ಸಿದ್ದರಾಮಯ್ಯನವರೇ ನಿಮ್ಹಾನ್ಸ್ಗೆ ದಾಖಲಾಗಲಿ
Team Udayavani, May 16, 2019, 1:14 PM IST
ಹುಬ್ಬಳ್ಳಿ: ಕೇವಲ 78 ಸ್ಥಾನ ಪಡೆದುಕೊಂಡು ನಾನೇ ಸಿಎಂ ಅಂತಿರೋ ಸಿದ್ದರಾಮಯ್ಯನಿಗೆ ಮೆದುಳು ಸರಿ ಇಲ್ಲ. ಅವರೇ ನಿಮ್ಹಾನ್ಸ್ ಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳಲಿ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.
ಇಂಗಳಗಿಯಲ್ಲಿ ಮಾಧ್ಯಮದವ ರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯಗೆ ಅಧಿಕಾರ ಮಾತ್ರ ಲೆಕ್ಕ, ಅವರಿಗೆ ಪಕ್ಷಗಳು ಲೆಕ್ಕಕ್ಕಿಲ್ಲ. ಸಿದ್ದರಾಮಯ್ಯನಿಗೆ ಮೆದುಳು ಇಲ್ಲ, ನಾಲಿಗೆಯೂ ಇಲ್ಲ. ಅವರೇ ಹೋಗಿ ನಿಮ್ಹಾನ್ಸ್ ಸೇರಿಕೊಳ್ಳಲಿ ಎಂದರು.
ಬರದ ಚಿಂತೆ ಇಲ್ಲ: ಉಪಚುನಾವಣೆ ಇಡೀ ರಾಜ್ಯದಲ್ಲಿರುವ ಬರವನ್ನು ಮುಚ್ಚಿ ಹಾಕಿದೆ. ಧಾರವಾಡ ಅಷ್ಟೇ ಅಲ್ಲದೇ ಇಡೀ ರಾಜ್ಯದಲ್ಲಿಯೇ ಬರ ಇದ್ದರೂ ಒಬ್ಬರು ಕೂಡಾ ಕ್ಯಾರೇ ಎನ್ನುತ್ತಿಲ್ಲ. ಜಿಲ್ಲೆಗೊಬ್ಬರು ಉಸ್ತುವಾರಿ ಸಚಿವರನ್ನು ಮಾಡಿದ್ದರೂ ನಮ್ಮ ಜಿಲ್ಲೆ ಯಾವುದು ಎಂಬುದನ್ನೇ ಮರೆತು ಹೋಗಿದ್ದಾರೆ. ಅಧಿಕಾರಿಗಳಿಗೆ ಸಚಿವರಿಗೆ ಯಾರೊಬ್ಬರಿಗೂ ಬರದ ಚಿಂತೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಮೇಶ ಜಾರಕಿಹೊಳಿ ಪಕ್ಷ ಬಿಡುತ್ತೇನೆ ಎಂದು ಹೇಳಿದ್ದು, ಅವರ ಹೇಳಿಕೆಯನ್ನೇ ನಾನು ಪುನರಾವರ್ತಿಸಿದ್ದೇನೆ ಎಂದರು.
ಡಿಕೆಶಿಗೆ ವಿಶ್: ಕುಂದಗೋಳ ತಾಲೂಕಿನ ಕುಬಿಹಾಳದಲ್ಲಿ ಮಾಧ್ಯಮಗಳ ಮೂಲಕ ಡಿ.ಕೆ. ಶಿವಕುಮಾರ ಅವರ ಜನ್ಮದಿನಕ್ಕೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಶುಭ ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
MUST WATCH
ಹೊಸ ಸೇರ್ಪಡೆ
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್