ತವರಿಗೆ ಮರಳಲು “ಸೇವಾಸಿಂಧು’ ಸೇತು
Team Udayavani, May 3, 2020, 11:36 AM IST
ಧಾರವಾಡ: ಕೋವಿಡ್-19 ನಿಯಂತ್ರಣಕ್ಕಾಗಿ ಲಾಕ್ಡೌನ್-3 ಮುಂದುವರಿಯಲಿರುವುದರಿಂದ ರಾಜ್ಯದಿಂದ ದೇಶದ ಬೇರೆ ರಾಜ್ಯಗಳಿಗೆ ಹೋಗುವವರು ಹಾಗೂ ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವವರು ಕರ್ನಾಟಕ ಸರ್ಕಾರದ ಸೇವಾಸಿಂಧು ಯೋಜನೆಯ sevasindhu. karnataka.gov.in ವೆಬ್ಸೈಟ್ ಮೂಲಕ ತಮ್ಮ ಹೆಸರು, ವಿವರಗಳನ್ನು ನೋಂದಾಯಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.
ಸೇವಾ ಸಿಂಧು ಯೋಜನೆಯು ರಾಜ್ಯ ಸರ್ಕಾರದ ಸಮಗ್ರ ಸರ್ಕಾರಿ ಇಲಾಖೆಗಳ ಸೇವೆಗಳನ್ನು ವಿವಿಧ ಮಾರ್ಗಗಳಿಂದ ಸಮಸ್ತ ನಾಗರಿಕರಿಗೆ ತಲುಪಿಸುವ ಆನ್ ಲೈನ್ ವ್ಯವಸ್ಥೆಯಾಗಿದೆ. ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಸಾರ್ವಜನಿಕರು ತಮ್ಮ ಮನೆಗಳಿಂದ ಹೊರಬರದೆ ಆನ್ಲೈನ್ನಲ್ಲಿ ಮೊಬೈಲ್ ಮೂಲಕವೂ ತಮ್ಮ ಹೆಸರು ನೋಂದಾಯಿಸಿ ಕೊಳ್ಳಬಹುದು. ಪ್ರಯಾಣಕ್ಕೆ ಅನುಮತಿ ಬಯಸು ವವರು ಈ ವೆಬ್ಸೈಟ್ ಮೂಲಕ ಹೆಸರು, ಮೊಬೈಲ್ ಸಂಖ್ಯೆ, ವಯಸ್ಸು ನಮೂದಿಸಬೇಕು. ವಲಸೆ ಕಾರ್ಮಿಕರು/ಯಾತ್ರಿ/ಪ್ರವಾಸಿಗರು/ ವಿದ್ಯಾರ್ಥಿ/ಯಾವ ವರ್ಗಕ್ಕೆ ಸೇರಿದವರು ಎಂಬುದನ್ನು ಆಯ್ಕೆ ಮಾಡಬೇಕು. ವರ್ತಮಾನದ ವಾಸದ ವಿಳಾಸ, ತಲುಪಬೇಕಾದ ವಿಳಾಸ, ಅಂಚೆ ಪಿನ್ಕೋಡ್, ಪ್ರಯಾಣದವ್ಯವಸ್ಥೆ, ಆಧಾರ್ ಸಂಖ್ಯೆಯ ಕೊನೆಯ ನಾಲ್ಕು ಅಂಕಿಗಳನ್ನು ದಾಖಲಿಸಿ, ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್