ಬರಗಾಲ ವೀಕ್ಷಿಸಿದ ಶೆಟ್ಟರ
Team Udayavani, Aug 3, 2017, 12:56 PM IST
ಹುಬ್ಬಳ್ಳಿ: ಉತ್ತರ ಕರ್ನಾಟಕದಲ್ಲಿನ ಬರಗಾಲವನ್ನು ಮನಮುಟ್ಟುವಂತೆ ಮನವರಿಕೆ ಮಾಡಿಕೊಡುವಲ್ಲಿ “ಬರಗಾಲ’ ಚಿತ್ರ ಯಶಸ್ವಿಯಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಜಗದೀಶ ಶೆಟ್ಟರ ಹೇಳಿದರು. ನಗರದ ಶೃಂಗಾರ ಚಿತ್ರಮಂದಿರದಲ್ಲಿ ಆರ್.ಮಹಾಂತೇಶ ನಿರ್ದೇಶನದ, ಉತ್ತರ ಕರ್ನಾಟಕದ ಕಲಾವಿದರು ಅಭಿನಯಿಸಿದ ಚಲನಚಿತ್ರ ವೀಕ್ಷಿಸಿದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ತಾಂತ್ರಿಕವಾಗಿ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ಕಳೆದ 3-4 ವರ್ಷಗಳಿಂದ ನಿರೀಕ್ಷಿತ ಪ್ರಮಾಣದ ಮಳೆ ಬೀಳದೆ ಗ್ರಾಮೀಣ ಭಾಗದ ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಬೆಳೆ ಇಲ್ಲದ ಹೊಲಗಳು, ಬತ್ತಿದ ಕೆರೆಗಳು, ನೀರಿಗಾಗಿ ಜನರು ಹಾಗೂ ಜಾನುವಾರುಗಳ ಅಲೆದಾಟ ಮನಸಿಗೆ ಮುಟ್ಟುವಂತೆ ಚಿತ್ರೀಕರಿಸಲಾಗಿದೆ ಎಂದರು.
ಚಿತ್ರದಲ್ಲಿ ಕೃತ್ರಿಮತೆ ಎಂಬುದಿಲ್ಲ. ಸಹಜವಾಗಿಯೇ ಸ್ಥಿತಿ-ಗತಿಯನ್ನು ತೋರಿಸಲಾಗಿದೆ. ಬರದ ಸ್ಥಿತಿ ಕುರಿತು ಪತ್ರಿಕೆಗಳಲ್ಲಿ ಹಾಗೂ ಟಿವಿಗಳಲ್ಲಿ ನೋಡುತ್ತಿದ್ದೆವು. ಆದರೆ ಚಲನಚಿತ್ರದ ಮೂಲಕ ಬರದ ನೈಜ ಸ್ಥಿತಿಯನ್ನು ತೋರಿಸಲಾಗಿದೆ. ಈ ಭಾಗದ ಕಲಾವಿದರಿಗೆ ಹೆಚ್ಚು ಅವಕಾಶಗಳು ಲಭ್ಯವಾಗಬೇಕು.
ಸಮಾಜದ ಅಂಕು-ಡೊಂಕುಗಳನ್ನು ತೋರಿಸುವ ಇನ್ನಷ್ಟು ಚಲನಚಿತ್ರಗಳು ನಿರ್ಮಾಣಗೊಳ್ಳಬೇಕು ಎಂದು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ ಚಿತ್ರ ನಿರ್ದೇಶಕ ಆರ್.ಮಹಾಂತೇಶ, ನಟರಾದ ಸಾಧು ಕಠಾರೆ, ಹೊರಕೇರಿ, ರಾಮಕೃಷ್ಣ, ಮಹಾಪೌರ ಡಿ.ಕೆ.ಚವ್ಹಾಣ, ಬಿಜೆಪಿ ಮುಖಂಡರಾದ ನಾಗೇಶ ಕಲುರ್ಗಿ, ರಾಘವೇಂದ್ರ ರಾಮದುರ್ಗ ಮೊದಲಾದವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು