ಸಪ್ತಪದಿ ಬಡವರಿಗೆ ಅನುಕೂಲ


Team Udayavani, Mar 9, 2020, 11:58 AM IST

ಸಪ್ತಪದಿ ಬಡವರಿಗೆ ಅನುಕೂಲ

ಧಾರವಾಡ: ಅದ್ಧೂರಿ ಮದುವೆ ತಡೆ, ದುಂದು ವೆಚ್ಚಕ್ಕೆ ಕಡಿವಾಣ ಹಾಗೂ ಸರಳ ಸಾಮೂಹಿಕ ವಿವಾಹವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರದ ಮಹತ್ವಾಕಾಂಕ್ಷೆ ಯೋಜನೆಯಾದ “ಸಪ್ತಪದಿ’ ಬಡಜನರಿಗೆ ಅನುಕೂಲವಾಗಲಿದೆ ಎಂದು ಮುಜರಾಯಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಜಿಲ್ಲಾಡಳಿತ, ಜಿಪಂ ಹಾಗೂ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಸಹಯೋಗದಲ್ಲಿ ನಗರದ ಡಾ|ಮಲ್ಲಿಕಾರ್ಜುನ ಮನಸೂರ ಸಭಾಭವನದಲ್ಲಿ ಹಮ್ಮಿಕೊಂಡಿದ್ದ “ಸಪ್ತಪದಿ’ ಸರಳ ಸಾಮೂಹಿಕ ವಿವಾಹ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು  ಸರಳ ಸಾಮೂಹಿಕ ವಿವಾಹವಾಗುವ ವಧುವಿಗೆ ಧಾರೆ ಸೀರೆಗೆಂದು 10 ಸಾವಿರ ರೂ., 8ಗ್ರಾಂ. ಚಿನ್ನದ ಮಾಂಗಲ್ಯ ಮತ್ತು ವರನಿಗೆ 5 ಸಾವಿರ ರೂ. ಸೇರಿದಂತೆ ಒಂದು ಜೋಡಿ ವಧು-ವರನಿಗೆ ಒಟ್ಟು 55 ಸಾವಿರ ರೂ.ಗಳನ್ನು ಖರ್ಚು ಮಾಡಲಾಗುತ್ತಿದೆ. ವಿವಾಹಕ್ಕೆ ಬರುವ ವಧು-ವರರ ಬಂಧುಗಳಿಗೆ ಊಟೋಪಚಾರದ ವ್ಯವಸ್ಥೆಯನ್ನು ಸಂಬಂಧಿಸಿದ ದೇವಾಲಯದ ನಿಧಿಯಿಂದ ಮಾಡಲಾಗುತ್ತದೆ ಎಂದರು.

ಧಾರವಾಡದ ಸೋಮೇಶ್ವರ ದೇವಾಲಯ, ಹುಬ್ಬಳ್ಳಿಯ ಸಿದ್ಧಾರೂಢ ಮಠ, ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದ ಮಾರುತಿ ದೇವಸ್ಥಾನ, ಅಣ್ಣಿಗೇರಿಯ ಅಮೃತೇಶ್ವರ ದೇವಸ್ಥಾನ ಹಾಗೂ ಕಲಘಟಗಿಯ ಗ್ರಾಮದೇವತೆ ದೇವಸ್ಥಾನದಲ್ಲಿ ಸಪ್ತಪದಿ ಸರಳ ಸಾಮೂಹಿಕ ವಿವಾಹಗಳು ನಡೆಯಲಿವೆ. ಸಪ್ತಪದಿ ಸರಳ ಸಾಮೂಹಿಕ ವಿವಾಹಗಳು ಏ.26ರ ಅಕ್ಷಯ ತೃತೀಯ ಮೂಹೂರ್ತದಲ್ಲಿ ಮತ್ತು ಮೇ 24ರಂದು ಎರಡು ಹಂತದಲ್ಲಿ ನಡೆಯಲಿವೆ. ಮೊದಲ ಹಂತದ ಏ.26 ರಂದು ಸಪ್ತಪದಿ ಸರಳ ಸಾಮೂಹಿಕ ವಿವಾಹವಾಗ ಬಯಸುವವರು ಸಂಬಂಧಿಸಿದ ತಾಲೂಕಿನ ತಹಶೀಲ್ದಾರ್‌ ಕಚೇರಿಗಳಲ್ಲಿ ಮಾ.27 ರೊಳಗೆ ಅರ್ಜಿ ಸಲ್ಲಿಸಿ ತಮ್ಮ ಹೆಸರು ನೊಂದಾಯಿಸಬೇಕು ಎಂದು ತಿಳಿಸಿದರು.

ರಾಜ್ಯದ ವಿಧಾನಸಭೆಯ ಹಾಗೂ ವಿಧಾನ ಪರಿಷತ್‌ ಶಾಸಕರು, ಲೋಕಸಭಾ ಸದಸ್ಯರು ಭಾಗವಹಿಸಲು ಇಲಾಖೆಯಿಂದ ಕೋರಲಾಗಿದೆ. ಅನೇಕ ಧರ್ಮಗುರುಗಳು, ಮಠಾಧೀಶರು ಸಪ್ತಪದಿ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಿದ್ದಾರೆ. ಏ.26ರಂದು ನಡೆಯುವ ಸರಳ ಸಾಮೂಹಿಕ ವಿವಾಹದಲ್ಲಿ ಪಾಲ್ಗೊಂಡು ಈ ಯೋಜನೆ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಸುಬ್ರಹ್ಮಣ್ಯ ಕ್ಷೇತ್ರದಿಂದ 100 ಕೋಟಿ ರೂ., ಮೂಕಾಂಬಿಕೆ ಕ್ಷೇತ್ರದಿಂದ 80 ಕೋಟಿ ರೂ. ವಾರ್ಷಿಕ ಆದಾಯವಿದೆ. ಹೀಗೆ ಧಾರ್ಮಿಕ ದತ್ತಿ ಇಲಾಖೆಗೊಳಪಡುವ 100ಕ್ಕೂ ಅಧಿ ಕ ಧಾರ್ಮಿಕ ಮಠಗಳಿಗೆ ವಾರ್ಷಿಕ ಕೋಟಿ-ಕೋಟಿ ಹಣ ಸಂಗ್ರಹಗೊಳ್ಳುತ್ತಿದೆ. ಈ ಹಣವನ್ನು ಸಮಾಜದ ಸತ್ಕಾರ್ಯಗಳಿಗೆ ಸದ್ವಿನಿಯೋಗಿಸಲು ಸಪ್ತಪದಿ ಸರಳ ಸಾಮೂಹಿಕ ವಿವಾಹ ಏರ್ಪಡಿಸಿದೆ ಎಂದರು.

ಮಾರ್ಗಸೂಚಿಯ ಕರಪತ್ರ ಬಿಡುಗಡೆಗೊಳಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ವಿಶ್ವಾದ್ಯಂತ ವಿವಿಧ ರಾಷ್ಟ್ರಗಳಲ್ಲಿ ಕುಟುಂಬ ಕಲ್ಪನೆ ವಿನಾಶದತ್ತ ಸಾಗಿದೆ. ಏಕಾಂಗಿ ಜೀವನ, ಕೌಟುಂಬಿಕ ಬಿಕ್ಕಟ್ಟು ಹೆಚ್ಚಾಗಿ ಮಾನಸಿಕ ಅಶಾಂತಿ, ಅಪರಾಧ ಕೃತ್ಯಗಳಿಗೆ ಕಾರಣವಾಗುತ್ತಿದೆ. ಆದರೆ ಭಾರತದಲ್ಲಿ ಕುಟುಂಬ ವ್ಯವಸ್ಥೆ ಪವಿತ್ರವಾಗಿದ್ದು, ವಿವಾಹ ಸಂಸ್ಕಾರದ ಮೂಲಕ ಸತಿ-ಪತಿಯ ಪಾವಿತ್ರ್ಯ ಎತ್ತಿ ಹಿಡಿದಿದೆ. ಕುಟುಂಬ, ವಿವಾಹ, ಸಂಸ್ಕಾರಗಳಿಗೆ ಭಾರತದಲ್ಲಿ ಅತ್ಯಂತ ಗೌರವ, ಸಂಸ್ಕೃತಿ ಹಿನ್ನೆಲೆಯಿದೆ. ಸರ್ಕಾರ ಸಪ್ತಪದಿ ಸರಳ ಸಾಮೂಹಿಕ ವಿವಾಹ ಮೂಲಕ ಅದರ ಮಹತ್ವ ಹೆಚ್ಚಿಸುತ್ತಿದೆ. ಮತ್ತು ಬಡವರಿಗೆ, ಅಸಹಾಯಕರಿಗೆ ಹಾಗೂ ಆಸಕ್ತರಿಗೆ ಈ ಯೋಜನೆ ಮೂಲಕ ನೆರವಾಗುತ್ತಿದೆ ಎಂದರು.

ಶಾಸಕ ಅರವಿಂದ ಬೆಲ್ಲದ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಅಮೃತ ದೇಸಾಯಿ, ಸಿ.ಎಂ. ನಿಂಬಣ್ಣವರ, ಮಾಜಿ ಶಾಸಕಿ ಸೀಮಾ ಮಸೂತಿ, ಹುಡಾ ಅಧ್ಯಕ್ಷ ನಾಗೇಶ ಕಲಬುರಗಿ, ಜಿಪಂ ಸದಸ್ಯರಾದ ಕಲ್ಲಪ್ಪ ಪುಡಕಲಕಟ್ಟಿ, ಜಿಪಂ ಸದಸ್ಯರಾದ ನಾಗನಗೌಡ ಪಾಟೀಲ, ಚನ್ನಬಸಪ್ಪ ಮಟ್ಟಿ, ತಾಪಂ ಅಧ್ಯಕ್ಷ ಈರಪ್ಪ ಏಣಗಿ, ಜಿಪಂ ಸಿಇಒ ಡಾ|ಬಿ.ಸಿ. ಸತೀಶ ಸೇರಿದಂತೆ ವಿವಿಧ ಅಧಿಕಾರಿಗಳು ಇದ್ದರು.

ಸಪ್ತಪದಿ ಕುರಿತು ಡಾ|ಶಶಿಧರ್‌ ನರೇಂದ್ರ ವಿಶೇಷ ಉಪನ್ಯಾಸ ನೀಡಿದರು. ಡಿಸಿ ದೀಪಾ ಚೋಳನ್‌ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಆರತಿ ದೇವಶಿಖಾಮಣಿ ನಿರೂಪಿಸಿದರು. ಉಪವಿಭಾಗಾಧಿಕಾರಿ ಮಹ್ಮದ ಜುಬೇರ ವಂದಿಸಿದರು. ಇದಕ್ಕೂ ಮುನ್ನ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಡಿಸಿ ದೀಪಾ ಚೋಳನ್‌ ಸಪ್ತಪದಿ ರಥಕ್ಕೆ ಚಾಲನೆ ನೀಡಿದರು.

ಟಾಪ್ ನ್ಯೂಸ್

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Hubli ಅನ್ಯಕೋಮಿನ ಯುವಕನಿಂದ ಅತ್ಯಾಚಾರ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ‌ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.