ಸಂಜೆ 4:30 ಗಂಟೆಗೆ ಸರಾಫ ಅಂಗಡಿ ವಹಿವಾಟೂ ಬಂದ್
Team Udayavani, Jul 10, 2020, 11:15 AM IST
ಹುಬ್ಬಳ್ಳಿ: ಅವಳಿನಗರದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಗರದ ಸರಾಫ ಸಂಘದವರು ಅಂಗಡಿಗಳನ್ನು ಜು. 31ರ ವರೆಗೆ ಬೆಳಗ್ಗೆ 10ರಿಂದ ಸಂಜೆ 4:30 ಗಂಟೆ ವರೆಗೆ ಮಾತ್ರ ತೆರೆಯಲು ನಿರ್ಧರಿಸಿದ್ದಾರೆ.
ಜೊತೆಗೆ ಕರ್ಫ್ಯೂವನ್ನು ರಾತ್ರಿ 8 ಗಂಟೆ ಬದಲು ಸಂಜೆ 5 ಗಂಟೆಯಿಂದಲೇ ಜಾರಿಗೊಳಿಸಿ ಕೋವಿಡ್ 19 ಹರಡುವಿಕೆ ತಡೆಗಟ್ಟಬೇಕೆಂದು ಆಗ್ರಹಿಸಿ ತಹಶೀಲ್ದಾರ್ ಮುಖಾಂತರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ. ಸರಾಫ ಸಂಘದ ಪದಾಧಿಕಾರಿಗಳು, ಸದಸ್ಯರು ಸಭೆ ನಡೆಸಿ ಕೋವಿಡ್ ನಿಯಂತ್ರಣಕ್ಕೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಸರಕಾರದ ನಿರ್ದೇಶನಗಳನ್ನು ಪಾಲಿಸುವುದು ಬಹಳ ಅವಶ್ಯ. ಆ ನಿಟ್ಟಿನಲ್ಲಿ ತಮ್ಮ ವಹಿವಾಟುಗಳನ್ನು ಸಂಜೆಯೊಳಗೆ ಪೂರ್ಣಗೊಳಿಸಲು ನಿರ್ಧರಿಸಿದ್ದು, ಗುರುವಾರದಿಂದಲೇ ಅದನ್ನು ಜಾರಿಗೊಳಿಸಿದ್ದಾರೆ. ಸಭೆಯಲ್ಲಿ ಸಂಘದ ಅಧ್ಯಕ್ಷ ಪರಶುರಾಮ ಚಿಲ್ಲಾಳ, ಕಾರ್ಯದರ್ಶಿ ವಿಠuಲ ಪೂಜಾರಿ, ಗೋವಿಂದ ನಿರಂಜನ, ಶ್ರೀಕಾಂತ ಕರಿ, ಬಾಬು ಅಣವೇಕರ, ವೀರಣ್ಣಾ ಹೂಲಿ, ಶಿವಾನಂದ ಜೋಗಿನ, ನವರತ್ನರಾಜ ಸಂಘವಿ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ
Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್ ಸಲ್ಲಿಸಿಲ್ಲ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ