ವಿಜ್ಞಾನಕ್ಕೆ ಇತಿಮಿತಿಗಳೇ ಇಲ್ಲ: ಡಾ| ರಾವ್‌


Team Udayavani, Sep 7, 2019, 10:05 AM IST

huballi-tdy-4

ಧಾರವಾಡ: ಸೃಜನಾ ರಂಗಮಂದಿರದಲ್ಲಿ ಅಂತಾರಾಷ್ಟ್ರೀಯ ಆವರ್ತ ಕೋಷ್ಟಕದ 150ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ಪ್ರೊ| ಸಿ.ಎನ್‌.ಆರ್‌. ರಾವ್‌ ಕೇಕ್‌ ಕತ್ತರಿಸಿದರು.

ಧಾರವಾಡ: ಸದಾ ಕಾಲ ಹರಿಯುತ್ತಲೇ ಇರುವ ನೀರಂತೆ ವಿಜ್ಞಾನಕ್ಕೆ ಇತಿಮಿತಿಗಳು ಇಲ್ಲ ಎಂದು ಭಾರತರತ್ನ ಪುರಸ್ಕೃತ ಪ್ರೊ| ಸಿ.ಎನ್‌.ಆರ್‌. ರಾವ್‌ ಹೇಳಿದರು.

ನಗರದ ಸೃಜನಾ ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಇಲಾಖೆ, ಕರ್ನಾಟಕ ವಿಜ್ಞಾನ ಕಾಲೇಜು ಮತ್ತು ಬೆಂಗಳೂರಿನ ನ್ಯಾನೊ ಮತ್ತು ಸಾಫ್ಟ್‌ ಮ್ಯಾಟರ್‌ ಸೈನ್ಸ್‌ ಸಂಸ್ಥೆಯ ಆಶ್ರಯದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಆವರ್ತ ಕೋಷ್ಟಕದ 150ನೇ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.

ವಿಜ್ಞಾನ ಕ್ಷೇತ್ರದಲ್ಲಿ ಹೊಸ ಸಂಶೋಧನೆಗಳು ಆಗುತ್ತಲೇ ಇರುತ್ತವೆ. ಆ ಕಾರಣದಿಂದಲೇ ಅದು ಸದಾ ಕಾಲ ಹರಿಯುವ ನೀರಿನಂತೆ. ಹೀಗಾಗಿ ವಿಜ್ಞಾನಿಗಳು ನಿರಂತರವಾಗಿ ಸಂಶೋಧನೆಗಳಲ್ಲಿ ತೊಡಗಬೇಕು ಎಂದರು.

ನನಗೆ ವಿಜ್ಞಾನ ಕ್ಷೇತ್ರದಲ್ಲಿ ಪ್ರೇರಣೆ ಅಂದರೆ ಮೈಕಲ್ ಪ್ಯಾರಡೆ. ಅವರು ವರ್ಷಪೂರ್ತಿ ಸಂಶೋಧನಾ ಕೇಂದ್ರದಲ್ಲಿ ನೂತನ ಸಂಶೋಧನೆಗೆ ತಮ್ಮ ಸಮಯ ಮೀಸಲಿಟ್ಟ ಪರಿಣಾಮ ವಿಜ್ಞಾನ ಕ್ಷೇತ್ರಕ್ಕೆ ಹಲವಾರು ಕೊಡುಗೆ ನೀಡಲು ಸಾಧ್ಯವಾಯಿತು ಎಂದರು. ಹಲವಾರು ವಿಜ್ಞಾನಿಗಳ ಸಂಶೋಧನೆ, ಜೀವಮಾನ ಸಾಧನೆಗಳು ಮತ್ತು ಸಾಹಸಗಳ ಕುರಿತು ವಿವರಿಸಿದರು.

ಶಿಕ್ಷಣ ತಜ್ಞೆ ಡಾ| ಇಂದುಮತಿ ರಾವ್‌ ಮಾತನಾಡಿದರು. ವಿಜ್ಞಾನಿ ಡಾ| ಗಿರಿಧರ ಕುಲಕರ್ಣಿ ಪ್ರಾಸ್ತಾವಿಕ ಮಾತನಾಡಿದರು. ನಂತರದಲ್ಲಿ ನ್ಯಾನೋ ಮತ್ತು ಸಾಫ್ಟ್‌ ಮ್ಯಾಟರ್‌ ವಿಜ್ಞಾನ ಸಂಸ್ಥೆಯ ಎಸ್‌. ಕೃಷ್ಣಪ್ರಸಾದ, ಪ್ರೊ| ಟಿ. ಗೋವಿಂದರಾಜು ಉಪನ್ಯಾಸ ನೀಡಿದರು. ಪ್ರೊ| ವಿದ್ಯಾರಾಜವರಿಂದ ಪ್ರಯೋಗಗಳ ಪ್ರದರ್ಶನ ಮತ್ತು ವಿದ್ಯಾರ್ಥಿಗಳಿಗಾಗಿ ಕ್ವಿಜ್‌ ಕಾರ್ಯಕ್ರಮ ಜರುಗಿದವು.

ಪ್ರೊ| ಎಸ್‌.ಎಂ. ಶಿವಪ್ರಸಾದ, ಡಾ|ಅರುಂಧತಿ ಕುಲಕರ್ಣಿ, ಪ್ರೊ| ಜಿ.ಯು. ಕುಲಕರ್ಣಿ, ಸಂಜಯ ರಾವ್‌, ಡಾ| ಸಿ.ಎಫ್‌. ಮೂಲಿಮನಿ ಸೇರಿದಂತೆ ವಿವಿಧ ಕಾಲೇಜಿನ 600ಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಆವರ್ತ ಕೋಷ್ಟಕ(ಪಿರಿಯಾಡಿಕ್‌ ಟೇಬಲ್)ದ ಸಂಶೋಧಕ ಮಾಂಡಲಿವಸ್‌ ಅವರಂತೆ ಪೋಷಾಕು ಧರಿಸಿದ್ದ ವಿದ್ಯಾರ್ಥಿ ಗಮನ ಸೆಳೆದನು. ಇದಲ್ಲದೇ ಆವರ್ತ ಕೋಷ್ಟಕದ ಮಾದರಿಯ ಕೇಕ್‌ ಕತ್ತರಿಸಿ ಸಂಭ್ರಮಿಸಲಾಯಿತು.

ಟಾಪ್ ನ್ಯೂಸ್

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.