ವರೂರು ಕ್ಷೇತ್ರದಲ್ಲಿ ಮುನಿಶ್ರೀ ನೇಮಿಸಾಗರ ಮಹಾರಾಜರ ಸಲ್ಲೇಖನ ವ್ರತ
Team Udayavani, Mar 16, 2021, 3:45 PM IST
ಹುಬ್ಬಳ್ಳಿ: ತಾಲೂಕಿನ ವರೂರು ನವಗ್ರಹ ತೀರ್ಥ ಕ್ಷೇತ್ರದಲ್ಲಿ ಮುನಿಶ್ರೀ ನೇಮಿಸಾಗರ ಮಹಾರಾಜರು (88) ಸಲ್ಲೇಖನ ವ್ರತ ಸ್ವೀಕರಿಸಿದ್ದು, ಕಳೆದ 22 ದಿನಗಳಿಂದ ವ್ರತ ಆಚರಣೆಯಲ್ಲಿದ್ದಾರೆ.
ಮುನಿಶ್ರೀ ನೇಮಿಸಾಗರ ಮಹಾರಾಜರು ಮೂಲತಃ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಳ್ಳೊಳ್ಳಿ ಗ್ರಾಮದವರಾಗಿದ್ದಾರೆ. ಕಳೆದ22 ದಿನದಿಂದ ಕೈಗೊಂಡಿರುವ ಸಲ್ಲೇಖನ ವ್ರತ ಸುದೀರ್ಘವಾಗಿದ್ದು, ನಿತ್ಯ ಒಂದು ಬೊಗಸೆ ನೀರು ಅಥವಾ ಹಣ್ಣಿನ ರಸ ಸ್ವೀಕರಿಸುತ್ತಿದ್ದಾರೆ.
ಇದನ್ನೂ ಓದಿ:‘ಬ್ಲ್ಯಾಕ್ ಮೇಲ್ ಸಂಪುಟ’ ‘ಕಾಂಗ್ರೆಸ್ ಹಗೆತನ’: ಮತ್ತೆ ಕಾಂಗ್ರೆಸ್- ಬಿಜೆಪಿ ಟ್ವೀಟ್ ವಾರ್
ಆಚಾರ್ಯ ಗುಣಧರನಂದಿ ಮಹಾರಾಜರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುನಿಶ್ರೀ ನೇಮಿಸಾಗರ ಮಹಾರಾಜರು ಕೈಗೊಂಡಿರುವ ಸಲ್ಲೇಖನ ವ್ರತ ಸುದೀರ್ಘವಾಗಿದೆ. ಕೋವಿಡ್-19 ಹಿನ್ನೆಲೆಯಲ್ಲಿ ಜನರು ಮುನಿಶ್ರೀಗಳ ದರ್ಶನಕ್ಕೆ ಆಗಮಿಸಬಾರದು. ಈ ಪುಣ್ಯ ಕಾರ್ಯವನ್ನು ಭಕ್ತರಿಗೆ ಮುಟ್ಟಿಸಲು ನೇರಪ್ರಸಾರದ ವ್ಯವಸ್ಥೆ ಮಾಡಲಾಗಿದೆ. ಜೂಮ್ ಆ್ಯಪ್ ಮೂಲಕ ದರ್ಶನ ಪಡೆಯಬಹುದಾಗಿದ್ದು, ಯೂಸರ್ ಐಡಿ-5709887799, ಪಾಸವರ್ಡ್-1008. ಬೆಳಿಗ್ಗೆ ಹಾಗೂ ಸಂಜೆ 7 ರಿಂದ 8 ಗಂಟೆಗೆ ನೇರ ಪ್ರಸಾರವಿರುತ್ತದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ
ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್
ರಾಜ್ಯದಲ್ಲಿ ಎನ್ಕೌಂಟರ್ ಕಾನೂನು ಜಾರಿ ಅವಶ್ಯ: ಸಂತೋಷ್ ಲಾಡ್
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
MUST WATCH
ಹೊಸ ಸೇರ್ಪಡೆ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ