ಸಾಮರ್ಥ್ಯಕ್ಕೆ ತಕ್ಕ ಸೇವೆ ಸಲ್ಲಿಸಿ
Team Udayavani, Sep 9, 2019, 9:53 AM IST
ಧಾರವಾಡ: ಕೆಸಿಸಿ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಬ್ಯಾಂಕ್ ನೌಕರರ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಜರುಗಿತು.
ಧಾರವಾಡ: ಶತಮಾನದ ಇತಿಹಾಸ ಹೊಂದಿರುವ ಕೆಸಿಸಿ ಬ್ಯಾಂಕ್ನ ನೌಕರ ಎಂಬ ಅಭಿಮಾನ ಬೆಳೆಸಿಕೊಳ್ಳಬೇಕು. ಇದರಿಂದ ಬ್ಯಾಂಕ್ ಆರ್ಥಿಕವಾಗಿ ಇನ್ನಷ್ಟು ಪ್ರಗತಿ ಸಾಧಿಸಲು ಸಾಧ್ಯ ಎಂದು ಬ್ಯಾಂಕ್ನ ಅಧ್ಯಕ್ಷ ಬಾಪುಗೌಡ ಪಾಟೀಲ ಹೇಳಿದರು.
ಬ್ಯಾಂಕ್ನ ಪ್ರಧಾನ ಕಚೇರಿಯಲ್ಲಿ ಆಯೋಜಿಸಿದ್ದ ಕೆಸಿಸಿ ಬ್ಯಾಂಕ್ ನೌಕರರ ಪತ್ತಿನ ಸಹಕಾರಿ ಸಂಘದ 57ನೇ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು.
ಕೆಸಿಸಿ ಬ್ಯಾಂಕ್ ರಾಜ್ಯದಲ್ಲಿನ ಜಿಲ್ಲಾ ಮಧ್ಯವರ್ತಿ ಬ್ಯಾಂಕುಗಳಲ್ಲಿ ವಿಶೇಷ ಸ್ಥಾನಮಾನವಿದೆ. ಮೂರು ಜಿಲ್ಲೆಗಳ ಕಾರ್ಯ ವ್ಯಾಪ್ತಿ ಹೊಂದಿರುವ ಈ ಬ್ಯಾಂಕಿನ ಪ್ರತಿಯೊಬ್ಬ ನೌಕರನು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಸೇವೆ ಸಲ್ಲಿಸಲು ಆಸಕ್ತಿ ತೋರಿಸಬೇಕು. ಬಡವರು, ಮಧ್ಯಮ ವರ್ಗದವರು ಮತ್ತು ವಿಶೇಷವಾಗಿ ರೈತರ ಸೇವೆ ನೌಕರರ ಆದ್ಯತೆಯಾಗಬೇಕು ಎಂದರು.
ನೌಕರರಿಗೆ ಆಡಳಿತ ಮಂಡಳಿ ಸಕಲ ಸೌಲಭ್ಯವನ್ನು ಒದಗಿಸುತ್ತಿದೆ. ಆದ್ದರಿಂದ ಪ್ರತಿಯೊಬ್ಬರೂ ಪರಿಶ್ರಮ ಮತ್ತು ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ಮುರುಘಾ ಮಠದ ಮಲ್ಲಿಕಾರ್ಜುನ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಕರ್ನಾಟಕ ರಾಜ್ಯ ಗ್ರಾಹಕ ಮಹಾಮಂಡಳದ ಅಧ್ಯಕ್ಷರಾಗಿ ಆಯ್ಕೆಯಾದ ಕೆಸಿಸಿ ಬ್ಯಾಂಕ್ ನಿರ್ದೇಶಕ ಜಿ.ಪಿ. ಪಾಟೀಲ ಅವರನ್ನು ಸಂಘದ ವತಿಯಿಂದ ಸತ್ಕರಿಸಲಾಯಿತು. ನಿವೃತ್ತಿ ಹೊಂದಿದ ಸದಸ್ಯರನ್ನು ಮತ್ತು ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು.
ಸಂಘದ ಅಧ್ಯಕ್ಷ ಶಿವಾನಂದ ಹೂಗಾರ ಅಧ್ಯಕ್ಷತೆ ವಹಿಸಿದ್ದರು. ಬ್ಯಾಂಕ್ನ ಉಪಾಧ್ಯಕ್ಷ ಶೇಖರಗೌಡ ಪಾಟೀಲ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿ. ಮುನಿಯಪ್ಪ, ಪ್ರಧಾನ ವ್ಯವಸ್ಥಾಪಕ ಎ.ಡಿ. ಮದ್ನೂರ, ಸಂಘದ ಉಪಾಧ್ಯಕ್ಷ ಸಣ್ಣಪ್ಪ ರುದ್ರಪ್ಪ ಹಾಗೂ ಆಡಳಿತ ಮಂಡಳಿ ಸದಸ್ಯರು ಇದ್ದರು. ಮಧುರಾ ಹಿರೇಮಠ ಪ್ರಾರ್ಥಿಸಿದರು. ಅಶೋಕ ಸೋಬಾನದ ಸ್ವಾಗತಿಸಿ, ನಿರೂಪಿಸಿದರು. ಸಿ.ಡಿ. ಮಲ್ಲಾಪುರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ
Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್ ಸಲ್ಲಿಸಿಲ್ಲ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ