Vijayapur: ಮಲೀನವಾಗುತ್ತಿರುವ ಕೃಷ್ಣೆ ಕಾಪಾಡಿ; ತ್ಯಾಜ್ಯ ವಸ್ತು ಎಸೆಯಬೇಡಿ

Save the defiling Krishna; | Do not throw waste material

Team Udayavani, Jun 1, 2023, 2:53 PM IST

Vijayapur: ಮಲೀನವಾಗುತ್ತಿರುವ ಕೃಷ್ಣೆ ಕಾಪಾಡಿ; ತ್ಯಾಜ್ಯ ವಸ್ತು ಎಸೆಯಬೇಡಿ

ಆಲಮಟ್ಟಿ: ಉತ್ತರ ಕರ್ನಾಟಕದ ಜೀವನದಿ ಕೃಷ್ಣೆ ಲಕ್ಷಾಂತರ ಹೆಕ್ಟೇರ್‌ ಪ್ರದೇಶಕ್ಕೆ ನೀರು ಜನ ಜಾನುವಾರುಗಳ ಆಶ್ರಯವೇ ಈ ನದಿ. ಕೃಷ್ಣಾ ನದಿಯು ಮಹಾರಾಷ್ಟ್ರದ ಮಹಾಬಲೇಶ್ವರದಲ್ಲಿ ಉಗಮವಾಗಿ ಆಂಧ್ರದ ಹಂಸಲಾ ದೇವಿ ಎಂಬಲ್ಲಿ ಸಮುದ್ರ ಸೇರುತ್ತದೆ. ಈ ಬೃಹತ್‌ ನದಿಗೆ ಮಹಾರಾಷ್ಟ್ರದಲ್ಲಿ ಕೆಮಿಕಲ್‌ ನೀರು ಮಿಶ್ರಣ, ಕರ್ನಾಟಕದಲ್ಲಿಯೂ ನದಿ ಪಾತ್ರದಲ್ಲಿರುವ
ವಿವಿಧ ಕಾರ್ಖಾನೆಗಳ ಕಲ್ಮಷವೂ ನದಿಯಲ್ಲಿ ಸೇರುತ್ತಿವೆ.

ಇದರಿಂದ ಜಲಚರಗಳ ಪ್ರಾಣಕ್ಕೆ ಕಂಟಕಪ್ರಾಯವಾಗಿ ಪರಿಣಮಿಸುತ್ತಿದೆ. ಹೀಗೆಯೇ ಮುಂದುವರಿದರೆ ನಮ್ಮ ಗತಿ ಏನೂ ಅಂತ ಈಗ ಉತ್ತರ ಕರ್ನಾಟಕಕ್ಕೂ ಆತಂಕ ಶುರುವಾಗಿದೆ. ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಅಂಕಲಿ ಗ್ರಾಮದ ಬಳಿ ಹರಿದಿರುವ
ಕೃಷ್ಣಾ ನದಿಯಲ್ಲಿ ಸಾಂಗ್ಲಿ ಜಿಲ್ಲೆಯಲ್ಲಿರುವ ಕಾರ್ಖಾನೆಗಳ ತ್ಯಾಜ್ಯ ನೀರು ಹಾಗೂ ಹಾಗೂ ಸಾಂಗ್ಲಿ ನಗರದ ಕಲುಷಿತ ನೀರನ್ನ ಕೃಷ್ಣಾ ನದಿಗೆ ಹರಿಬಿಡಲಾಗುತ್ತಿದೆ. ಇದರಿಂದಾಗಿ ನದಿಯಲ್ಲಿರುವ ಜಲಚರಗಳು ಸಾವನ್ನಪ್ಪಿರುವ ಸಂಗತಿಗಳು ಇತ್ತೀಚೆಗೆ ಬಯಲಾಗಿವೆ.

ಮಹಾರಾಷ್ಟ್ರದ ಕೊಲ್ಲಾಪುರ ಹಾಗೂ ಸಾಂಗ್ಲಿ ಜಿಲ್ಲೆಗಳಲ್ಲಿ ಸಾಕಷ್ಟು ಕಾರ್ಖಾನೆಗಳಿದ್ದು ಅವುಗಳ ತ್ಯಾಜ್ಯ ನೀರನ್ನು ಉತ್ತರ ಕರ್ನಾಟಕದ ಜೀವನದಿ ಎಂದು ಕರೆಸಿಕೊಳ್ಳುವ ಕೃಷ್ಣೆಗೆ ಹರಿ ಬಿಡಲಾಗುತ್ತಿದೆ ಇದರ ನಿಯಂತ್ರಣ ಸಾಧ್ಯವಿಲ್ಲವೇ?  ಸಾಂಗ್ಲಿಯ ಅಂಕಲಿಯಲ್ಲಿ ಈ ರೀತಿ ಮೀನುಗಳು ಸಾವನ್ನಪ್ಪಿದ್ದು ಮುಂದೆ ನೀರು ಕರ್ನಾಟಕದತ್ತ ಹರಿದು ಬರುತ್ತದೆ. ಇದರಿಂದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಯಾದಗಿರಿ, ಕಲಬುರಗಿ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳಲ್ಲಿನ ಬಹುತೇಕ ನಗರ ಮತ್ತು ಗ್ರಾಮೀಣ ಪ್ರದೇಶದ ಜನರು ಇದೇ ಕೃಷ್ಣೆಯ ನೀರನ್ನು ಅವಲಂಬಿಸಿದ್ದಾರೆ.

ಇಂಥ ಕಲುಷಿತ ನೀರು ಸೇವಿಸಿ ಜನ ಜಾನುವಾರುಗಳಿಗೆ ತೊಂದರೆಯಾದರೆ ಯಾರು ಹೊಣೆ ಎನ್ನುವ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿದೆ. ಕೂಡಲೇ ಕರ್ನಾಟಕ ಸರ್ಕಾರವು ಕೊಲ್ಲಾಪುರ ಹಾಗೂ ಸಾಂಗ್ಲಿ ಜಿಲ್ಲಾಡಳಿತ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಬೇಕು ಎನ್ನುತ್ತಾರೆ ನಾಗರಿಕರು. ಭಕ್ತರಿಂದ ತ್ಯಾಜ್ಯ: ಇನ್ನು ಕೃಷ್ಣಾ ನದಿ ದಡದಲ್ಲಿ ನದಿ ಪಾತ್ರದ ಉದ್ದಕ್ಕೂ ನೂರಾರು ದೇವಸ್ಥಾನಗಳಿವೆ. ದೇವಸ್ಥಾನಕ್ಕೆ ಆಗಮಿಸುವ ಬಹುತೇಕ ಭಕ್ತರು ತಾವು ಕಟ್ಟಿಕೊಂಡ ಹರಕೆಯನ್ನು ತೀರಿಸಲು ಕೃಷ್ಣೆಯ ಪವಿತ್ರ ನದಿಯಲ್ಲಿ ಸ್ನಾನ ಮಾಡಿ ದೇವರ ದರ್ಶನ ಪಡೆಯುವುದು ವಾಡಿಕೆ. ಕೃಷ್ಣೆಯಲ್ಲಿ ಪವಿತ್ರ ಸ್ನಾನ ಮಾಡಿದ ಭಕ್ತರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತಾವು ಧರಿಸಿದ್ದ ಉಡುಪನ್ನು ನದಿಯಲ್ಲಿಯೇ ಬಿಸಾಕುತ್ತಾರೆ.

ಇಷ್ಟೇ ಅಲ್ಲದೇ ದೂರದಿಂದ ಪ್ರತಿ ಯುಗಾದಿ, ದೀಪಾವಳಿ ಸೇರಿದಂತೆ ವಿಶೇಷ ದಿನಗಳಂದು ವಿವಿಧ ಭಾಗಗಳಿಂದ ದೇವರುಗಳ ಪಲ್ಲಕ್ಕಿ, ಛತ್ರಿ, ಚಾಮರ ಹೀಗೆ ದೇವ ದೇವತೆಗಳ ಭಿನ್ನವಾಗಿರುವ ಸಲಕರಣೆಗಳನ್ನೂ ಕೂಡ ನದಿಯಲ್ಲಿಯೇ ಬಿಸಾಕುತ್ತಾರೆ. ಇದರಿಂದ ಜಲಚರಗಳಿಗೆ ತೀವ್ರ ತೊಂದರೆಯಾಗಲಿದೆ. ಅಷ್ಟೇ ಅಲ್ಲದೇ ಜಲಮಲೀನಕ್ಕೂ ಕಾರಣವಾಗುತ್ತದೆ. ಆದ್ದರಿಂದ
ಪ್ರಜ್ಞಾವಂತರು ತ್ಯಾಜ್ಯ ವಸ್ತುಗಳನ್ನು ನದಿಯಲ್ಲಿ ಎಸೆಯಬಾರದು ಎನ್ನುತ್ತಾರೆ ಆಲಮಟ್ಟಿ ಗ್ರಾಪಂ ಅಧ್ಯಕ್ಷ ಮಂಜುನಾಥ ಹಿರೇಮಠ.

ಪ್ರತಿ ವರ್ಷವೂ ರಾಜ್ಯ ಸರ್ಕಾರಿ ನೌಕರರ ಸಂಘ ಯೋಜನಾ ಸಾಖೆ ಆಲಮಟ್ಟಿ ವತಿಯಿಂದ ಆಲಮಟ್ಟಿ ಶಾಸ್ತ್ರಿ ಸಾಗರದ ಹಿನ್ನೀರು ಪ್ರದೇಶವಾಗಿರುವ ಚಂದ್ರಮ್ಮ ದೇವಿ ದೇವಸ್ಥಾನದ ಬಳಿ ಸ್ವಚ್ಛತಾ ಕಾರ್ಯಕ್ರಮ ಆಯೋಜಿಸಿ ಆ ಪ್ರದೇಶವನ್ನು ಸ್ವತ್ಛ ಮಾಡಿ ಆಗಮಿಸುವ ಭಕ್ತರಿಗೆ ಪರಿಸರ ಮಾಲಿನ್ಯ ಕುರಿತು ಜಾಗೃತಿ ಕಾರ್ಯಕ್ರಮ ಆಯೋಜಿಸುತ್ತ ಬಂದಿದ್ದೇವೆ.
ಸದಾಶಿವ ದಳವಾಯಿ
ಅಧ್ಯಕ್ಷರು, ರಾಜ್ಯ ಸರ್ಕಾರಿ ನೌಕರರ ಸಂಘದ ಯೋಜನಾ ಶಾಖೆ ಆಲಮಟ್ಟಿ

ಜಿಲ್ಲೆಯ ಕೊನೆಯ ಗ್ರಾಮವಾಗಿರುವ ಯಲಗೂರಕ್ಕೆ ರಾಜ್ಯ ಹಾಗೂ ಅಂತಾರಾಜ್ಯಗಳಿಂದ ನಿತ್ಯ ಭಕ್ತಾದಿಗಳು ಆಗಮಿಸಿ
ಕೃಷ್ಣೆಯಲ್ಲಿ ಸ್ನಾನ ಮಾಡಿ ಯಲಗೂರೇಶನ (ಏಳೂರು ಹನುಮಪ್ಪನ) ದರ್ಶನಕ್ಕೆ ಬರುತ್ತಾರೆ. ಅವರು ಎಸೆದ ತ್ಯಾಜ್ಯಗಳು ನದಿ ಪಾಲಾಗದಿರಲಿ ಎಂದು ಸ್ಥಳೀಯ ಆಡಳಿತದಿಂದ ತೊಟ್ಟಿಗಳನ್ನು ಇರಿಸಲಾಗಿದೆ. ಭಕ್ತರು ತೊಟ್ಟಿಯಲ್ಲಿ ತಮ್ಮ ಬಟ್ಟೆಗಳನ್ನು ಅದರಲ್ಲಿಯೇ ಹಾಕುತ್ತಾರೆ.
ಶ್ಯಾಮ ಪಾತ್ರದ
ಅಧ್ಯಕ್ಷರು, ಪಿಕೆಪಿಎಸ್‌ ಬ್ಯಾಂಕ್‌ ಯಲಗೂರ

ಶಂಕರ ಜಲ್ಲಿ

 

ಟಾಪ್ ನ್ಯೂಸ್

BJP MP ಮೇನಕಾ ಗಾಂಧಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಇಸ್ಕಾನ್

BJP MP ಮೇನಕಾ ಗಾಂಧಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಇಸ್ಕಾನ್

1-sasadas

Karwar; ರಾ.ಹೆ.66 ರ ಟನಲ್ ನಲ್ಲಿ ಸಂಚಾರ ಪುನರಾರಂಭಕ್ಕೆ ಆಗ್ರಹಿಸಿ ದಿನವಿಡೀ ಪ್ರತಿಭಟನೆ

1-asdasdas

Belagavi;ಮೋಡ ಬಿತ್ತನೆಗೆ ಸಚಿವ ಸತೀಶ್ ಜಾರಕಿಹೊಳಿ ಚಾಲನೆ: ಪೂರಕ ವಾತಾವರಣ

upendra

Cauvery ಮತ್ತು ನಂಬಿಕೆ… ಜನಪ್ರತಿನಿಧಿಗಳ ಮೇಲೆ ನಮಗೇ ನಂಬಿಕೆ ಇಲ್ಲವೇ?

1-sadasd

World Cup; ಲೆಗ್ ಸ್ಪಿನ್ನರ್ ಚಾಹಲ್ ರನ್ನು ಕಡೆಗಣಿಸಿರುವುದು ತಪ್ಪು : ಯುವರಾಜ್ ಸಿಂಗ್

Mangaluru ಪ್ರತಿ ಟನ್ ಗೆ 150 ರೂ. ಬಾಡಿಗೆ ಏರಿಕೆ ಭರವಸೆ: ಮುಷ್ಕರ ಹಿಂತೆಗೆದ ಲಾರಿ ಯೂನಿಯನ್

Mangaluru ಪ್ರತಿ ಟನ್ ಗೆ 150 ರೂ. ಬಾಡಿಗೆ ಏರಿಕೆ ಭರವಸೆ: ಮುಷ್ಕರ ಹಿಂತೆಗೆದ ಲಾರಿ ಯೂನಿಯನ್

ICC World Cup 2023; ಎಲ್ಲಾ ಹತ್ತು ತಂಡಗಳ ಆಟಗಾರರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ICC World Cup 2023; ಎಲ್ಲಾ ಹತ್ತು ತಂಡಗಳ ಆಟಗಾರರ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cauvery issue; ಮುಂದೆ ಜಾಗರೂಕತೆಯಿಂದ ಹೆಜ್ಜೆ ಇರಿಸಬೇಕಾಗಿದೆ: ಎಚ್.ಕೆ ಪಾಟೀಲ

Cauvery issue; ಮುಂದೆ ಜಾಗರೂಕತೆಯಿಂದ ಹೆಜ್ಜೆ ಇರಿಸಬೇಕಾಗಿದೆ: ಎಚ್.ಕೆ ಪಾಟೀಲ

Bommai BJP

Congress ಸರಕಾರ ವರ್ಚಸ್ಸು ಕಳೆದುಕೊಂದು ಆಪರೇಷನ್ ಗೆ ಮುಂದಾಗಿದೆ: ಬೊಮ್ಮಾಯಿ ಕಿಡಿ

mohan limbikai

Loksabha; ಧಾರವಾಡ ಕ್ಷೇತ್ರದಿಂದ ಸ್ಪರ್ಧೆ ಸಿದ್ದತೆಗೆ ಡಿಕೆಶಿಯಿಂದ ಸೂಚನೆ: ಮೋಹನ ಲಿಂಬೆಕಾಯಿ

mahaDharwad ರಾಷ್ಟ್ರಧ್ವಜ ತಯಾರಿಕಾ ಕೇಂದ್ರಕ್ಕೆ ಮಹಾತ್ಮಾಗಾಂಧಿ ಪ್ರಶಸ್ತಿ

Dharwad ರಾಷ್ಟ್ರಧ್ವಜ ತಯಾರಿಕಾ ಕೇಂದ್ರಕ್ಕೆ ಮಹಾತ್ಮಾಗಾಂಧಿ ಪ್ರಶಸ್ತಿ

Hubballi: ಆತ್ಮಗುರಿಯೇ ನಿಜವಾದ ಆಧ್ಯಾತ್ಮ- ನಿರ್ಭಯಾನಂದ ಶ್ರೀ

Hubballi: ಆತ್ಮಗುರಿಯೇ ನಿಜವಾದ ಆಧ್ಯಾತ್ಮ- ನಿರ್ಭಯಾನಂದ ಶ್ರೀ

MUST WATCH

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

ಹೊಸ ಸೇರ್ಪಡೆ

BJP MP ಮೇನಕಾ ಗಾಂಧಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಇಸ್ಕಾನ್

BJP MP ಮೇನಕಾ ಗಾಂಧಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಇಸ್ಕಾನ್

1-sasadas

Karwar; ರಾ.ಹೆ.66 ರ ಟನಲ್ ನಲ್ಲಿ ಸಂಚಾರ ಪುನರಾರಂಭಕ್ಕೆ ಆಗ್ರಹಿಸಿ ದಿನವಿಡೀ ಪ್ರತಿಭಟನೆ

1-asdasdas

Belagavi;ಮೋಡ ಬಿತ್ತನೆಗೆ ಸಚಿವ ಸತೀಶ್ ಜಾರಕಿಹೊಳಿ ಚಾಲನೆ: ಪೂರಕ ವಾತಾವರಣ

upendra

Cauvery ಮತ್ತು ನಂಬಿಕೆ… ಜನಪ್ರತಿನಿಧಿಗಳ ಮೇಲೆ ನಮಗೇ ನಂಬಿಕೆ ಇಲ್ಲವೇ?

Katapadi: ಕೊರಗಜ್ಜನಿಗೆ ಲಾರಿ, ಟೆಂಪೋ ಮಾಲಕರ ಮೊರೆ

Katapadi: ಕೊರಗಜ್ಜನಿಗೆ ಲಾರಿ, ಟೆಂಪೋ ಮಾಲಕರ ಮೊರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.