ಹೂಗಾರ ಪ್ಲಾಟ್ ನಿವಾಸಿಗಳಿಂದ ಶೆಟ್ಟರ ಭೇಟಿ
•ಆಘಾತ ತಂದ ತೆರವು ಕಾರ್ಯಾಚರಣೆ•ಅನ್ಯಾಯ ಸರಿಪಡಿಸಲು ಮನವಿ•ಆಶ್ರಯಕ್ಕೆ ಪರಿಗಣನೆ ಭರವಸೆ
Team Udayavani, Jun 16, 2019, 9:24 AM IST
ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಬಳಿ ಹೂಗಾರ ಪ್ಲಾಟ್ ನಿವಾಸಿಗಳು ಅಳಲು ತೋಡಿಕೊಂಡರು.
ಹುಬ್ಬಳ್ಳಿ: ಮನೆಗಳನ್ನು ಕಳೆದುಕೊಂಡ ಇಲ್ಲಿನ ಬೆಂಗೇರಿಯ ಹೂಗಾರ ಪ್ಲಾಟ್ ನಿವಾಸಿಗಳು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರ ನಿವಾಸಕ್ಕೆ ಶನಿವಾರ ತೆರಳಿ ಸಂಕಷ್ಟ ತೋಡಿಕೊಂಡರು.
ಹಲವು ವರ್ಷಗಳಿಂದ ಹೂಗಾರ ಪ್ಲಾಟ್ನಲ್ಲಿ ಮನೆಗಳನ್ನು ನಿರ್ಮಿಸಿಕೊಂಡು ಜೀವನ ಮಾಡುತ್ತಿದ್ದೆವು. ಹಿಂದೆ ಹಣ ನೀಡಿ ನಿವೇಶನಗಳನ್ನು ಖರೀದಿ ಮಾಡಲಾಗಿದೆ. ಆದರೆ ಪೊಲೀಸರು ಏಕಾಏಕಿ ಆಗಮಿಸಿ ಮನೆ ತೆರವುಗೊಳಿಸುವಂತೆ ಸೂಚನೆ ನೀಡಿದರು. ಎಷ್ಟೇ ಮನವಿ ಮಾಡಿದರೂ ಅಳಲು ಕೇಳಲಿಲ್ಲ. ಮೂರು ಗಂಟೆ ಸಮಯಾವಕಾಶ ನೀಡಿ ಜೆಸಿಬಿಗಳಿಂದ ಮನೆಗಳನ್ನು ನೆಲಸಮ ಮಾಡಿದ್ದಾರೆ. ಇದೀಗ ಮನೆಗಳಿಲ್ಲದೆ ಬೀದಿಗೆ ಬಿದ್ದಿದ್ದು, ಅವರಿವರ ಮನೆಯಲ್ಲಿ ತಾತ್ಕಾಲಿಕವಾಗಿ ನೆಲೆಸಿದ್ದೇವೆ. ನಮಗಾದ ಅನ್ಯಾಯ ಸರಿಪಡಿಸುವಂತೆ ಮನವಿ ಮಾಡಿದರು.
ಜಗದೀಶ ಶೆಟ್ಟರ ಮಾತನಾಡಿ, ಮನೆ ತೆರವುಗೊಳಿಸುವ ಮುಂಚೆ ಈ ಬಗ್ಗೆ ನನ್ನ ಬಳಿ ಚರ್ಚಿಸಿದ್ದರೆ ಏನಾದರೂ ಯೋಚನೆ ಮಾಡಬಹುದಿತ್ತು. ನ್ಯಾಯಾಲಯದ ಮೊರೆ ಹೋಗಿ ಮನೆ ತೆರವುಗೊಳಿಸದಂತೆ ತಡೆಯಾಜ್ಞೆ ತರಬಹುದಿತ್ತು. ಜನಸಾಮಾನ್ಯರಿಗೆ ಈ ಬಗ್ಗೆ ಅರಿವು ಇರುವುದಿಲ್ಲ. ಕನಿಷ್ಠ ಅಲ್ಲಿನ ಮುಖಂಡರಾದರೂ ನನ್ನ ಗಮನಕ್ಕೆ ಯಾಕೆ ತರಲಿಲ್ಲ. ಮನೆ ತೆರವುಗೊಳಿಸಲು ನ್ಯಾಯಾಲಯದ ಆದೇಶ ಸೇರಿದಂತೆ ಏನಾದರೂ ದಾಖಲೆಗಳಿದ್ದರೆ ನೀಡುವಂತೆ ಸೂಚಿಸಿದರು.
ಸುಳ್ಳ ರಸ್ತೆಯಲ್ಲಿ ಆಶ್ರಯ ಮನೆ ನಿರ್ಮಿಸುವ ಕುರಿತು ಭೂಮಿ ಖರೀದಿ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಇದೀಗ ಮನೆ ಕಳೆದುಕೊಂಡ ಹೂಗಾರ ಪ್ಲಾಟ್ ನಿವಾಸಿಗಳಿಗೆ ಈ ಯೋಜನೆಯಲ್ಲಿ ಪರಿಗಣಿಸುವುದಾಗಿ ಭರವಸೆ ನೀಡಿದರು.
ಹಿಂದೆ ನಿಮ್ಮಂತೆಯೇ ಶಬರಿ ಹಾಗೂ ಚಂದನ ಕಾಲೋನಿಯ ಜನರು ಸಮಸ್ಯೆಯಲ್ಲಿದ್ದರು. ಅಕ್ರಮ ಮನೆಗಳು ಎಂದು ತೆರವುಗೊಳಿಸುವ ಸಿದ್ಧತೆ ನಡೆದಿತ್ತು. ಆ ಸಂದರ್ಭದಲ್ಲಿ ನ್ಯಾಯಾಲಯ ಮೊರೆ ಹೋಗಿ ತಡೆಯಾಜ್ಞೆ ತರಲಾಯಿತು. ಇದರಿಂದ ಅಲ್ಲಿನ ಜನರು ನೆಮ್ಮದಿಯಿಂದ ಜೀವನ ಮಾಡುತ್ತಿದ್ದಾರೆ. ಆಗಿರುವ ಅನ್ಯಾಯಕ್ಕೆ ನ್ಯಾಯ ಪಡೆದುಕೊಳ್ಳುವ ಪ್ರಯತ್ನ ಮಾಡೋಣ. ನಿಮ್ಮ ಪರವಾಗಿ ವಾದ ಮಾಡಿದ ನ್ಯಾಯವಾದಿಯೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳೋಣ ಎಂದರು.
ಮಾಜಿ ಮಹಾಪೌರ ವೀರಣ್ಣ ಸವಡಿ, ಕೊಳಚೆ ನಿರ್ಮೂಲನಾ ಮಂಡಳಿ ಎಇಇ ಕೃಷ್ಣಮೂರ್ತಿ, ಎಇ ಸುರೇಶ ಹಿರೇಮಠ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
MUST WATCH
ಹೊಸ ಸೇರ್ಪಡೆ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ
Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ
Udupi: ರಮಾಬಾಯಿ ಕೊಚ್ಚಿಕಾರ್ ಪೈ ನಿಧನ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ