ಸಮನ್ವಯ ಕವಿ ನಾಡೋಜ ಚಣ್ಣವೀರ ಕಣವಿ ಇನ್ನಿಲ್ಲ
Team Udayavani, Feb 16, 2022, 9:46 AM IST
ಧಾರವಾಡ: ಕನ್ನಡದ ಸಮನ್ವಯ ಕವಿ, ಸುನೀತಗಳ ಸಾಮ್ರಾಟ ಎಂದು ಪ್ರಸಿದ್ಧಿರಾದ ಹಿರಿಯ ಕವಿ, ನಾಡೋಜ ಚನ್ನವೀರ ಕಣವಿ (93) ಅವರು ವಿಧಿವಶರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಅನಾರೋಗ್ಯದ ಕಾರಣದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. 93 ವರ್ಷದ ಚನ್ನವೀರ ಕಣವಿ ಅವರಿಗೆ ಕೋವಿಡ್ ಸೋಂಕು ತಗುಲಿತ್ತು. ಉಸಿರಾಟದ ತೊಂದರೆಯೂ ಕಾಣಿಸಿಕೊಂಡಿತ್ತು. ಧಾರವಾಡದ ಎಸ್.ಡಿ.ಎಂ ಆಸ್ಪತ್ರೆಗೆ ಜನವರಿ 14ರಂದು ದಾಖಲಿಸಲಾಗಿತ್ತು.
ಜೂನ್ 28,1928ರಂದು ಧಾರವಾಡ ಜಿಲ್ಲೆಯ ಹೊಂಬಳದಲ್ಲಿ ಚನ್ನವೀರ ಕಣವಿಯವರು ಜನಿಸಿದರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಬಿಎ ಮತ್ತು ಎಂಎ ಪದವಿ ಪಡೆದರು. ಕರ್ನಾಟಕ ವಿಶ್ವವಿದ್ಯಾಲಯದ ವ್ಯಾಸಂಗ ಪ್ರಸರಣ ಮತ್ತು ಪ್ರಕಟಣಾ ವಿಭಾಗದ ಕಾರ್ಯದರ್ಶಿಯಾಗಿ, ಪ್ರಸಾರಾಂಗದ ನಿರ್ದೇಶಕರಾಗಿ ಸೇವೆ ಸಲ್ಲಿಸಿದರು. ಭಾವಜೀವಿ, ಸಮನ್ವಯ ಕವಿ ಎಂದೇ ಅವರು ಖ್ಯಾತಿಗಳಿಸಿದ್ದಾರೆ.
ಇದನ್ನೂ ಓದಿ:ಖ್ಯಾತ ಸಂಗೀತ ನಿರ್ದೇಶಕ 69 ವರ್ಷದ ಬಪ್ಪಿ ಲಹರಿ ನಿಧನ
1949ರಲ್ಲಿ ಡಾ. ಚನ್ನವೀರ ಕಣವಿ ಮೊದಲ ಕವಲ ಸಂಕಲನ ಕಾವ್ಯಾಕ್ಷಿ ಬಿಡುಗಡೆಗೊಂಡಿತು. ಭಾವಜೀವಿ, ಆಕಾಶಬುಟ್ಟಿ, ಮಣ್ಣಿನ ಮೆರವಣಿಗೆ, ನೆಲಮುಗಿಲು, ಜೀವಧ್ವನಿ ಮುಂತಾದ ಕವನ ಸಂಕಲನಗಳನ್ನು ಅವರು ರಚಿಸಿದ್ದಾರೆ. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಅನಕೃ ಪ್ರತಿಷ್ಠಾನ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಹಾಸನದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಹಂಪಿ ವಿಶ್ವವಿದ್ಯಾಲಯ ನಾಡೋಜ ಪ್ರಶಸ್ತಿ ನೀಡಿ ಗೌರವಿಸಿದೆ. ಕರ್ನಾಟಕ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ