ಡಿಕೆಶಿ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಹಿರೇಮಠ ಆಗ್ರಹ
Team Udayavani, Sep 4, 2019, 5:50 PM IST
ಧಾರವಾಡ : ಮಾಜಿ ಸಚಿವ ಡಿ.ಕೆ.ಶಿವಕುಮಾರ ಬಂಧಿಸಿರುವುದು ಸ್ವಾಗತಾರ್ಹ. ಭ್ರಷ್ಟಾಚಾರದಲ್ಲಿ ತೊಡಗಿರುವ ಎಲ್ಲ ವ್ಯಕ್ತಿಗಳ ವಿರುದ್ಧ ಇದೇ ರೀತಿ ತನಿಖೆ ನಡೆಸುವ ಮೂಲಕ ಅಕ್ರಮ ಸಂಪಾದನೆಯಲ್ಲಿ ತೊಡಗುವ ವ್ಯಕ್ತಿಗಳಿಗೆ ತಕ್ಕಪಾಠ ಕಲಿಸುವ ಪ್ರಯತ್ನವಾಗಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಆಗ್ರಹಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ ಮೇಲೆ ಮೈನ್ಸ್, ಅಕ್ರಮ ಹಣ ವರ್ಗಾವಣೆ ಸೇರಿದಂತೆ ಅನೇಕ ಪ್ರಕರಣಗಳು ದಾಖಲಾಗಿವೆ. ಈ ಕುರಿತು ಅಧಿಕಾರಿಗಳು ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಅಡಿಯಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸುವ ಮೂಲಕ ಉಗ್ರ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹ ಮಾಡಿದರು.
ಡಿಕೆಶಿ ಭ್ರಷ್ಟಾಚಾರ ಹಾಗೂ ಅವ್ಯವಹಾರಗಳಿಗೆ ಕಡಿವಾಣ ಹಾಕಲು ೨೦೧೪ರಿಂದಲೇ ಸಪಸ ವತಿಯಿಂದ ಅಧಿಕೃತ ದಾಖಲೆಗಳ ಮೂಲಕ ಪ್ರಧಾನಮಂತ್ರಿಗೆ ಮನವಿ ಮಾಡಿದೆ. ಇಡಿ, ಸಿಬಿಐ, ಎಸ್ಐಟಿಗೆ ಬರೆದ ಪತ್ರದ ಮೇರೆಗೆ ಡಿಕೆಶಿ ಹಾಗೂ ಸಂಬಂಧಿಕರ ಮನೆ ಮೇಲೆ ನಡೆದ ದಾಳಿಯಲ್ಲಿ ರೂ.೨೫೦ಕೋಟಿ ಹಣ ಬಚ್ಚಿಟ್ಟ ಆರೋಪವಿದೆ ಎಂದರು.
ಅಲ್ಲದೇ, ದೆಹಲಿಯ ಅರ್ಪಾಟಮೆಂಟ್ಗಳ ಮೇಲೂ ದಾಳಿ ನಡೆಸಿ ಅಕ್ರಮ ಹಣ ವಶಕ್ಕೆ ಪೆಡದು, ಡಿಕೆಶಿ ಹಾಗೂ ಆತನ ನಾಲ್ವರು ಸಹದ್ಯೋಗಿಗಳ ವಿರುದ್ಧ ಪಿಎಂಎಲ್ಎ ಕಾಯ್ದೆಯಡಿ ಕೇಸ್ ದಾಖಲಾಗಿದೆ. ಭ್ರಷ್ಟಾಚಾರ ಕಿಂಗ್ ಪಿನ್ ಆಗಿರುವ ಡಿಕೆಶಿ ವಿಷಯದಲ್ಲಿ ಯಾವುದೇ ರಾಜಕೀಯ ಪ್ರಭಾವಕ್ಕೆ ಒಳಗಾಗಬಾರದು ಎಂದು ಮನವಿ ಮಾಡಿದರು.
ತನಿಖೆಗೆ ಆಗ್ರಹ:
ರಾಜ್ಯ ಸರ್ಕಾರ ೨೦೧೩ರಲ್ಲಿ ಮಾಡಿದ ಎಪಿಪಿ ಹಾಗೂ ಎಜಿಪಿ ೧೯೭ ಹುದ್ದೆಗಳ ನೇಮಕಾತಿಯಲ್ಲಿ ಸಾಕಷ್ಟು ಅಕ್ರಮ ನಡೆದಿದೆ. ಲೋಕಾಯುಕ್ತ ಸಂಸ್ಥೆಯಲ್ಲಿ ಜಾರ್ಜ್ಶೀಟ್ ಸಲ್ಲಿಕೆ ಅನ್ವಯ ಹೈಕೊರ್ಟ ಸರ್ಕಾರಕ್ಕೆ ನೋಟಿಸ್ ನೀಡಿದೆ. ಈ ಕುರಿತು ಸೂಕ್ತ ತನಿಖೆ ನಡೆಸುವ ಮೂಲಕ ಪ್ರಕರಣವನ್ನು ತಾತ್ವಿಕ ಹಂತಕ್ಕೆ ಒಯ್ಯಲು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
90 ದಿನದಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು