಕೆ ಆಗಮಿಸಿದೆ. ಈ ಕಂಪನಿಯು ಮಂಗಳವಾರ ರಾತ್ರಿಯೇ ನಗರಕ್ಕೆ ಆಗಮಿಸಿದ್ದು, ಬುಧವಾರದಿಂದ ಕರ್ತವ್ಯದಲ್ಲಿ ತೊಡಗಿದೆ.

ಈ ವಿಶೇಷ ಪಡೆಯು ರೈಲ್ವೆ ನಿಲ್ದಾಣ ಮತ್ತು ಯಾರ್ಡ್‌ ಹಾಗೂ ರಾತ್ರಿ ಸಂದರ್ಭದಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಪ್ರಮುಖ 10 ರೈಲುಗಳಲ್ಲಿ ಭದ್ರತೆ ಕೈಗೊಳ್ಳಲಿದೆ. ಈ ವಿಶೇಷ ಪಡೆಯನ್ನು ಭದ್ರತೆಗಾಗಿ ರೈಲ್ವೆ ನಿಲ್ದಾಣದ ಪ್ರವೇಶ ದ್ವಾರ, ಪ್ಲಾಟ್‌ಫಾರ್ಮ್ಗಳು, ಯಾರ್ಡ್‌, ಗದಗ ಮತ್ತು ಧಾರವಾಡ ಎಂಡ್‌ ಕಡೆಗೆ ಪೆಟ್ರೋಲಿಂಗ್‌ ಹಾಗೂ ಟ್ರ್ಯಾಕ್‌ ಪೆಟ್ರೋಲಿಂಗ್‌ ಗೆ ನಿಯೋಜಿಸಲಾಗಿದೆ.

ನಿಲ್ದಾಣದ ಎಲ್ಲೆಡೆಯ ಪಾಯಿಂಟ್ಸ್‌ಗಳಲ್ಲಿ ಭದ್ರತೆ ಒದಗಿಸಲಾಗಿದೆ. ಈ ವಿಶೇಷ ಪಡೆಯು ಮೀಸಲು ಬಲವಾಗಿದ್ದು, ತುರ್ತು ಪರಿಸ್ಥಿತಿಯಲ್ಲಿ ಭದ್ರತೆ ಮತ್ತು ಸುರಕ್ಷತೆ ಕೈಗೊಳ್ಳುವಲ್ಲಿ ಪ್ರಮುಖವಾಗಿ ಕಾರ್ಯನಿರ್ವಹಿಸಲಿದೆ. ಭದ್ರತೆ ಮತ್ತು ಸುರಕ್ಷತಾ ದೃಷ್ಟಿಯಿಂದ ಸದ್ಯ ಈ ವಿಶೇಷ ಪಡೆಯನ್ನು ಎರಡು ತಿಂಗಳ ಮಟ್ಟಿಗೆ ಹುಬ್ಬಳ್ಳಿಯ ರೈಲ್ವೆ ನಿಲ್ದಾಣಕ್ಕೆ ಕರೆಯಿಸಲಾಗಿದೆ. ಈ ಪಡೆಯು ಕೆಎಸ್‌ಆರ್‌ಪಿ ರೀತಿ ತುರ್ತು ಪರಿಸ್ಥಿತಿಯಲ್ಲಿ ಇಲಾಖೆಯ ಇತರೆಡೆಯ ಪ್ರದೇಶಗಳಲ್ಲೂ ಕಾರ್ಯನಿರ್ವಹಿಸಲಿದೆ ಎಂದು ಮೂಲಗಳು ತಿಳಿಸಿವೆ.

ನಿಲ್ದಾಣದಲ್ಲಿ ಅನುಮಾನಸ್ಪದ ವಸ್ತುಸ್ಫೋಟ: ಇಲ್ಲಿನ ರೈಲ್ವೆ ನಿಲ್ದಾಣದಲ್ಲಿ ಅಕ್ಟೋಬರ್‌ 21ರಂದು ಅನುಮಾನಸ್ಪದ ವಸ್ತುವೊಂದು ಸ್ಫೋಟಗೊಂಡು ಆತಂಕ ಸೃಷ್ಟಿಸಿತ್ತು. ಈ ವಸ್ತುವನ್ನು ವಿಜಯವಾಡ-ಹುಬ್ಬಳ್ಳಿ ಅಮರಾವತಿ ಎಕ್ಸ್‌ಪ್ರೆಸ್‌ನ ಬೋಗಿಯಲ್ಲಿ ಇಡಲಾಗಿತ್ತು. ಅದನ್ನು ತಪಾಸಣೆ ಮಾಡುವಾಗ ಸ್ಫೋಟಗೊಂಡು ವೆಂಡರ್‌ನೊಬ್ಬ ಗಂಭೀರ ಗಾಯಗೊಂಡಿದ್ದ, ರೈಲ್ವೆ ಸ್ಟೇಶನ್‌ ಮಾಸ್ತರ್‌ ಅವರ ಕಚೇರಿಗೆ ಅಳವಡಿಸಿದ್ದ ಗಾಜು ಪುಡಿ ಪುಡಿಯಾಗಿದ್ದನ್ನು ಸ್ಮರಿಸಬಹುದು. ಈ ಸ್ಫೋಟ ಘಟನೆ ಕುರಿತು ಸ್ಥಳೀಯ ರೈಲ್ವೆ ಠಾಣೆ ಪೊಲೀಸರಿಂದ ತನಿಖೆ ನಡೆಯುತ್ತಲೇ ಇದೆ. ಆದರೆ ಈ ಸ್ಫೋಟಕ ವಸ್ತುವನ್ನು ಯಾರು ಎಲ್ಲಿಂದ ಕಳುಹಿಸಿದ್ದರು ಎಂಬುದರ ಕುರಿತು ಇದುವರೆಗೂ ತನಿಖಾ ತಂಡಕ್ಕೆ ಸುಳಿವು ದೊರೆತ್ತಿಲ್ಲ.

ನಗರದ ರೈಲ್ವೆ ನಿಲ್ದಾಣದಲ್ಲಿ ಅಹಿತಕರ ಘಟನೆ, ಅವಘಡಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚಿನ ಭದ್ರತೆಗಾಗಿ ಹಾಗೂ ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ಆರ್‌ಎಸ್‌ಪಿಎಫ್‌ನ ಒಂದು ಕಂಪನಿಯು ಆಗಮಿಸಿದ್ದು, ಈ ಪಡೆಯು ರೈಲ್ವೆ ನಿಲ್ದಾಣ ಸೇರಿದಂತೆ ಯಾರ್ಡ್‌, ರೈಲುಗಳಲ್ಲಿ ಭದ್ರತೆ ಕೈಗೊಳ್ಳಲಿದೆ. ತುರ್ತು ಪರಿಸ್ಥಿತಿ ಸಂದರ್ಭಗಳಲ್ಲಿ ಈ ಪಡೆಯು ಇತರೆ ಪ್ರದೇಶಗಳಲ್ಲೂ ಕಾರ್ಯನಿರ್ವಹಿಸಲಿದೆ. ಸದ್ಯ ಎರಡು ತಿಂಗಳ ಮಟ್ಟಿಗೆ ಈ ಪಡೆಯು ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಕಾರ್ಯನಿರ್ವಹಿಸಲಿದೆ. -ವಲ್ಲೇಶ್ವರ ಟಕೋಲಾ, ಹಿರಿಯ ವಿಭಾಗೀಯ ಭದ್ರತಾ ಆಯುಕ್ತ, ನೈಋತ್ಯ ರೈಲ್ವೆ ವಲಯ.

 

-ಶಿವಶಂಕರ ಕಂಠಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.