ಮಾತಿನಿಂದ ಗೋ ರಕ್ಷಣೆ ಅಸಾಧ್ಯ: ಶಂಕರಾನಂದ 


Team Udayavani, Apr 16, 2018, 5:21 PM IST

16-April-27.jpg

ಹುಬ್ಬಳ್ಳಿ: ದೇಶಭಕ್ತಿ, ಧರ್ಮ ಪಾಲನೆ, ಗೋವು ರಕ್ಷಣೆ ಕೇವಲ ಬಾಯಿ ಮಾತಿನಲ್ಲಿದ್ದರೆ ಸಾಲದು ಕೃತಿಯಲ್ಲಿರಬೇಕು ಎಂದು ಆರ್‌ಎಸ್‌ಎಸ್‌ನ ಶಂಕರಾನಂದ ಹೇಳಿದರು.

ಉಣಕಲ್ಲ ಟಿಂಬರ್‌ ಯಾರ್ಡ್‌ನ ಪಾಟಿದಾರ ಭವನದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಗೋಸೇವಾ ವಿಭಾಗದಿಂದ ನಡೆದ ಹುಬ್ಬಳ್ಳಿ ಮಹಾನಗರ ಗೋ ಜಪ ಸಮರ್ಪಣಾ ಮಹಾಯಜ್ಞದ ಸಮಾರೋಪದಲ್ಲಿ ಅವರು ಮಾತನಾಡಿದರು. ಪ್ರತಿಯೊಬ್ಬನಲ್ಲೂ ದೇಶಭಕ್ತಿ, ಧರ್ಮ ಪಾಲನೆ ಮಾಡುವ ಮನಸ್ಸಿದೆ. ಇನ್ನೊಬ್ಬರಿಗೆ ಉತ್ತಮವಾಗಿ ಸಂದೇಶವನ್ನು ಕೂಡ ನೀಡುತ್ತಾರೆ. ಆದರೆ ಬಹುತೇಕರು ಕಾರ್ಯರೂಪದಲ್ಲಿ ಅಳವಡಿಸಿಕೊಳ್ಳುವುದಿಲ್ಲ ಎಂದರು.

ರಾಷ್ಟ್ರದಲ್ಲಿ ನಡೆಯುತ್ತಿರುವ ಈ ಮಹಾಯಜ್ಞದ ಮೂಲಕ ಗೋ ರಕ್ಷಣೆ ಮಾಡುವ ಸಂದೇಶ ರವಾನೆಯಾಗಿದೆ. ಇಂತಹ ಯಾಗ ಯಜ್ಞಗಳನ್ನು ಮಾಡಿದಾಕ್ಷಣ ಗೋ ರಕ್ಷಣೆಯಾಗುತ್ತದೆ ಎಂದಲ್ಲ. ಈ ಕಾರ್ಯವನ್ನು ಇಷ್ಟಕ್ಕೆ ಸೀಮಿತ ಮಾಡದೆ ಪ್ರತಿಯೊಬ್ಬರು ಗೋ ರಕ್ಷಣೆ ಮಾಡುವ ಪಣ ತೊಡಬೇಕು. ದೇಶಭಕ್ತಿ, ಧರ್ಮ ಪಾಲನೆ, ಸತ್ಯದಂತಹ ಜೀವನದ ಮೌಲ್ಯಗಳನ್ನು ಸಾಧ್ಯವಾದಷ್ಟು ಕಾರ್ಯರೂಪಕ್ಕೆ ತರಬೇಕು ಎಂದರು.

ಜೀತಾಲಾಲ್‌ ಪಟೇಲ್‌ ಗೋ ಉತ್ಪನ್ನಗಳ ಬಳಕೆ ಹಾಗೂ ಅವುಗಳ ಪರಿಣಾಮಕಾರಿ ಶಕ್ತಿಯ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಜನರಿಗೆ ಮಾಹಿತಿ ನೀಡಿದರು. ವೈಷ್ಣೋದೇವಿ ಮಂದಿರದ ಶ್ರೀ ದೇವಪ್ಪಜ್ಜ, ಮಹಾಯಜ್ಞ ಕಾರ್ಯಕ್ರಮದ ಅಧ್ಯಕ್ಷ ಭವರಲಾಲ್‌ ಆರ್ಯ, ಉಪಾಧ್ಯಕ್ಷ ಜೇಠಾಲಾಲಜಿ
ಪಟೇಲ್‌, ಜಗದೀಶಗೌಡ ಪಾಟೀಲ, ಸಂಚಾಲಕ ಭರತ ಜೈನ್‌, ಸದಾನಂದ ಕಾಮತ, ಮೃತ್ಯುಂಜಯ ಬಡಗಣ್ಣವರ ಇನ್ನಿತರರಿದ್ದರು. 

ಸುಬ್ರಾಯ ಭಟ್‌ ನೇತೃತ್ವದಲ್ಲಿ ಜಪ ಯಜ್ಞ ಹಾಗೂ ಪೂರ್ಣಾಹುತಿ ನಡೆಯಿತು. ಪೂರ್ಣಾಹುತಿಯಲ್ಲಿ ಆರ್‌ಎಸ್‌ಎಸ್‌ನ ಮಂಗೇಶ ಭೇಂಡೆ, ಮಜೇಥಿಯಾ ಫೌಂಡೇಶನ್‌ನ ಜಿತೇಂದ್ರ ಮಜೇಥಿಯಾ ಸೇರಿದಂತೆ ಸಂಘ ಪರಿವಾರದ ಪ್ರಮುಖರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

rain 21

Heavy Rain; ಬೆಳಗಾವಿ, ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ

Hubli: ಬಂಧಿತ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ… ಆರೋಪಿ ಕಾಲಿಗೆ ಗುಂಡೇಟು

Hubballi: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.