ಕಾಯಕಯೋಗಿ ಚುನಾಯಿಸಿ
Team Udayavani, May 11, 2018, 4:20 PM IST
ದಾರವಾಡ: ಕಾಯಕ ಯೋಗಿಯನ್ನು ನಾಯಕನನ್ನಾಗಿ ಆಯ್ಕೆ ಮಾಡುವ ಮಹಾ ಅಸ್ತ್ರ ಮತದಾರ ಪ್ರಭುಗಳ ಕೈಯಲ್ಲಿಯೇ
ಇದೆ ಎಂದು ಬೈರನಟ್ಟಿ ಶ್ರೀದೊರೆಸ್ವಾಮಿ ವಿರಕ್ತಮಠದ ಪೀಠಾಧಿಪತಿ ಶಾಂತಲಿಂಗ ಸ್ವಾಮೀಜಿ ಹೇಳಿದರು. ನಗರದ ಕವಿಸಂನಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ವಿಧಾನಸಭಾ ಚುನಾವಣೆ-2018 ಮತದಾರರ ಜಾಗೃತಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ಹಣ, ಹೆಂಡ ಮತ್ತು ಜಾತಿಗಳ ಆಮಿಷಕ್ಕೆ ಬಲಿಯಾಗಿ ಮತದಾನ ಮಾಡದೇ ಮತದಾರ ಪ್ರಭು ಜಾಗೃತವಾದ ಹೆಜ್ಜೆ ಇಡುವುದು ದೇಶದ ಭವಿಷ್ಯತ್ತಿನ ದೃಷ್ಟಿಯಲ್ಲಿ ತೀರಾ ಅವಶ್ಯ. ಇಂದು ಸಮಾಜಸೇವೆ ಹೆಸರಿನಲ್ಲಿ ರಾಜಕೀಯ ಧುರೀಣರು ಲಾಭ ಮಾಡಿಕೊಳ್ಳುವ ದಂಧೆಗೆ ಇಳಿದಿದ್ದಾರೆ. ಈ ಸನ್ನಿವೇಶ ಬದಲಾಗಬೇಕಾದರೆ ಮತ್ತು ಉತ್ತಮ ಪ್ರಜಾಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕಾದರೆ ನಿಷ್ಕಾಮ ಮತದಾನ ಆಗಬೇಕು ಎಂದರು.
ಸಿದ್ಧಾರೂಢಸ್ವಾಮಿ ಮಠದ ಧಮದರ್ಶಿ ಕೆ.ಎಲ್. ಪಾಟೀಲ, ಡಾ| ರಾಜನ್ ದೇಶಪಾಂಡೆ, ಪ್ರಾಚಾರ್ಯರಾದ ಡಾ| ರಾಜೇಶ್ವರಿ ಮಹೇಶ್ವರಯ್ಯ, ವೆಂಕಟೇಶ ಕುಲಕರ್ಣಿ ಮಾತನಾಡಿದರು. ನಾಡೋಜ ಡಾ| ಪಾಟೀಲ ಪುಟ್ಟಪ್ಪ ಅಧ್ಯಕ್ಷತೆ ವಹಿಸಿದ್ದರು. ಕೃಷ್ಣ ಜೋಶಿ ಪ್ರಾಸ್ತಾವಿಕ ಮಾತನಾಡಿದರು. ಪ್ರಫುಲ್ಲಾ ನಾಯಕ ಸ್ವಾಗತಿಸಿದರು. ಸದಾನಂದ ಶಿವಳ್ಳಿ ವಂದಿಸಿದರು. ಶಂಕರ ಕುಂಬಿ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
MUST WATCH
ಹೊಸ ಸೇರ್ಪಡೆ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ
Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ