ರೈತರ ಪಂಪ್‌ಸೆಟ್‌ಗಳಿಗೆ ಏಳು ತಾಸು ತ್ರಿಫೇಸ್‌ ವಿದ್ಯುತ್‌

ಸಿಂಗಲ್ಫೇಸ್‌ ವಿದ್ಯುತ್‌ ಪೂರೈಕೆ ವೇಳೆಯಲ್ಲಿ ಪಂಪ್‌ಸೆಟ್ ಚಾಲನೆಯಲ್ಲಿಡಬೇಡಿ

Team Udayavani, Jul 24, 2019, 3:58 PM IST

hubali-tdy-4

ಧಾರವಾಡ: ನಿಗದಿ ಗ್ರಾಮದ ಮಲೆನಾಡು ಶಿಕ್ಷಣ ಸಂಸ್ಥೆಯ ಪ್ರೌಢಶಾಲೆಯಲ್ಲಿ ಗ್ರಾಹಕ ಜಾಗೃತಿ ಸಭೆ ಜರುಗಿತು.

ಧಾರವಾಡ: ನೀರಾವರಿ ಪಂಪ್‌ಸೆಟ್ ಫೀಡರ್‌ಗಳಿಗೆ (ಮಾರ್ಗಗಳಿಗೆ) ಸರ್ಕಾರಿ ಆದೇಶದನ್ವಯ ತ್ರಿಫೇಸ್‌ ವಿದ್ಯುತ್‌ ಪೂರೈಕೆಯನ್ನು 7 ಗಂಟೆಗಳ ಕಾಲ ಎರಡು ಅಥವಾ ಒಂದೇ ಸರದಿಯಲ್ಲಿ ನೀಡಲಾಗುತ್ತಿದೆ ಎಂದು ಹೆಸ್ಕಾಂ ಕಾರ್ಯ ಮತ್ತು ಪಾಲನೆ ವಿಭಾಗದ ಧಾರವಾಡ ಗ್ರಾಮೀಣ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಮಂಜುನಾಥ ಟಿಂಗರೀಕರ ಹೇಳಿದರು.

ನಿಗದಿ ಗ್ರಾಮ ಹಾಗೂ ಅಳ್ನಾವರ ಪಟ್ಟಣದಲ್ಲಿ ಪ್ರತ್ಯೇಕವಾಗಿ ಜರುಗಿದ ವಿದ್ಯುತ್‌ ಬಳಕೆಯಲ್ಲಿ ಸುರಕ್ಷತೆ ಮತ್ತು ಉಳಿತಾಯದ ಕುರಿತ ಗ್ರಾಹಕ ಜಾಗೃತಿ ಸಭೆಗಳ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾತ್ರಿ ಹೊಲದಲ್ಲಿರುವ ಮನೆಗಳಿಗಾಗಿ ಓಪನ್‌ಡೆಲಾr (ಸಿಂಗಲ್ ಫೇಸ್‌) ನೀಡಲಾಗುತ್ತಿದೆ. ಈಗಾಗಲೇ ಎಲ್ಲ ಉಪಕೇಂದ್ರಗಳಲ್ಲಿ ನೀರಾವರಿ ಪಂಪ್‌ಸೆಟ್ ಮಾರ್ಗಗಳಿಗೆ ನ್ಯೂಮರಿಕಲ್ರಿಲೆ ಅಳವಡಿಸಲಾಗಿದ್ದು, ಉಳಿದಂತಹ ಮಾರ್ಗಗಳಿಗೆ ಆ. 1ರೊಳಗಾಗಿ ನ್ಯೂಮರಿಕಲ್ರಿಲೆ ಅಳವಡಿಸಲಾಗುತ್ತಿದೆ ಎಂದರು.

ಹೆಸ್ಕಾಂ ಗ್ರಾಹಕರು ಸಹಾಯವಾಣಿ ಸಂಖ್ಯೆ 1912ಕ್ಕೆ ಕರೆ ಮಾಡಿ ತಮ್ಮ ಅಹವಾಲು ಸಲ್ಲಿಸಬಹುದು. ಪ್ರತಿ ತಿಂಗಳ 3ನೇ ಶನಿವಾರದಂದು ನಡೆಯುವ ವಿದ್ಯುತ್‌ ಅದಾಲತ್‌ ಹಾಗೂ ಗ್ರಾಹಕರ ಸಂವಾದ ಸಭೆಯಲ್ಲಿ ಭಾಗವಹಿಸಿ ತಮ್ಮ ದೂರುಗಳನ್ನು ನೀಡಬಹುದು. ಒಂದು ವೇಳೆ ರೈತರು ಓಪನ್‌ ಡೆಲಾr(ಸಿಂಗಲ್ ಫೇಸ್‌ ಪೂರೈಕೆ) ಸಮಯದಲ್ಲಿ ಕೆಪ್ಯಾಸಿಟರ್‌ ಅಳವಡಿಸಿ ತಮ್ಮ ಪಂಪ್‌ಸೆಟ್‌ಗಳನ್ನು ಚಾಲನೆ ಮಾಡಿದರೆ ಸಂಪೂರ್ಣ ಮಾರ್ಗ (ಫೀಡರ್‌) ಟ್ರಿಪ್‌ ಆಗಿ ಹೊಲದಲ್ಲಿರುವ ಮನೆಗಳಿಗೆ ವಿದ್ಯುತ್‌ ಪೂರೈಕೆ ಸ್ಥಗಿತವಾಗುತ್ತದೆ. ರೈತರು ತ್ರಿಫೇಸ್‌ ವಿದ್ಯುತ್‌ ಪೂರೈಕೆ ಸಮಯದಲ್ಲಿ ಮಾತ್ರ ತಮ್ಮ ಪಂಪ್‌ಸೆಟ್‌ಗಳನ್ನು ಚಾಲನೆಯಲ್ಲಿಟ್ಟು ಸಹಕರಿಸಬೇಕು ಎಂದ ಮನವಿ ಮಾಡಿದರು.

ಗ್ರಾಮೀಣ ಶಾಖೆ-2ರ ಶಾಖಾಧಿಕಾರಿ ಸಹದೇವ ಇಂಗಳಗಿ ಹಾಗೂ ಅಳ್ನಾವರ ಶಾಖೆಯ ರೋಹಿತ್‌ ಸಾಳುಂಕೆ ಮಾತನಾಡಿದರು.

ಪ್ರಾಂಶುಪಾಲ ಸಿ.ಎನ್‌. ಹೆಬ್ಟಾಳ, ಶಿವು ಬಸನಕೊಪ್ಪ, ನಿಗದಿಯ ಮಲೆನಾಡು ಶಿಕ್ಷಣ ಸಂಸ್ಥೆಯ ಪ್ರೌಢಶಾಲೆಯ ಅಧ್ಯಕ್ಷ ಮಲ್ಲನಗೌಡ ಎಸ್‌. ಪಾಟೀಲ್ ಇನ್ನಿತರರಿದ್ದರು.

ವಿವಿಧ ಜಿಲ್ಲೆಗಳಲ್ಲಿ ವಿದ್ಯುತ್‌ ಗ್ರಾಹಕರ ಜಾಗೃತಿ ಸಭೆ ಶುರು:

ವಿದ್ಯುತ್‌ ಬಳಕೆಯಲ್ಲಿ ಸುರಕ್ಷತೆಯ ಸಲಹೆಗಳು, ಉಳಿತಾಯದ ಕ್ರಮಗಳು, ಎಲ್ಇಡಿ ಬಳಕೆಯ ಪ್ರಯೋಜನಗಳು ಸೇರಿದಂತೆ ವಿವಿಧ ವಿಷಯಗಳ ಕುರಿತು ಗ್ರಾಹಕರಲ್ಲಿ ಜಾಗೃತಿ ಮೂಡಿಸಲು ಜು. 22ರಿಂದ ಹೆಸ್ಕಾಂ ವ್ಯಾಪ್ತಿಯ ಜಿಲ್ಲೆಗಳಲ್ಲಿ ಸಭೆ ಆರಂಭವಾಗಿದ್ದು, ಆ. 10ರ ವರೆಗೆ ನಡೆಯಲಿದೆ. ಜಾಗೃತಿ ಕಾರ್ಯಕ್ರಮದೊಂದಿಗೆ ಗ್ರಾಹಕರ ಕುಂದು-ಕೊರತೆಗಳು, ಓಂಬುಡ್ಸಮನ್‌, ಅದಾಲತ್‌ ಹಾಗೂ ಗ್ರಾಹಕರ ಸಂವಾದ ಸಭೆ, ನೀರಾವರಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಸರಬರಾಜು ವ್ಯವಸ್ಥೆ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಅರ್ಜಿ ಸ್ವೀಕರಿಸಲಾಗುತ್ತದೆ. ಹೀಗಾಗಿ ಹೆಸ್ಕಾಂ ವ್ಯಾಪ್ತಿಯ ಧಾರವಾಡ, ಗದಗ, ಬೆಳಗಾವಿ, ಹಾವೇರಿ, ಉತ್ತರ ಕನ್ನಡ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಶಾಖಾ ಕಚೇರಿಗಳಲ್ಲಿ ಎಸ್‌ಇ/ಇಇ/ಎಇಇ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಸಭೆ ನಡೆಯುವ ದಿನ ಹಾಗೂ ಹೆಚ್ಚಿನ ಮಾಹಿತಿಗೆ ಸಮೀಪದ ಶಾಖಾ ಕಚೇರಿ ಸಂಪರ್ಕಿಸುವಂತೆ ಹೆಸ್ಕಾಂ ಪ್ರಧಾನ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.