ಚಂದ್ರಶೇಖರ ಗುರೂಜಿ ಹತ್ಯೆ; 800 ಪುಟದ ಚಾರ್ಜ್ಶೀಟ್
Team Udayavani, Oct 6, 2022, 7:15 AM IST
ಹುಬ್ಬಳ್ಳಿ: ಸರಳ ವಾಸ್ತು ಕಂಪೆನಿ ಸಂಸ್ಥಾಪಕ, ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಹತ್ಯೆಗೆ ಸಂಬಂಧಿಸಿ ತನಿಖಾಧಿಕಾರಿಗಳು ಹಂತಕರಿಬ್ಬರ ವಿರುದ್ಧ ಜೆಎಂಎಫ್ಸಿ ಕೋರ್ಟ್ನಲ್ಲಿ ಸುಮಾರು 800ಕ್ಕೂ ಹೆಚ್ಚು ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದಾರೆ.
ಗುರೂಜಿ ಹತ್ಯೆಗೆ ಸಂಬಂಧಿಸಿ ಪೊಲೀಸರು ಕಲಘಟಗಿ ತಾಲೂಕು ಧುಮ್ಮವಾಡ ಗ್ರಾಮದ ಮಹಾಂತೇಶ ಶಿರೂರ ಹಾಗೂ ಮಂಜುನಾಥ ಮರೇವಾಡ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ. ಗುರೂಜಿ ಅವರನ್ನು ಹಂತಕರಿಬ್ಬರು ಜು. 5ರಂದು ಇಲ್ಲಿನ ಉಣಕಲ್ಲ ಕೆರೆ ಬಳಿಯ ಹೊಟೇಲೊಂದರಲ್ಲಿ ಚಾಕುವಿನಿಂದ ಇರಿದು ಹತ್ಯೆಗೈದು ಪರಾರಿಯಾಗಿದ್ದರು.
ಘಟನೆ ನಡೆದ 4 ತಾಸಿನೊಳಗೆ ಪೊಲೀಸರು ಹಂತಕರನ್ನು ರಾಮದುರ್ಗ ಬಳಿ ಸಿನಿಮೀಯ ರೀತಿಯಲ್ಲಿ ಅಡ್ಡಗಟ್ಟಿ ವಶಕ್ಕೆ ಪಡೆದಿದ್ದರು. ಪ್ರಕರಣಕ್ಕೆ ಸಂಬಂಧಿಸಿ ತನಿಖಾಧಿಕಾರಿಗಳು ಬಂಧಿತರ ವಿರುದ್ಧ ಆಸ್ತಿಗೆ ಸಂಬಂಧಪಟ್ಟ ದಾಖಲೆಗಳು ಸಹಿತ ಕೊಲೆಗೆ ಸಂಬಂಧಿಸಿದ ಇನ್ನಿತರ ವಿಷಯಗಳ ಕುರಿತು ಕಲೆ ಹಾಕಲಾದ ಮಾಹಿತಿ ಹಾಗೂ ಸಂಗ್ರಹಿಸಿದ ಸಾಕ್ಷಿಗಳು ಸೇರಿ 800ಕ್ಕೂ ಹೆಚ್ಚು ಪುಟಗಳುಳ್ಳ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯಕ್ತ ಲಾಭೂರಾಮ ತಿಳಿಸಿದ್ದಾರೆ.
ಚಂದ್ರಶೇಖರ ಗುರೂಜಿ ಹತ್ಯೆಗೆ ಸಂಬಂಧಿಸಿ ಹು-ಧಾ ಪೊಲೀಸ್ ಆಯುಕ್ತರು ಎಸಿಪಿ ವಿನೋದ ಮುಕ್ತೇದಾರ ನೇತೃತ್ವದಲ್ಲಿ ಐದು ತನಿಖಾ ತಂಡ ರಚಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ