ಸಮಾಜೋದ್ಧಾರ ಕಾರ್ಯ ಮಾಡಿದ ಶಿವ ಶರಣರು


Team Udayavani, Apr 30, 2019, 11:45 AM IST

hub-4

ಧಾರವಾಡ : ವೀರವಿರಾಗಿಣಿ ಅಕ್ಕಮಹಾದೇವಿ, ಬಸವಣ್ಣನವರು, ಅಲ್ಲಮಪ್ರಭುದೇವರು ಸೇರಿದಂತೆ ವಿವಿಧ ಶರಣರು ಹಿಂಸೆಯನ್ನು ದೂರ ಮಾಡಲೆತ್ನಿಸಿ ಈ ಜಗತ್ತಿನಲ್ಲಿ ನಡೆಯುತ್ತಿದ್ದ ಶೋಷಣೆಯನ್ನು ಧಿಕ್ಕರಿಸಿ ಸಮಾಜೋದ್ಧಾರ ಕಾರ್ಯ ಮಾಡಿದ್ದಾರೆ ಎಂದು ಡಾ|ಶರಣಮ್ಮ ಗೋರೆಬಾಳ ಅಭಿಪ್ರಾಯಪಟ್ಟರು.

ರಾ.ಹ.ದೇಶಪಾಂಡೆ ಸಭಾಭವನದಲ್ಲಿ ಬಸವಕೇಂದ್ರ ವತಿಯಿಂದ ಆಯೋಜಿಸಿದ್ದ ‘ಅರಿವಿನ ಅಂಗಳ’ ಕಾರ್ಯಕ್ರಮದಲ್ಲಿ ಅಕ್ಕಮಹಾದೇವಿ ಜೀವನ ಕುರಿತಾಗಿ ಅವರು ಉಪನ್ಯಾಸ ನೀಡಿದರು.

12 ನೇ ಶತಮಾನದ ಪೂರ್ವದಲ್ಲಿ ಮಹಿಳೆಯನ್ನು ನಾಲ್ಕ ಗೋಡೆಗಳ ಮಧ್ಯೆ ಬಂಧಿಸಿಡುತ್ತಿದ್ದರು. ಆಗ ಸ್ತ್ರೀಯರಿಗೆ ಸ್ವಾತಂತ್ರ್ಯವಿರಲಿಲ್ಲ. ಅಕ್ಕಮಹಾದೇವಿಯನ್ನು ಮದುವೆಯಾಗಿದ್ದ ಕೌಶಿಕ ಮಹಾರಾಜ ಆಕೆಯನ್ನು ತನ್ನ ಅಧೀನದಲ್ಲಿರಿಸಿಕೊಂಡು ಶೋಷಣೆ ಮಾಡುತ್ತಿದ್ದ. ಅದನ್ನು ಧಿಕ್ಕರಿಸಿ ಚೆನ್ನಮಲ್ಲಿಕಾರ್ಜುನ ದೇವರೇ ನನ್ನ ಗಂಡನೆಂದು ಆತನ ದರ್ಶನಕ್ಕೆ ಹೊರಟಳು. ಶ್ರಿಶೈಲಕ್ಕೆ ಹೋಗಿ ಚೆನ್ನಮಲ್ಲಿಕಾರ್ಜುನ ದರ್ಶನ ಪಡೆದು ನಂತರ ಕದಳಿ ವನದಲ್ಲಿ ಆಕೆ ಲಿಂಗೈಕ್ಯಳಾದಳು. ಅಕ್ಕಮಹಾದೇವಿ ಮನೆಯಿಂದ ಹೊರಟ ನಂತರ ಆಕೆಗೆ ದಾರಿಯುದ್ದಕ್ಕೂ ಕಷ್ಟಗಳೇ ಬಂದವು ಆದರೂ ಹೆದರದೆ ಮುನ್ನಡೆದಳು ಆಕೆಯ ಧೈರ್ಯ, ಸಾಹಿತ್ಯ, ನಡೆ ನುಡಿಗಳು ಮಹಿಳೆಯರ ಮನದಲ್ಲಿ ಮೂಡಿದ ಪರಿಣಾಮ ಇಂದು ಸ್ತ್ರೀ ಸ್ವತಂತ್ರಳಾಗಿ ಬದುಕುವಂತಾಗಿದೆ ಎಂದರು.

ಅಂತರಂಗದ ಅರಿವಿನ ಕಣ್ಣು ತೆರೆಸಿ ಕರುಣೆ-ವಿನಯ-ಸಮತೆಗಳನ್ನು ಸ್ಪುರಿಸುವರೋ ಅಂತಹವರು ಜಾತಿ ಮತ ಪಂಥಾತೀತವಾಗಿ ಶ್ರೇಷ್ಠರಾಗುತ್ತಾರೆ. ಧರ್ಮ ಎಂದಿಗೂ ಶೋಷಣೆ ಮಾಡಲ್ಲ. ಶೋಷಣೆ ಮಾಡುವ ಧರ್ಮ ಧರ್ಮವೇ ಅಲ್ಲ. ಸಕಲ ಜೀವಾತ್ಮರಿಗೂ ಲೇಸು ಬಯಸುವ ಧರ್ಮವೆಂದರೆ ಅದು ಬಸವಧರ್ಮ, ಶರಣ ಧರ್ಮ ಎಂಬುದನ್ನು ಮನುಷ್ಯ ಅರ್ಥ ಮಾಡಿಕೊಳ್ಳಬೇಕು ಎಂದರು.

ಬಸವಕೇಂದ್ರ ಅಧ್ಯಕ್ಷ ಶಿವಣ್ಣ ಶರಣ್ಣನವರ, ನಟರಾಜ ಮೂರಶಿಳ್ಳಿ, ಮಲ್ಲಿಕಾರ್ಜುನ ಚೌಧರಿ, ಶಿವಶರಣ ಕಲಬಶೆಟ್ಟರ, ಚನಬಸಪ್ಪ ಕಗ್ಗಣ್ಣವರ, ಉಮೇಶ ಕಟಗಿ, ಶಾರದಾ ಕೌದಿ, ಸುನಿತಾ ಮೂರಶಿಳ್ಳಿ ಉಪಸ್ಥಿತರಿದ್ದರು. ಮಲ್ಲಿಕಾರ್ಜುನ ಬಾಗೇವಾಡಿ ನಿರೂಪಿಸಿದರು.

ಟಾಪ್ ನ್ಯೂಸ್

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.