ಶ್ರದ್ಧಾಭಕ್ತಿಯಿಂದ ಮಹಾಶಿವರಾತ್ರಿ ಆಚರಣೆ
ಶಿವ ದೇವಾಲಯಗಳಲ್ಲಿ ವಿಶೇಷ ಪೂಜೆ | ರುದ್ರಾಭಿಷೇಕ, ಬಿಲ್ವಾರ್ಚನೆ | ಕಂಡುಬಾರದ ಹೆಚ್ಚಿನ ಜನದಟ್ಟಣೆ
Team Udayavani, Mar 12, 2021, 9:01 PM IST
ಹುಬ್ಬಳ್ಳಿ: ನಗರದ ವಿವಿಧೆಡೆ ಮಹಾಶಿವರಾತ್ರಿ ಹಬ್ಬವನ್ನು ಜನರು ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ಆಚರಿಸಿದರು.
ಶಿವದೇವಾಯಲಗಳಲ್ಲಿ ವಿಶೇಷ ಪೂಜೆ ನೆರವೇರಿತು. ಆದರೆ ಈ ಬಾರಿ ಬಹುತೇಕ ಶಿವನ ದೇವಾಲಯಗಳಲ್ಲಿ ಹೆಚ್ಚಿನ ಜನದಟ್ಟಣೆ ಕಂಡು ಬರಲಿಲ್ಲ. ಬೆಳಗಿನ ಜಾವ 4 ಗಂಟೆಯಿಂದಲೇ ಜನರು ನಗರದಲ್ಲಿನ ಶಿವನ ದೇವಸ್ಥಾನಗಳಿಗೆ ತೆರಳಿ ಭಕ್ತಿಯಿಂದ ಶಿವಲಿಂಗಕ್ಕೆ ಅಭಿಷೇಕ ಹಾಗೂ ವಿಶೇಷ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರಿಸಿದರು. ಕೋವಿಡ್-19 ಹಿನ್ನೆಲೆಯಲ್ಲಿ ಕೆಲ ದೇವಸ್ಥಾನದ ಆಡಳಿತ ಮಂಡಳಿಗಳು ಮುಂಚಿತವಾಗಿಯೇ ಮೂಲ ಶಿವಲಿಂಗಕ್ಕೆ ಸಾರ್ವಜನಿಕವಾಗಿ ಅಭಿಷೇಕ, ಪೂಜೆ-ಪುನಸ್ಕಾರಗಳು ಇರುವುದಿಲ್ಲ ಎಂದು ತಿಳಿಸಿದ್ದರಿಂದ ಜನದಟ್ಟಣೆ ಕಡಿಮೆ ಎನ್ನಲಾಗಿದೆ.
ಸ್ಟೇಷನ್ ರಸ್ತೆಯ ಈಶ್ವರ ದೇವಸ್ಥಾನದಲ್ಲಿ ಬೆಳಗ್ಗಿನಿಂದಲೇ ಜನರು ಶಿವನ ದರ್ಶನ ಪಡೆದರು. ಮೂಲ ಲಿಂಗಕ್ಕೆ ಯಾವುದೇ ಅಲಂಕಾರವಿರಲಿಲ್ಲ. ಭಕ್ತರಿಗೆ ಒಳಗಡೆ ಪ್ರವೇಶ ನಿರ್ಬಂಧಿ ಸಲಾಗಿತ್ತು. ಅಭಿಷೇಕ ಹಾಗೂ ಪೂಜೆಗಾಗಿ ಹೊರಾಂಗಣದಲ್ಲೇ ಶಿವಲಿಂಗ ವ್ಯವಸ್ಥೆ ಮಾಡಲಾಗಿತ್ತು. ಜನರು ಅದೇ ಶಿವಲಿಂಗಕ್ಕೆ ಅಭಿಷೇಕ ನೆರವೇರಿಸಿದರು.
ಪಾರಸ್ವಾಡಿ ಶ್ರೀ ಕಾಶಿ ವಿಶ್ವನಾಥ ಮಂದಿರದಲ್ಲಿ ಶಿವರಾತ್ರಿ ದಿನದಂದು ದರ್ಶನ ಪಡೆಯಲು ಗಂಟೆಗಟ್ಟಲೆ ಕಾಯಬೇಕಾಗುತ್ತಿತ್ತು. ಆದರೆ ಈ ಬಾರಿ ಅಷ್ಟೊಂದು ದಟ್ಟಣೆ ಇರಲಿಲ್ಲ. ವಿಶ್ವನಾಥನಿಗೆ ಹೂವು ಹಾಗೂ ಪತ್ರೆಯ ಅಲಂಕಾರ ಆಕರ್ಷಣೀಯವಾಗಿತ್ತು. ಅದ್ಧೂರಿತನ ಇರಲಿಲ್ಲ. ಶಿವಪುರ ಕಾಲೋನಿಯ ಶಿವ ಮಂದಿರದಲ್ಲಿ ಒಂದಿಷ್ಟು ಜನಜಂಗುಳಿ ಇತ್ತು. ಸಾಮಾಜಿಕ ಅಂತರ ಹಾಗೂ ಮಾಸ್ಕ್ ಕಡ್ಡಾಯಗೊಳಿಸಲಾಗಿತ್ತು. ಕೋವಿಡ್-19 ಹಿನ್ನೆಲೆಯಲ್ಲಿ ಮನೆಯಲ್ಲಿ ಪೂಜೆ-ಪುನಸ್ಕಾರಗಳನ್ನು ಮಾಡಿಕೊಳ್ಳುವಂತೆ ಟ್ರಸ್ಟಿಗಳು ಸಲಹೆ ನೀಡಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಆಗಮಿಸಿ ಶಿವನ ದರ್ಶನ ಪಡೆದರು.
ಶ್ರೀ ಸಿದ್ಧಾರೂಢ ಮಠದಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿತ್ತು.ಇಲ್ಲಿಯೂ ಒಳಗಿನ ಶಿವಲಿಂಗಕ್ಕೆ ಅಭಿಷೇಕಕ್ಕೆ ಅವಕಾಶ ನೀಡಿರಲಿಲ್ಲ. ಹೊರಗಡೆಯೇ ವ್ಯವಸ್ಥೆ ಮಾಡಲಾಗಿತ್ತು.ಬೆಂಗೇರಿಯ ಶಿವ ಮಂದಿರದಲ್ಲಿ ಜನರಿಗೆ ಒಳಗಡೆ ಅಭಿಷೇಕಮಾಡಲು ಅವಕಾಶ ಕಲ್ಪಿಸಲಾಗಿತ್ತು.
ಮೂರುಸಾವಿರ ಮಠ: ಮೂರುಸಾವಿರ ಮಠದ ಸದ್ಭಕ್ತರಿಂದ ಶಿವರಾತ್ರಿ ಉತ್ಸವದ ನಿಮಿತ್ತ ಭಕ್ತರಿಂದ ಜಾಗರಣೆ ಕಾರ್ಯಕ್ರಮ ನಡೆಯಿತು. ನಗರದ ವಿವಿಧ ದೇವಸ್ಥಾನಗಳ ಆವರಣದಲ್ಲಿ ಶಿವರಾತ್ರಿ ಉತ್ಸವದ ನಿಮಿತ್ತ ಭಜನೆ ಸೇರಿದಂತೆ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಇಂಡಿ ಪಂಪ್ ವೃತ್ತ ಬಳಿಯ ಶ್ರೀ ಧರ್ಮಸ್ಥಳ ಮಂಜುನಾಥ ದೇವಸ್ಥಾನ, ಅಶೋಕ ನಗರದ ಶಿವದೇವಸ್ಥಾನ, ಅಧ್ಯಾಪಕ ನಗರದಲ್ಲಿನ ವಿಶ್ವನಾಥ ಕಲ್ಯಾಣಮಂಟಪ, ಬಮ್ಮಾಪುರ ಓಣಿಯ ಈಶ್ವರ ದೇವಸ್ಥಾನ, ಬೂಸಪೇಟೆ ಪರ್ವತಮಲ್ಲಯ್ಯ ದೇವಸ್ಥಾನ, ಘಂಟಿಕೇರಿ ಬಸವಣ್ಣ ದೇವಸ್ಥಾನ, ಗೋಕುಲ ರಸ್ತೆಯ ರವಿ ನಗರದ ಈಶ್ವರ ದೇವಸ್ಥಾನ, ನವನಗರದ ಈಶ್ವರ ದೇವಸ್ಥಾನ ಸೇರಿದಂತೆ ವಿವಿಧೆಡೆ ಶಿವರಾತ್ರಿ ಹಬ್ಬ ಆಚರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ