ಬೆಳಕಿನ ಹಬ್ಬಕ್ಕಾಗಿ ಖರೀದಿ ಜೋರು

ಪ್ರಮುಖ ಮಾರುಕಟ್ಟೆಗಳಲ್ಲಿ ಜನಜಂಗುಳಿ

Team Udayavani, Nov 9, 2020, 6:25 PM IST

ಬೆಳಕಿನ ಹಬ್ಬಕ್ಕಾಗಿ ಖರೀದಿ ಜೋರು

ಹುಬ್ಬಳ್ಳಿ: ಬೆಳಕಿನ ಹಬ್ಬದ ದೀಪಾವಳಿ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜನರು ಹಬ್ಬದ ವಸ್ತುಗಳ ಖರೀದಿಗೆ ಮುಂದಾಗಿದ್ದಾರೆ. ಕೋವಿಡ್‌-19 ಹಿನ್ನೆಲೆಯಲ್ಲಿ ಹಬ್ಬದ ಸಂಭ್ರಮ-ಸಡಗರ ಮರೆತಿದ್ದ ಜನರು ದೀಪಾವಳಿ ಆಚರಣೆಗೆ ಹೆಚ್ಚಿನ ಆಸಕ್ತಿ ತೋರಿದ್ದಾರೆ.  ಒಂದೆಡೆ  ಕರಿನೆರಳಿದ್ದರೂ ಅದಾವುದನ್ನು ಲೆಕ್ಕಿಸದೆ ಜನರು ಹಬ್ಬದ ಖರೀದಿಗೆ ಮುಗಿಬಿದ್ದಿರುವುದು ಕಂಡು ಬಂದಿತು.

ಕೋವಿಡ್ ಸೋಂಕಿನಿಂದಾಗಿ ಕಳೆದ ಏಳು ತಿಂಗಳಿನಿಂದ ಹಬ್ಬದ ಸಂಭ್ರಮ ಸಡಗರವೇ ಮರೆಯಾಗಿದೆ. ಆದರೆ ಇದೀಗ ಸೋಂಕಿನ ಭಯದಿಂದ ಕೊಂಚ ಹೊರಬಂದಂತಿರುವ ಜನರು ಹಬ್ಬದ ಖರೀದಿಗೆ ಹೆಚ್ಚಿನ ಆಸಕ್ತಿ ತೋರಿದ್ದಾರೆ. ರವಿವಾರ ನಗರದ ಪ್ರಮುಖ ಮಾರುಕಟ್ಟೆಗಳು ಜನಜಂಗುಳಿಯಿಂದ ತುಂಬಿದ್ದವು. ಕೆಲ ಮಾರುಕಟ್ಟೆಗಳಲ್ಲಂತೂ ಕಾಲಿಡಲು ಜಾಗವಿಲ್ಲದಂತಿತ್ತು. ದೀಪಾವಳಿಗೆ ಐದಾರು ದಿನಗಳು ಬಾಕಿ ಇರುವುದರಿಂದ ರವಿವಾರದ ರಜಾದಿನವನ್ನು ಖರೀದಿಗೆ ಮೀಸಲಿಟ್ಟಂತಿತ್ತು. ಬಟ್ಟೆ, ಅಲಂಕಾರಿಕ ವಸ್ತುಗಳು, ದೀಪಗಳ ಖರೀದಿ ಸೇರಿದಂತೆ ಹಬ್ಬದ ಆಚರಣೆಗೆ ಬೇಕಾದ ವಸ್ತುಗಳ ಖರೀದಿ ಜೋರಾಗಿತ್ತು.

ಬಟ್ಟೆ ಅಂಗಡಿ ಗಿಜಿಗಿಜಿ  : ದಾಜೀಬಾನ ಪೇಟೆ, ದುರ್ಗದ ಬಯಲು, ಶಾಹ ಬಜಾರ ಸೇರಿದಂತೆ ನಗರದೆಲ್ಲೆಡೆ ಇರುವ ಬಟ್ಟೆ ಅಂಗಡಿಗಳು ಜನರಿಂದ ತುಂಬಿ ತುಳುಕುತ್ತಿವೆ. ಇನ್ನು ಗೋಕುಲ ರಸ್ತೆ, ಕೋಯಿನ್‌ ರಸ್ತೆಗಳಲ್ಲಿರುವ ಮಾಲ್‌ಗ‌ಳಲ್ಲಿ ಹಬ್ಬದ ಖರೀದಿ ಜೋರಾಗಿ ನಡೆಯುತ್ತಿದೆ. ಬೆಳಕಿನ ಹಬ್ಬವಾಗಿದ್ದರಿಂದ ಹೊಸ ಬಟ್ಟೆಗಳ ಖರೀದಿಗೆ ಹೆಚ್ಚು ಗಮನ ಹರಿಸಿರುವುದು ಕಂಡುಬಂತು. ಆಕಾಶಬುಟ್ಟಿ, ಪ್ಲಾಸ್ಟಿಕ್‌ ಮಾವಿನ ತೋರಣ, ಹಣತೆ, ಮತ್ತಿತರ ಅಲಂಕಾರಿಕ ವಸ್ತುಗಳಿಗೆ ಗೃಹಿಣಿಯರು ಹೆಚ್ಚಿನ ಆಸಕ್ತಿ ತೋರಿದ್ದರು. ತಾತ್ಕಾಲಿಕವಾಗಿ ಹಾಕಲಾಗಿದ್ದ ಅಂಗಡಿ ಮುಂಗಟ್ಟುಗಳ ಮುಂದೆ ಜನರು ಖರೀದಿಗೆ ಮುಗಿಬಿದ್ದಿದ್ದರು.

ಹಬ್ಬ ಬಂತು, ಕೋವಿಡ್ ಹೋಯಿತು! : ಆರೇಳು ತಿಂಗಳಿನಿಂದ ಜನರು ಕೋವಿಡ್ ಹಾವಳಿಯಿಂದ ಸಾಂಪ್ರದಾಯಿಕವಾಗಿ ಸರಳವಾಗಿ ಹಬ್ಬಗಳನ್ನು ಆಚರಿಸಿದ್ದರು. ಆದರೆ ಕೋವಿಡ್ ಹಾವಳಿ ಕಡಿಮೆ ಆಗುತ್ತಿರುವ ಹಿನ್ನೆಲೆಯಲ್ಲಿ ಜನರು ಭೀತಿಯಿಂದ ಹೊರಬಂದು ಖರೀದಿಯಲ್ಲಿ ತೊಡಗಿದ್ದರು. ಸಾಮಾಜಿಕ ಅಂತರವಿರಲಿಲ್ಲ. ಮಾಸ್ಕ್, ಸ್ಯಾನಿಟೈಸರ್‌ ಇರಲಿಲ್ಲ. ಕೆಲವೇ ಕೆಲವು ಅಂಗಡಿ ಮುಂಗಟ್ಟುಗಳಲ್ಲಿ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಕಡ್ಡಾಯ ಕಂಡುಬಂತು.

ಸಂಚಾರ ದಟ್ಟಣೆ : ರಜೆಯ ದಿನವಾಗಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಮಾರುಟ್ಟೆಗೆ ಆಗಮಿಸಿದ್ದರಿಂದ ಸಂಚಾರ ದಟ್ಟಣೆ ಹೆಚ್ಚಾಗಿತ್ತು. ಸಂಜೆ ವೇಳೆ ನಡೆದುಕೊಂಡು ಸಹಜವಾಗಿ ಹೋಗುವುದು ಕೂಡ ಕಷ್ಟವಾಗಿತ್ತು. ದಾಜೀಬಾನ ಪೇಟೆ ಮುಖ್ಯ ರಸ್ತೆ, ಬ್ರಾಡ್‌ವೇ, ಕೊಪ್ಪಿಕರ ರಸ್ತೆ, ದುರ್ಗದ ಬಯಲು, ದಾಜೀಬಾನ ಪೇಟೆ, ಎಂ.ಜಿ. ಮಾರುಕಟ್ಟೆ, ಜನತಾ ಬಜಾರ ಮಾರುಕಟ್ಟೆ, ಕೊಯಿನ್‌ ರಸ್ತೆ, ಗೋಕುಲ ರಸ್ತೆ ಸೇರಿದಂತೆ ಬಹುತೇಕ ರಸ್ತೆಗಳು ವಾಹನಗಳಿಂದ ತುಂಬಿದ್ದವು.

ಹಬ್ಬಕ್ಕೆ ಸೀರೆ ಖರೀದಿ ಮಾಡಬೇಕೆಂದು ಮಾರುಕಟ್ಟೆಗೆ ಆಗಮಿಸಿದ್ದೆ. ಅಂಗಡಿಗಳನ್ನು ಸುತ್ತಾಡಿ ಸುಸ್ತಾಯ್ತು. ಅಂಗಡಿಗಳಲ್ಲಿ ಉಸಿರುಗಟ್ಟುವಷ್ಟು ಜನರು ತುಂಬಿದ್ದರು. ಸಾಮಾಜಿಕ ಅಂತರ ಕಾಯ್ದುಕೊಂಡು ಸೀರೆ ಖರೀದಿಸುವ ಮಾತೆಲ್ಲಿ? ಸಂಗೀತಾ ಪಟ್ಟಣದ, ಹಳೇಹುಬ್ಬಳ್ಳಿ ನಿವಾಸಿ

-ಬಸವರಾಜ ಹೂಗಾರ

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.