ನಾಳೆಯಿಂದ ಕಾಮಲಿಂಗನ ದರುಶನ 


Team Udayavani, Mar 17, 2019, 9:49 AM IST

17-marc1h-16.jpg

ನವಲಗುಂದ: ಪಟ್ಟಣದಲ್ಲಿ ನಾಳೆಯಿಂದ ಕಾಮಲಿಂಗ ದರುಶನ ನೀಡಲಿದ್ದು, ರಾಜ್ಯದ ವಿವಿಧ ಕಡೆಗಳಿಂದ ಸಹಸ್ರಾರು ಭಕ್ತರು ಆಗಮಿಸುತ್ತಾರೆ. ತಮ್ಮ ತಮ್ಮ ಇಷ್ಟಾರ್ಥಗಳನ್ನು ಈಡೇರಿಸಿಕೊಳ್ಳಲು ಹರಕೆ ಹೊರುತ್ತಾರೆ. ಹರಕೆ ತೀರಿಸುತ್ತಾರೆ.

ಸವಣೂರ ನವಾಬರ ಆಡಳಿತಾವಧಿಯಲ್ಲಿ ಸಿದ್ಧಿಪುರುಷನೊಬ್ಬ ತಪಸ್ಸಿನಲ್ಲಿ ನಿರತನಾಗಿದ್ದ. ಹೋಳಿ ಹುಣ್ಣಿಮೆಯಲ್ಲಿ ಕಾಮಣ್ಣನನ್ನು ಪ್ರತಿಷ್ಠಾಪಿಸಿ ಬಣ್ಣದಾಟ ಆಡುವ ವಿಷಯದಿಂದ ಪ್ರೇರಿತನಾದ ಈ ಸಿದ್ಧಿ ಪುರುಷ ತನ್ನ ತಪಸ್ಸಿನ ಬಲದಿಂದ ತಾನು ಒಂದು ಕಾಮಣ್ಣನ ಮೂರ್ತಿ ಸಿದ್ಧಗೊಳಿಸಬೇಕೆಂಬ ಅಪೇಕ್ಷೆಪಟ್ಟ. 99 ಬಗೆಯ ಗಿಡಮೂಲಿಕೆಗಳನ್ನು ಆಯ್ದುಕೊಂಡು ಬಂದು ಕಾಮಣ್ಣನ ಸುಂದರ ಮೂರ್ತಿ ತಯಾರಿಸಿದ. ಇನ್ನೆರಡು ಗಿಡಮೊಲಿಕೆಗಳು ದೊರೆತಿದ್ದರೆ ಈ ಕಾಮಣ್ಣನ ಮೂರ್ತಿ ಜೀವಕಳೆ ಬರುತ್ತಿತ್ತು ಎಂದೇ ಹೇಳಲಾಗುತ್ತಿದೆ.

ಸವಣೂರಿನಲ್ಲಿ ಸಿದ್ಧವಾದ ಸಿದ್ಧಿಪುರುಷನ ಈ ಅಮೂಲ್ಯ ಮೂರ್ತಿಯನ್ನು ಶತಮಾನಗಳ ಹಿಂದೆಯೇ ಯಾರು ನವಲಗುಂದಕ್ಕೆ ಕರೆ ತಂದು ಯಾರೋ ರಾಮಲಿಂಗ ಓಣಿಯಬಸವೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಿದರಂತೆ. ಇಲ್ಲಿ ಯಾರು ತಂದರೆಂಬುದಕ್ಕೆ ದಾಖಲೆ ಇಲ್ಲ. ಅಂದಿನಿಂದ ಇಂದಿನವರೆಗೂ ಏಕಾದಶಿಯಂದು ರಾತ್ರಿ ಶ್ರೀ ರಾಮಲಿಂಗ ಕಾಮಣ್ಣ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುತ್ತದೆ.

ಬೇಡಿದ್ದನ್ನು ಕೊಡುವ ‘ಕಾಮ’ಧೇನು ಎಂಬ ಖ್ಯಾತಿಯಿಂದ 5 ದಿನ ಪಟ್ಟಣದಲ್ಲಿ ದೊಡ್ಡ ಜಾತ್ರೆ ಸಂಭ್ರಮ ಇರುತ್ತದೆ. ರಾಜ್ಯ, ಹೊರ ರಾಜ್ಯದಿಂದ ಲಕ್ಷಾಂತರ ಭಕ್ತರು ಆಗಮಿಸಿ ಕಾಮಣ್ಣನ ದರುಶನ ಪಡೆದು ತಮ್ಮ ಬಯಕೆ ನಿವೇದಿಸಿಕೊಳ್ಳುತ್ತಾರೆ. ಹರಕೆ ಹೊತ್ತು ಒಂದೇ ವರ್ಷದಲ್ಲಿ ಇಷ್ಟಾರ್ಥ ಈಡೇರಿಸಿಕೊಂಡು ಸಾವಿರಾರು ಭಕ್ತರು ಭಕ್ತಿಭಾವದಿಂದ ಆರಾಧಿಸುವ ವೈಶಿಷ್ಟ್ಯ ಕಂಡು ಬರುತ್ತದೆ. ಜನರು ಹರಕೆ ಸಲ್ಲಿಸುವ ವಿಧಾನ ಬೇರೆ-ಬೇರೆಯಾಗಿವೆ. ಸಂತಾನ ಹೀನರಿಗೆ ಬೆಳ್ಳಿಯ ತೊಟ್ಟಿಲು, ವಿವಾಹಕ್ಕಾಗಿ ಬೆಳ್ಳಿಯ ಬಾಸಿಂಗ, ಆರೋಗ್ಯಕ್ಕಾಗಿ ಬೆಳ್ಳಿಯ ಕುದುರೆ, ಮನೆ ಕಟ್ಟಲು ಬೆಳ್ಳಿಯ ಛತ್ರಿ, ವಿದ್ಯಾಭ್ಯಾಸಕ್ಕಾಗಿ ಬೆಳ್ಳಿಯ ಹಸ್ತ ಹೀಗೆ ವಿವಿಧ ಬಗೆಯ ಹರಕೆ ಸಲ್ಲಿಸಬೇಕೆಂಬ ನಿಯಮ ಇಲ್ಲಿದೆ. ಈ ಹರಕೆ ವಸ್ತುಗಳನ್ನು ಚಾರಿಟೇಬ್‌ ಸಂಸ್ಥೆಯವರೇ ನಿಗ ದಿತ ಶುಲ್ಕ ಪಡೆದು ಪೂರೈಸುತ್ತಾರೆ. ಹರಕೆ ವಸ್ತುಗಳನ್ನು ಮನೆಯಲ್ಲಿಟ್ಟು ವರ್ಷವಿಡಿ ಪೂಜಿಸಬೇಕು. ಇಷ್ಟಾರ್ಥ ಈಡೇರಿದ ನಂತರ ಕಾಮದೇವನ ದರ್ಶನ ಪಡೆದು ಪೂಜಿಸಿದ ವಸ್ತುವಿನ ಜೊತೆಗೆ ಇನ್ನೊಂದನ್ನು ಪಡೆದು ಕಾಮಣ್ಣನಿಗೆ ಸಮರ್ಪಿಸುವ ಸಂಪ್ರದಾಯ ಇದೆ.

ಪ್ರತಿವರ್ಷ ಪಟ್ಟಣದ ಹೋಳಿ ಹಬ್ಬ ಐದು ದಿನ ಬೃಹತ್‌ ಜಾತ್ರೆಯಂತೆ ನಡೆಯುತ್ತದೆ. ಈ ಐದು ದಿನದಲ್ಲಿ ವೇಳೆಯಲ್ಲಿ ಹೆಚ್ಚು ಸಂಖ್ಯೆಯಲ್ಲಿ ಜನರು ಆಗಮಿಸುತ್ತಾರೆ. ಸುಮಾರು ಎರಡು ಕಿಮೀನಷ್ಟು ಉದ್ದದ ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆಯುತ್ತಾರೆ.

ಭಕ್ತರಿಗೆ ಅಗತ್ಯ ವ್ಯವಸ್ಥೆ
ಈ ದಿಸೆಯಲ್ಲಿ ಶ್ರೀರಾಮಲಿಂಗ ಚಾರಿಟೇಬಲ್‌ ಟ್ರಸ್ಟ್‌ ಸಂಸ್ಥೆ, ಪುರಸಭೆ ಕಾರ್ಯಾಲಯ, ಪಟ್ಟಣದ ಜನತೆ ಕಾಮನ ದರ್ಶನಕ್ಕೆ ಬರುವ ಭಕ್ತರಿಗೆ ತಂಪು ಪಾನೀಯ, ಕುಡಿಯುವ ನೀರು, ಸುಗಮ ಸಂಚಾರಕ್ಕೆ ಒನ್‌ವೇ, ಕಿಮೀನಷ್ಟು ಪೆಂಡಾಲ್‌ ವ್ಯವಸ್ಥೆ ಹಾಗೂ ಕೆಎಸ್‌ಆರ್‌ಟಿಸಿ ಹೆಚ್ಚುವರಿ ಬಸ್‌ಗಳ ಸೌಲಭ್ಯ ದೊರೆಯಲಿದೆ. ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಭಕ್ತರು ಆಗಮಿಸಲಿದ್ದು ಯಾವುದೇ ತೊಂದರೆಯಾಗದಂತೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಂಸ್ಥೆ ಅಧ್ಯಕ್ಷ ಲಿಂಗರಾಜ ಸಿದ್ದರಾಮಶೆಟ್ಟರ ಹೇಳುತ್ತಾರೆ.

ಇಸ್ಮಾಯಿಲ್‌ ನದಾಫ 

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.