ಸಾಯಿ ಮಂದಿರ ಆಡಳಿತಾಧಿಕಾರಿ ನೇಮಕಕ್ಕೆ ಒತ್ತಾಯ
Team Udayavani, May 23, 2017, 4:35 PM IST
ಹುಬ್ಬಳ್ಳಿ: ಸಾಯಿ ಮಂದಿರದಲ್ಲಿ ಆಡಳಿತ ಮಂಡಳಿಯವರೇ ಲೂಟಿ ಮಾಡುತ್ತಿದ್ದು ನ್ಯಾಯ ಯಾರ ಬಳಿ ಕೇಳಬೇಕು. ಶ್ರೀ ಶಿರಡಿ ಸಾಯಿ ಮಂದಿರಕ್ಕೆ ಈ ಕೂಡಲೇ ಆಡಳಿತಾಧಿಕಾರಿ ನೇಮಕ ಮಾಡುವ ಮೂಲಕ ಸೂಕ್ತ ತನಿಖೆ ನಡೆಸಬೇಕು ಎಂದು ಶ್ರೀರಾಮ ಸೇನಾ ಸಂಸ್ಥಾಪಕ ಪ್ರಮೋದ ಮುತಾಲಿಕ ಒತ್ತಾಯಿಸಿದರು.
ಈ ಕುರಿತು ವಿವಿಧ ಸಂಘಟನೆಗಳ ಆಶ್ರಯದಲ್ಲಿ ಸೋಮವಾರ ಶ್ರೀ ಶಿರಡಿ ಸಾಯಿ ಬಾಬಾ ಮಂದಿರದ ಆಡಳಿತ ಮಂಡಳಿ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಾಯಿ ಮಂದಿರದಲ್ಲಿ ಕಳೆದ ಹಲವು ವರ್ಷಗಳಿಂದ ಭ್ರಷ್ಟಾಚಾರ ನಡೆಯುತ್ತಿದೆ.
ಈ ಹಿಂದೆ ದೇಣಿಗೆ ಪೆಟ್ಟಿಗೆಯಲ್ಲಿ ಕಳ್ಳತನ ಮಾಡುವಾಗ ಸಿಕ್ಕಿ ಬಿದ್ದು ಅಮಾನತುಗೊಂಡ ವ್ಯಕ್ತಿಯೇ ಇದೀಗ ಆಡಳಿತ ಮಂಡಳಿಯ ಅಧ್ಯಕ್ಷನಾಗಿರುವುದು ವಿಪರ್ಯಾಸದ ಸಂಗತಿ. ಅಂತಹ ಭ್ರಷ್ಟನನ್ನು ಕೂಡಲೇ ವಜಾಗೊಳಿಸಬೇಕು, ಐದು ದಿನಗಳಲ್ಲಿ ಮಂದಿರಕ್ಕೆ ಆಡಳಿತಾಧಿಕಾರಿ ನೇಮಿಸಬೇಕು ಎಂದು ಮುತಾಲಿಕ ಒತ್ತಾಯಿಸಿದರು.
ಶೋಭಾ ಸವದತ್ತಿ ಮಾತನಾಡಿ, ಶ್ರೀ ಶಿರಡಿ ಸಾಯಿ ಬಾಬಾ ಮಂದಿರದಲ್ಲಿ ಕೆಲಸ ಮಾಡುತ್ತಿದ್ದ ನನ್ನ ಪತಿ ಸಿದ್ದಪ್ಪ ಸವದತ್ತಿ ಅವರನ್ನು ಇತ್ತೀಚೆಗೆ ತೆಗೆದು ಹಾಕಿದ್ದರು. ಅದನ್ನು ಮನಸ್ಸಿಗೆ ಹಚ್ಚಿಕೊಂಡು ಅವರು ಕಳೆದ 15 ದಿನಗಳ ಹಿಂದೆ ಮೃತಪಟ್ಟಿದ್ದಾರೆ. ಎರಡು ಪುಟ್ಟ ಮಕ್ಕಳಿದ್ದು ಅವರನ್ನು ಸಾಕುವುದು ಕಷ್ಟವಾಗಿದೆ.
ಮಂದಿರದಿಂದ ಏನಾದರೂ ಸಹಾಯ, ಸಹಕಾರ ನೀಡಬೇಕೆಂದು ಶೋಭಾ ತಮ್ಮ ಅಳಲು ತೋಡಿಕೊಂಡರು. ಮಂದಿರದ ಅರ್ಚಕ ಪಾಂಡುರಂಗ ಮುನವಳ್ಳಿ ಮಾತನಾಡಿ, ತನ್ನನ್ನು ಕೆಲಸದಿಂದ ತೆಗೆದುಹಾಕಿದ್ದು, ಅಲ್ಲಿ ನಾಲ್ಕು ಜನ ಭಟ್ಟರನ್ನು ತಂದಿಟ್ಟುಕೊಂಡಿದ್ದಾರೆ. ಮಂದಿರದ ವ್ಯವಸ್ಥಾಪಕ ಪರಮ ಭ್ರಷ್ಟನಾಗಿದ್ದು, ಮೊದಲು ಅವರನ್ನು ಕೆಲಸದಿಂದ ತೆಗೆದು ಹಾಕಬೇಕು ಎಂದು ಒತ್ತಾಯಿಸಿದರು.
ಇದಕ್ಕೂ ಪೂರ್ವದಲ್ಲಿ ದಾಜೀಬಾನ ಪೇಟೆ ತುಳಜಾಭವಾನಿ ದೇವಸ್ಥಾನದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಆಗಮಿಸಿ ತಹಶೀಲ್ದಾರಗೆ ಮನವಿ ಸಲ್ಲಿಸಲಾಯಿತು. ಅನಿಲ ಮಿಸ್ಕಿನ್, ದೀಪಕ ಜಾಧವ, ಸೇರಿದಂತೆ ಮೊದಲಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ