ಧಾರವಾಡ: ಅಖಿಲ ಭಾರತೀಯ ಆರೆಸ್ಸೆಸ್ ಬೈಠಕ್ ಗೆ ಚಾಲನೆ
Team Udayavani, Oct 28, 2021, 11:30 AM IST
ಧಾರವಾಡ: ಇಂದಿನಿಂದ ಮೂರು ದಿನಗಳ ಕಾಲ (ಅ.28, 29 ಮತ್ತು 30ರಂದು) ಹೊರವಲಯದ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರದಲ್ಲಿ ಆಯೋಜಿಸಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಖಿಲ ಭಾರತೀಯ ಕಾರ್ಯಕಾರಿ ಮಂಡಳಿ ಬೈಠಕ್ ಗೆ ಇಂದು ಚಾಲನೆ ಲಭಿಸಿದೆ.
ಆರ್ ಎಸ್ಎಸ್ ನ ಸರಸಂಘ ಚಾಲಕ ಡಾ. ಮೋಹನ್ ಭಾಗವತ್ ಮತ್ತು ಸರಕಾರ್ಯವಾಹ (ಪ್ರಧಾನ ಕಾರ್ಯದರ್ಶಿ) ದತ್ತಾತ್ರೇಯ ಹೊಸಬಾಳೆ ಅವರು ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡುವ ಮೂಲಕ ಬೈಠಕ್ ಗೆ ಚಾಲನೆ ನೀಡಿದರು.
ಬೈಠಕ್ ಹಿನ್ನೆಲೆಯಲ್ಲಿ ಸುಂದರ ವೇದಿಕೆ ಸಜ್ಜುಗೊಳಿಸಿದ್ದು, ಕಿತ್ತೂರು ರಾಣಿ ಚೆನ್ನಮ್ಮ, ಬಸವಣ್ಣ, ಕನಕ-ಪುರಂದರ, ಸೇರಿದಂತೆ ಕರ್ನಾಟಕದ ಮಹಾನ್ ಚೇತನಗಳ ಭಾವಚಿತ್ರದ ಫಲಕ ಅಳವಡಿಸಲಾಗಿದೆ.
ಇದನ್ನೂ ಓದಿ:ಕಾಲೇಜಿನಲ್ಲಿ ಪಾಕಿಸ್ತಾನ ಪರ ಘೋಷಣೆಗಳನ್ನು ವಿರೋಧಿಸಿದ್ದ ವಿದ್ಯಾರ್ಥಿನಿಗೆ ಜೀವ ಬೆದರಿಕೆ
ರಾಷ್ಟೊತ್ಥಾನ ವಿದ್ಯಾಕೇಂದ್ರ ಮತ್ತು ಸುತ್ತಲಿನ ಪ್ರದೇಶದ ಪ್ರಮುಖ ರಸ್ತೆಗಳು, ವೃತ್ತ ಗಳಲ್ಲಿ ಭಗಾಧ್ವಜಗಳು ಹಾರಾಟ ಆರಂಭಿಸಿದ್ದು, ಕೇಸರಿ ಬಣ್ಣದ ಬಾವುಟ ಗಳಿಂದ ಅಲ್ಲಲ್ಲಿ ಅಲಂಕರಿಸಲಾಗಿದೆ.
ಅಖಿಲ ಭಾರತೀಯ, ಕ್ಷತ್ರೀಯ ಮತ್ತು ಪ್ರಾಂತ ಸ್ತರದ ಕಾರ್ಯಕರ್ತರು ಈ ಬೈಠಕ್ ನಲ್ಲಿ ಭಾಗವಹಿಸಿದ್ದು, ದೇಶಾದ್ಯಂತ ಸುಮಾರು 350 ಪ್ರತಿನಿಧಿಗಳು ಈ ಬೈಠಕ್ ನಲ್ಲಿ ಉಪಸ್ಥಿತರಿದ್ದಾರೆ.
ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ಪ್ರತಿತಂತ್ರ, ಬಿಜೆಪಿ ಸರ್ಕಾರದಲ್ಲಿನ ಜನಪ್ರಿಯ ಯೋಜನೆಗಳ ಜಾರಿ, ಸ್ವಾತಂತ್ರ್ಯ ಅಮೃತ ಮಹೋತ್ಸವ ಕುರಿತು ಇನ್ನಷ್ಟು ಕಾರ್ಯಕ್ರಮ ಗಳ ರಚನೆ ಸೇರಿದಂತೆ, ಕರ್ನಾಟಕದಲ್ಲಿ ಬಿಜೆಪಿಯನ್ನು ಇನ್ನಷ್ಟು ಗಟ್ಟಿಗೊಳಿಸುವ ಕುರಿತು ಇಲ್ಲಿ ಕಾರ್ಯತಂತ್ರ ರಚನೆಯಾಗಲಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
MUST WATCH
ಹೊಸ ಸೇರ್ಪಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್