ಎರಡು ದಿನದಲ್ಲಿ 80 ಕೋವಿಡ್ ಪ್ರಕರಣ: ಧಾರವಾಡದ ಸಿದ್ದೇಶ್ವರ ನಗರ ಸೀಲ್ ಡೌನ್
Team Udayavani, May 23, 2021, 3:34 PM IST
ಧಾರವಾಡ: ಇಲ್ಲಿನ ನಗರ ಲಕಮನಹಳ್ಳಿ ಗ್ರಾಮ ವ್ಯಾಪ್ತಿಯ ಕಲಘಟಗಿ ರಸ್ತೆಯಲ್ಲಿರುವ ಸೋಮೇಶ್ವರ ದೇವಸ್ಥಾನದ ಹಿಂಭಾಗದಲ್ಲಿರುವ ಸಿದ್ದೇಶ್ವರ ನಗರದಲ್ಲಿ ಕಳೆದ ಎರಡು ದಿನಗಳಲ್ಲಿ 80 ಕ್ಕೂ ಹೆಚ್ಚು ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಕಾಲೋನಿಗೆ ಸಂಪರ್ಕ ಕಲ್ಪಿಸುವ ಎಲ್ಲ ರಸ್ತೆಗಳನ್ನು ಕಟ್ಟಿಗೆ ಬಳಸಿ, ಬ್ಯಾರಿಕೇಡಿಂಗ್ ಮಾಡಲಾಗಿದೆ. ಇಂದು ಬೆಳಿಗ್ಗೆ ಸಿದ್ದೇಶ್ವರ ಕಾಲೋನಿಯನ್ನುಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ.
ಕಾಲೋನಿಯ ಕೆಲವರು ಕೋವಿಡ್ ಪಾಜಿಟಿವ್ ಬಂದರೂ ಕೋವಿಡ್ ಕಾಳಜಿ ಕೇಂದ್ರಗಳಿಗೆ ಹೋಗಲು ನಿರಾಕರಿಸಿದ್ದರು. ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ತಹಶೀಲ್ದಾರ ಸಂತೋಷ ಬಿರಾದಾರ ಹಾಗೂ ಸಹಾಯಕ ಪೋಲಿಸ್ ಆಯುಕ್ತೆ ಅನುಷಾ.ಜಿ. ಅವರು ಕಾಲೋನಿ ಪ್ರಮುಖರಿಗೆ ಹಾಗೂ ಸೋಂಕಿತರ ಕುಟುಂಬದ ಸದಸ್ಯರಿಗೆ ಮಾಹಿತಿ, ತಿಳುವಳಿಕೆ ನೀಡಿ, ಸೋಂಕಿತರು ಕೋವಿಡ್ ಕೇರ್ ಸೆಂಟರ್ ಗಳಿಗೆ ದಾಖಲಾಗುವಂತೆ ಜಾಗೃತಿ ಮೂಡಿಸಿದರು.
ಇದನ್ನೂ ಓದಿ:ಬ್ಲ್ಯಾಕ್ ಫಂಗಸ್ 7000 ಕೋವಿಡ್ ಸೋಂಕಿತರನ್ನು ಬಲಿ ತೆಗೆದುಕೊಂಡಿದೆ : ಡಾ. ರಣದೀಪ್ ಗುಲೇರಿಯಾ
ಸಿದ್ದೇಶ್ವರ ಕಾಲೋನಿಯಲ್ಲಿ ಸುಮಾರು 130 ಮನೆಗಳಿದ್ದು, ಅಂದಾಜು 800 ಜನ ವಾಸಿಸುತ್ತಿದ್ದಾರೆ. ಆರೋಗ್ಯ ಇಲಾಖೆಯ ಸಿಬ್ಬಂದಿ ಕಾಲೋನಿಯಲ್ಲಿ ಕೋವಿಡ್ ಟೆಸ್ಟಿಂಗ್ ಕಾರ್ಯ ಕೈಗೊಂಡಿದ್ದಾರೆ. ಸೋಂಕಿತರು ಕೋವಿಡ್ ಕೇರ್ ಕೇಂದ್ರಗಳಿಗೆ ದಾಖಲಾದ ನಂತರ ಮಹಾನಗರ ಪಾಲಿಕೆಯ ಸಿಬ್ಬಂದಿಗಳು ಸಿದ್ದೇಶ್ವರನಗರವನ್ನು ರಾಸಾಯನಿಕ ಸಿಂಪಡಿಸಿ, ಸ್ಯಾನಿಟೈಜ್ ಮಾಡಿದರು. ಅಲ್ಲದೇ ಬ್ಯಾರಿಕೇಡಿಂಗ್ ಮಾಡಿ, ರಸ್ತೆಗಳನ್ನು ಬಂದ್ ಮಾಡಲಾಗಿದೆ.
ಈ ಸಂದರ್ಭದಲ್ಲಿ ವಿದ್ಯಾಗಿರಿ ಪೊಲೀಸ್ ಠಾಣೆಯ ಸಿಪಿಐ ಮಹಾಂತೇಶ ಬಸಾಪುರ, ಕಂದಾಯ ನಿರೀಕ್ಷಕ ಮಂಜುನಾಥ ಗೂಳಪ್ಪನವರ, ಗ್ರಾಮಲೆಕ್ಕಾಧಿಕಾರಿ ಸೈಯದ ಬನ್ನಿಮಟ್ಟಿ, ಪಾಲಿಕೆ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ