ಆಕಾಶವಾಣಿಗೆ ಬೇಂದ್ರೆ ಸೇವೆ ಅಪಾರ


Team Udayavani, Feb 14, 2017, 1:27 PM IST

hub3.jpg

ಹುಬ್ಬಳ್ಳಿ: ಆಕಾಶವಾಣಿಗಾಗಿ ಹಲವು ವಿಶಿಷ್ಟ ಕಾರ್ಯಕ್ರಮಗಳನ್ನು ರೂಪಿಸಿದ್ದ ಅಂಬಿಕಾತನಯದತ್ತರು ಒಬ್ಬ ಅಪ್ಪಟ ಪ್ರಸಾರಕರೂ ಆಗಿದ್ದರು ಎಂದು ಆಕಾಶವಾಣಿ ಕೇಂದ್ರದ ನಿವೃತ್ತ ನಿರ್ದೇಶಕ ಸಿ.ಯು.ಬೆಳ್ಳಕ್ಕಿ ಹೇಳಿದರು. ಡಾ| ಕೆ.ಎಸ್‌. ಶರ್ಮಾ ವಿಶ್ವಶ್ರಮ ಚೇತನ ಆವರಣದ ಬೇಂದ್ರೆ ಸಂಶೋಧನಾ ಸಂಸ್ಥೆ ದ.ರಾ.ಬೇಂದ್ರೆಯವರ 122ನೇ ಜನ್ಮದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

ಬೇಂದ್ರೆ ಒಬ್ಬ ಕವಿ, ನಾಟಕಕಾರ, ಸಂಖ್ಯಾಶಾಸ್ತ್ರಜ್ಞ, ತತ್ವಜ್ಞಾನಿಯಾಗಿದ್ದರಲ್ಲದೇ ಅವರೊಬ್ಬ ಅಪ್ಪಟ ಪ್ರಸಾರಕರಾಗಿದ್ದರು. ಅವರ ಹಲವಾರು ಕಾರ್ಯಕ್ರಮಗಳು ದೇಶದ ವಿವಿಧ ಆಕಾಶವಾಣಿ ಕೇಂದ್ರಗಳಿಗಾಗಿ ವಿಭಿನ್ನ ಕಾರ್ಯಕ್ರಮಗಳನ್ನು ರೂಪಿಸಿ, ನಿರ್ಮಾಣ ಮಾಡಿದ್ದರು. ಬೇಂದ್ರೆಯವರು ಹಲವು ವರ್ಷಗಳ ಕಾಲ ಧಾರವಾಡ ಆಕಾಶವಾಣಿ ಕೇಂದ್ರದ ಸಾಹಿತ್ಯ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದರು ಎಂದರು. 

ಹಲವು ಗೀತೆಗಳಿಗೆ ಸಂಗೀತ ಸಂಯೋಜನೆ ಮಾಡಿದ್ದ ದ.ರಾ. ಬೇಂದ್ರೆ ಅವರ ಚರ್ಚೆ, ಭಾಷಣಗಳ ಧ್ವನಿ ಮುದ್ರಿಕೆಗಳು ಆಕಾಶವಾಣಿ ಧಾರವಾಡ ಕೇಂದ್ರದಲ್ಲಿವೆ. ಬಾನುಲಿ ಬಗ್ಗೆಯೇ ಬೇಂದ್ರೆ ಕಾವ್ಯ ಬರೆದಿದ್ದು ಅನೇಕರಿಗೆ ತಿಳಿದಿಲ್ಲ ಎಂದು ಹೇಳಿದರು. ಡಾ| ಜಿ.ವಿ. ಕುಲಕರ್ಣಿ ಮಾತನಾಡಿ, ಜೀವನದಲ್ಲಿ ನಾನು ಹಲವು ಬಾರಿ ವಿಫ‌ಲಗೊಂಡಿದ್ದೇನೆ. ಆದರೆ ಪ್ರತಿ ಬಾರಿ ವಿಫ‌ಲನಾದಾಗ ಪುಟಿದೇಳಲು ಸ್ಫೂರ್ತಿ ನೀಡಿದ್ದೇ ಸಾಹಿತ್ಯ.

ಸಾಧನೆ ಮಾಡಬೇಕೆಂಬ ತುಡಿತ ಹಾಗೂ ಸಾಹಿತಿಗಳ ಒಡನಾಟದಿಂದ ಎಂಥ ಸವಾಲುಗಳನ್ನು ಎದುರಿಸಲು ಸಾಧ್ಯವಾಯಿತು ಎಂದರು. ಡಾ| ಬಿ.ವಿ.ಶಿರೂರ ಮಾತನಾಡಿ, ಬೇಂದ್ರೆಯವರ “ಔದುಂಬರಗಾಥಾ’ ಜೀವನದ ಕಥೆಯನ್ನು ಸಾರುತ್ತದೆ. ಇದು ಮಹಾಕಾವ್ಯವಾಗಿದ್ದು, ಇದು ನಮ್ಮ ಜೀವನಕ್ಕೆ ಮಾರ್ಗದರ್ಶನ ನೀಡುತ್ತದೆ. ಶಿಷ್ಯರನ್ನು ಬೆಳೆಸುವ ಮಹಾನ್‌ ಗುಣ ಅಂಬಿಕಾತನಯದತ್ತರಲ್ಲಿತ್ತು ಎಂದರು. 

ಡಾ| ಬಿ.ಬಿ. ರಾಜಪುರೋಹಿತ ಮಾತನಾಡಿ, ದ.ರಾ. ಬೇಂದ್ರೆಯವರ ಅನೇಕ ಕವಿತೆಗಳ ಮೊದಲ ಶ್ರೋತೃ ನಾನಾಗಿದ್ದೆ. ಅದು ನನ್ನ ಸುದೈವ ಎಂದೇ ಭಾವಿಸಿದ್ದೇನೆ. ಬೇಂದ್ರೆ ಅವರಿಗೆ ಖಗೋಳ ಶಾಸ್ತ್ರ, ಜ್ಯೋತಿಷ್ಯ ಶಾಸ್ತ್ರದ ಬಗ್ಗೆಯೂ ಅಪಾರ ಜ್ಞಾನವಿತ್ತು. ಅವರ ಕಾರ್ಯಕ್ಷೇತ್ರ ವಿಶಾಲವಾಗಿತ್ತು ಎಂದು ತಿಳಿಸಿದರು. 

ಡಾ| ಜಿ.ಎಂ. ಹೆಗಡೆ, ಪದ್ಮಶ್ರೀ ಡಾ| ಎಂ.ಎಂ. ಜೋಶಿ ಮಾತನಾಡಿದರು. ಇದೇ ಸಂದರ್ಭದಲ್ಲಿ “ಔದುಂಬರಗಾಥೆ’ ಮಹಾಕಾವ್ಯ, “ಬೇಂದ್ರೆಯವರ ಅಮರ ಕವನಗಳು ಮಧುರ ಕಥನಗಳು’ ಹಾಗೂ “ಆರೊಬಿಂದೋಸ್‌ ಇನ್‌ಫ‌ುಯೆನ್ಸ್‌ಆನ್‌ ವಿನಾಯಕ  ಕೃಷ್ಣ ಗೋಕಾಕ್ಸ್‌ ರೈಟಿಂಗ್ಸ್‌’ ಕೃತಿಗಳ ಲೋಕಾರ್ಪಣೆ ನಡೆಯಿತು. ಆರಂಭದಲ್ಲಿ ಡಾ| ಗಾಯತ್ರಿ ದೇಶಪಾಂಡೆ ಬೇಂದ್ರೆಯವರ ಕಾವ್ಯಗಳನ್ನು ಗಾಯನದ ಮೂಲಕ ಪ್ರಸ್ತುತಪಡಿಸಿದರು.  

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

rain 21

Heavy Rain; ಬೆಳಗಾವಿ, ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ

Hubli: ಬಂಧಿತ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ… ಆರೋಪಿ ಕಾಲಿಗೆ ಗುಂಡೇಟು

Hubballi: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.