ಸೋಯಾಬೀನ್‌ ಬೆಳೆಗೆ ರಸ್ಟ್‌ ಫಂಗಸ್‌ ಕಾಟ | ಸೋಯಾ ಬೆಳೆದ ರೈತರೇ ಗಯಾ

ಸರ್ಕಾರದ ಬೀಜವೇ ಕಳಪೆಯಾಗಿದೆಯೇ? | 20 ಸಾವಿರ ಎಕರೆಯಷ್ಟು ಬೆಳೆ ಹಾನಿ | 

Team Udayavani, Sep 3, 2021, 10:10 PM IST

ghdfyhrdt

ವರದಿ: ಬಸವರಾಜ ಹೊಂಗಲ

ಧಾರವಾಡ: ಇಷ್ಟೊತ್ತಿಗಾಗಲೇ ಕಾಯಿಗಳಲ್ಲಿ ಮುತ್ತಿನ ಬಣ್ಣದ ಕಾಳುಗಳು ಕಟ್ಟಬೇಕಾಗಿತ್ತು. ಬೆಳೆಯ ತಪ್ಪಲು ಸ್ವತ್ಛಂದವಾಗಿ ಒಣಗಿ ದನಕರುಗಳಿಗೆ ಹೊಟ್ಟಾಗಬೇಕಿತ್ತು. ಬಿತ್ತಿದ ರೈತರಿಗೆ ಮಾಡಿದ ಖರ್ಚು ಹೊರಗೆ ಬಂದು ಕನಿಷ್ಟ ಎಕರೆಗೆ 10 ಸಾವಿರ ರೂ. ಲಾಭವಾಗಬೇಕಿತ್ತು. ಆದರೆ ಇದ್ಯಾವುದು ಆಗದೇ, ಸೋಯಾ ಬೆಳೆಗೆ ಜಂಗು ರೋಗ (ತುಕ್ಕು ಅಥವಾ ಕುಂಕುಮ ರೋಗ) ತಗುಲಿದ್ದು, ಪ್ರತಿ ಎಕರೆಗೆ 10 ಸಾವಿರದಷ್ಟು ಖರ್ಚೇ ಮೈ ಮೇಲೆ ಬಂದಿದ್ದು, ರೈತರು ಸಂಕಷ್ಟದ ಸುಳಿಗೆ ಸಿಲುಕುವಂತಾಗಿದೆ.

ಬೇಲಿಯೇ ಎದ್ದು ಹೊಲ ಮೈದರೆ… ತಾಯಿ ಹಾಲೇ ನಂಜಾದರೆ ಇನ್ನಾರಿಗೆ ಹೇಳುವುದು? ಎನ್ನುವಂತಾಗಿದೆ ಅರೆಮಲೆನಾಡು ಸೆರಗಿನ ತಾಲೂಕುಗಳಲ್ಲಿ ಈ ವರ್ಷ ಸೋಯಾ ಬಿತ್ತಿದ ರೈತರ ಸ್ಥಿತಿ. ಕಳಪೆ ಬೀಜಗಳನ್ನು ಖಾಸಗಿ ಕಂಪನಿಗಳು ಕೊಟ್ಟರೆ ಅವರ ಮೇಲೆ ದೂರು ದಾಖಲಿಸಿ ಕ್ರಮ ಕೈಗೊಳ್ಳಬಹುದು. ಆದರೆ ಸರ್ಕಾರವೇ ರೈತ ಸಂಪರ್ಕ ಕೇಂದ್ರಗಳ ಮೂಲಕ ಕಳಪೆ ಬೀಜ ಹಂಚಿಕೆಯಾಗಿವೆ ಎನ್ನುವ ಆರೋಪ ಕೇಳಿಬರುತ್ತಿದೆ. ಇದೀಗ ಸೋಯಾ ಬೆಳೆ ನೆಲಕಚ್ಚಿ ಕುರುಕಲಾಗಿದ್ದು, ಯಾರನ್ನು ಹೊಣೆ ಮಾಡುವುದು? ಯಾರಿಗೆ ಶಿಕ್ಷೆ ಕೊಡುವುದು?

ಜಿಲ್ಲೆಯಲ್ಲಿ ಈ ವರ್ಷ ಮುಂಗಾರಿನಲ್ಲಿ ಅಂದಾಜು 33 ಸಾವಿರ ಹೆಕ್ಟೇರ್‌ನಷ್ಟು ಸೋಯಾ ಅವರೆ ಬಿತ್ತನೆಯಾಗಿದೆ. ಸೋಯಾ ಬಿತ್ತನೆ ಹೆಚ್ಚಲು ಪ್ರಮುಖ ಕಾರಣ, ಈ ಬೆಳೆ ಕೇವಲ ಮೂರು ತಿಂಗಳಲ್ಲಿ ಕಟಾವಿಗೆ ಬರುತ್ತಿದ್ದು, ಇದನ್ನು ತೆಗೆದು, ಹಿಂಗಾರಿಗೆ ಬಿಳಿಜೋಳ ಬೆಳೆಯಲು ಈ ಭಾಗದ ರೈತರಿಗೆ ಅನುಕೂಲವಾಗುತ್ತಿದೆ. ಸೋಯಾ ಅವರೆಗೆ ಉತ್ತಮ ಮಾರುಕಟ್ಟೆ ಇದ್ದು, ಕೈ ತುಂಬ ಹಣ ಬರುತ್ತದೆ. ಹಿಂಗಾರಿನಲ್ಲಿ ಬಿಳಿಜೋಳ ರೊಟ್ಟಿಗೆ ಊಟವಾಗುತ್ತದೆ ಎನ್ನುವ ಲೆಕ್ಕಾಚಾರದಲ್ಲಿ ರೈತರು ಈ ಭಾಗದಲ್ಲಿ ಸೋಯಾ ಅವರೆಗೆ ಮೊರೆ ಹೋಗಿದ್ದಾರೆ. ಆದರೆ ಈ ವರ್ಷ ಕೃಷಿ ಇಲಾಖೆಯೇ ಮಾಡಿದ ಎಡವಟ್ಟು ರೈತರಿಗೆ ಪ್ರಾಣ ಸಂಕಟ ತಂದೊಡ್ಡಿದೆ.

ಬದಲಾದ ಬೆಳೆ ವಿಧಾನ:

ಒಂದು ಅರ್ಥದಲ್ಲಿ ಅರೆಮಲೆನಾಡು ಸೆರಗಿನ ಭೂಮಿ ಕಳೆದ ಹತ್ತು ವರ್ಷಗಳ ಹಿಂದಷ್ಟೇ ಅಪ್ಪಟ ದೇಶಿ ಭತ್ತ ಬೆಳೆಯುವ 47ಕ್ಕೂ ಹೆಚ್ಚು ದೇಶಿ ತಳಿ ಘಮ ಸೂಸುವ ಭತ್ತಗಳನ್ನು ಬೆಳೆದು ಹೊರರಾಜ್ಯಕ್ಕೂ ಅಕ್ಕಿಯನ್ನು ರಫ್ತು ಮಾಡುವ ಭತ್ತದ ಕಣಜವಾಗಿತ್ತು. ಧಾರವಾಡ, ಅಳ್ನಾವರ, ಕಲಘಟಗಿ ತಾಲೂಕಿನಾದ್ಯಂತ ಬೆಳೆಯುತ್ತಿದ್ದ ಕುರಿಗೆ ಬಿತ್ತನೆಯ ಭತ್ತಕ್ಕೆ ಅವಲಕ್ಕಿ, ಕುಚಲಕ್ಕಿಗೆ ಭಾರಿ ಬೇಡಿಕೆ ಇತ್ತು. ಆದರೆ ಮಳೆ ಕೈ ಕೊಟ್ಟಿದ್ದರಿಂದ ಸತತ ಬರಗಾಲದಿಂದಾಗಿ ಈ ಪ್ರದೇಶದಲ್ಲಿನ ಬೆಳೆ ಪದ್ಧತಿಯೇ ಬದಲಾಗಿ ಹೋಯಿತು. ಉತ್ತರ ಕನ್ನಡ ಜಿಲ್ಲೆ ಹಳಿಯಾಳದಲ್ಲಿ ಪ್ಯಾರಿ ಶುಗರ್ ಕಂಪನಿ ಸ್ಥಾಪನೆಯಾದ ಮೇಲಂತೂ ಈ ಭಾಗದಲ್ಲಿ ಭತ್ತ ಸಂಪೂರ್ಣ ಮಾಯವಾಗಿ ಇದೀಗ ಶೇ.50 ಭೂ ಪ್ರದೇಶವನ್ನು ಕಬ್ಬು ಆಕ್ರಮಿಸಿಕೊಂಡಿದೆ. ಇನ್ನುಳಿದ ಶೇ.23 ಪ್ರದೇಶವನ್ನು ಸೋಯಾ ಅವರೆ ಆವರಿಸಿಕೊಂಡಿದೆ.

ಹಿಂಗ್ಯಾಕಾತು?:

ಸೋಯಾ ಅವರೆಯನ್ನು ಪ್ರತಿವರ್ಷದಂತೆ ಈ ವರ್ಷ ಕೂಡ ಆಯಾ ರೈತ ಸಂಪರ್ಕ ಕೇಂದ್ರಗಳ ಮೂಲಕ ಸರ್ಕಾರವೇ ನಿಗದಿ ಪಡಿಸಿದ ದರಕ್ಕೆ ದೃಢೀಕರಿಸಲ್ಪಟ್ಟ ಬೀಜಗಳನ್ನೇ ತಂದು ರೈತರು ಬಿತ್ತನೆ ಮಾಡಿದ್ದರು. ಆರಂಭದಲ್ಲಿ ಬೆಳೆ ಹುಲುಸಾಗಿಯೇ ಬೆಳೆಯಿತು. ಆದರೆ ಸತತ ಮಳೆಯಾದಾಗ ಕೊಂಚ ಮಂಕಾದ ಸೋಯಾ ಬೆಳೆ ಮತ್ತೆ ಬಿರುಬಿಸಿಲಿಗೆ ಸಿಡಿದೆದ್ದು 2.5 ಅಡಿಯಷ್ಟು ಎತ್ತರಕ್ಕೆ ಬೆಳೆದು ಹುಲುಸಾಗಿ ಕಾಳಿನ ಗೊಂಚಲಿನ ಮಿಡಿ ಕಾಣಿಸಿಕೊಂಡಿತು. ಆದರೆ ಕಳೆದ 15 ದಿನಗಳಿಂದ ಇದ್ದಕ್ಕಿದ್ದಂತೆಯೇ ಸೋಯಾ ಬೆಳೆಗೆ ಬೆಂಕಿ ರೋಗ ಕಾಣಿಸಿಕೊಂಡು ಇಡೀ ಬೆಳೆಯೇ ತಪ್ಪಲು ಸುಟ್ಟುಕರುಕಲಾಗಿ ಹೊಲಕ್ಕೆ ಹೊಲವೇ ಒಣಗಿ ನಿಂತುಬಿಟ್ಟಿದೆ. ಸೋಯಾ ಅವರೆ ಪ್ರತಿ ಗಿಡದಲ್ಲಿನಕಾಳು ಜೊಪ್ಪೆಯಾಗಿದ್ದು, (ಬರೀ ಸಿಪ್ಪೆ ಮಾತ್ರ ಇದೆ. ಒಳಗಡೆ ಹುಲುಸಾದ ಕಾಳಿಲ್ಲ)ಜೊಳ್ಳು ಜೊಳ್ಳಾಗಿ ಬಿಟ್ಟಿದೆ. ಇದಕ್ಕೆ ಸರ್ಕಾರ ನೀಡಿದ ಕಳಪೆ ಬೀಜವೇ ಕಾರಣ ಎಂದು ರೈತರು ದೂರುತ್ತಿದ್ದಾರೆ.

ಬೆಳೆ ವಿಮೆ ಬರುವುದೇ?:

ಬೆಳೆಗೆ ತೀವ್ರ ಹಾನಿಯಾದಂತಾಗಿದ್ದು, ಇದು ವಾತಾವರಣದಲ್ಲಿನ ಅಧಿಕ ತೇವಾಂಶ ಮತ್ತು ಅಧಿಕ ಮಳೆ, ಅಧಿಕ ಬಿಸಿಲಿನ ಸಮಾಗಮದಿಂದ ಆಗಿದ್ದು, ಹವಾಮಾನ ಆಧಾರಿತ ಬೆಳೆವಿಮೆ ಅಡಿಯಲ್ಲಿ ರೈತರಿಗೆ ಬೆಳೆವಿಮೆ ಸಿಗಬೇಕಿದೆ. ಆದರೆ ಕಳೆದ ವರ್ಷ ಭತ್ತದ ಬೆಳೆಗೆ ಹವಾಮಾನ ವೈಪರಿತ್ಯವಾದರೂ ಈ ಭಾಗದ 10 ಸಾವಿರಕ್ಕೂ ಅಧಿಕ ರೈತರಿಗೆ ಇನ್ನೂ ಬೆಳೆವಿಮೆ ಹಣವೇ ಬಂದಿಲ್ಲ. ಹೀಗಾಗಿ ಇದರ ಬಗ್ಗೆಯೂ ರೈತರು ಹೆಚ್ಚು ನಿರೀಕ್ಷೆ ಇಟ್ಟುಕೊಳ್ಳದಂತಾಗಿದೆ.

ಪರಿಹಾರ ಕೊಡುವವರು ಯಾರು?:

ಅತೀ ಮಳೆ ಮತ್ತು ಬೆಳೆ ಹಾನಿಯಾದಾಗ ಸರ್ಕಾರವೇ ಪರಿಹಾರ ನೀಡಬೇಕು. ಆದರೆ ಅಂದಾಜು 22 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿನ ಸೋಯಾ ಅವರೆಗೆ ಬೆಂಕಿ ಬಿದ್ದಿದ್ದು, ಈವರೆಗೂ ಕೃಷಿ ಇಲಾಖೆಯಾಗಲಿ, ಈ ಭಾಗದ ಜನಪ್ರತಿನಿಧಿಗಳಾಗಲಿ ಈ ಬಗ್ಗೆ ಚಕಾರವೆತ್ತಿಲ್ಲ. ಎಲ್ಲರೂ ಇದೀಗ ಹು-ಧಾ ಮಹಾನಗರ ಪಾಲಿಕೆ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದಾರೆ. ಇನ್ನಾದರೂ ಜನಪ್ರತಿನಿಧಿಗಳು ಇತ್ತ ಗಮನ ಹರಿಸುವರೆ ಎಂದು ಕಾಯುತ್ತಿದ್ದಾರೆ ಅನ್ನದಾತರು.

ಕಳಪೆ ಬೀಜಕ್ಕೆ ಯಾರು ಹೊಣೆ?: ಕಳೆದ ವರ್ಷ ಹತ್ತಿ, ಗೋವಿನಜೋಳದ ಕಳಪೆ ಬೀಜಗಳ ಬಿಸಿ ತಟ್ಟಿತ್ತು. ಈ ಸಂದರ್ಭದಲ್ಲಿ ಜಿಲ್ಲಾಡಳಿತ ಕೆಲವು ಖಾಸಗಿ ಕಂಪನಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿತ್ತು. ಈ ವರ್ಷ ಸರ್ಕಾರದ ಕೇಂದ್ರಗಳಲ್ಲಿ ಪಡೆದುಕೊಂಡ ಸೋಯಾ ಬೀಜಕ್ಕೆ ರೋಗ ಬಿದ್ದಿದ್ದರಿಂದ ಸರ್ಕಾರದ ವಿರುದ್ಧ ಕ್ರಮ ತೆಗೆದುಕೊಳ್ಳುವವರು ಯಾರು? ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಮನೆಯಿಂದ ಬಿತ್ತನೆ ಮಾಡಿದ ಬೀಜಗಳು ಚೆನ್ನಾಗಿಯೇ ಹುಟ್ಟಿದ್ದು, ರೈತ ಸಂಪರ್ಕ ಕೇಂದ್ರಗಳ ಮೂಲಕ ಪಡೆದ ಬೀಜಗಳು ಮಾತ್ರ ಈ ರೀತಿಯಾಗಿವೆ. ಇನ್ನು ಯಾರನ್ನು ನಂಬುವುದು? ಎನ್ನುವ ಎಂದು ರೈತರು ಪ್ರಶ್ನಿಸುತ್ತಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.