ಸಿದ್ಧಾರೂಢ ಸಾಹಿತ್ಯ ಸೌರಭ ಕವಿಗೋಷ್ಠಿ


Team Udayavani, May 27, 2019, 2:49 PM IST

Udayavani Kannada Newspaper

ಹುಬ್ಬಳ್ಳಿ: ಸದ್ಗುರು ಶ್ರೀ ಸಿದ್ಧಾರೂಢರು, ಶ್ರೀ ಗುರುನಾಥಾರೂಢರು ಹಾಗೂ ಅದ್ವೈತ ಸಿದ್ಧಾಂತಕ್ಕೆ ಸಂಬಂಧಿಸಿ ಶ್ರೀ ಸಿದ್ಧಾರೂಢ ಸಾಹಿತ್ಯ ಸೌರಭ ಕವಿಗೋಷ್ಠಿಯನ್ನು ಜೂ. 9ರಂದು ಸಂಜೆ 4 ಗಂಟೆಗೆ ಇಲ್ಲಿನ ಶ್ರೀ ಸಿದ್ಧಾರೂಢ ಮಠ ಆವರಣದ ನಿರಂಜನ ಭವನದಲ್ಲಿ ಆಯೋಜಿಸಲಾಗಿದೆ.

ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಶ್ರೀ ಸಿದ್ಧಾರೂಢ ಸಾಹಿತ್ಯ ಸೌರಭದ ಕಾರ್ಯಾಧ್ಯಕ್ಷ ಡಾ| ಗೋವಿಂದ ಮಣ್ಣೂರ, ಸದ್ಗುರು ಸಿದ್ಧಾರೂಢರ ಹಾಗೂ ಗುರುನಾಥಾರೂಢರ ಜೀವನ ಚರಿತ್ರೆ ಕೆಲವರಿಗೆ ಮಾತ್ರ ಗೊತ್ತಿದ್ದು, ಅದನ್ನು ಎಲ್ಲರಿಗೂ ತಲುಪಿಸಲು ಯತ್ನಿಸಲಾಗುತ್ತಿದೆ. ಆ ನಿಟ್ಟಿನಲ್ಲಿ ಕವಿಗೋಷ್ಠಿ ಆಯೋಜಿಸಲಾಗಿದೆ. ಅತಿಥಿಯಾಗಿ ಸಾಹಿತಿ ರಂಜಾನ್‌ ದರ್ಗಾ ಆಗಮಿಸಲಿದ್ದಾರೆ. ಸಾಹಿತಿ ಶ್ಯಾಮಸುಂದರ ಬಿದರಕುಂದಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಸಿದ್ಧಾರೂಢ, ಗುರುನಾಥಾರೂಢರ ಕುರಿತು ಸಂಶೋಧನೆ, ಚಟುವಟಿಕೆಗಳು ಇನ್ನಷ್ಟು ಹೆಚ್ಚಿಸಲು ಸಾಹಿತ್ಯ ಚಿಂತಕರಿಗೆ ಅವಕಾಶ ನೀಡಲಾಗುವುದು. ಕವಿಗೋಷ್ಠಿಯನ್ನು ಹಂತ ಹಂತವಾಗಿ ವಿಸ್ತರಿಸಲಾಗುವುದು. ಸ್ವತಂತ್ರ ಸಾಹಿತ್ಯಕ್ಕೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಕವಿಗೋಷ್ಠಿಯಲ್ಲಿ ಪಾಲ್ಗೊಳ್ಳಲು ಆಸಕ್ತಿಯುಳ್ಳವರು ‘ಶ್ರೀಮದ್‌ ಜಗದ್ಗುರು ಶ್ರೀ ಸಿದ್ಧಾರೂಢ ಹಾಗೂ ಶ್ರೀ ಗುರುನಾಥರೂಢರ ಬಗೆಗೆ, ಅದ್ವೈತ ಸಿದ್ಧಾಂತ’ಕ್ಕೆ ಸಂಬಂಧಿಸಿದ ವಿಷಯವಾಗಿ ಇಲ್ಲವೆ ಯಾವುದೇ ಆಧ್ಯಾತ್ಮಿಕ ತಾತ್ವಿಕ ನೆಲೆಗಟ್ಟಿನ ಮೇಲೆ ರಚಿತವಾಗಿರುವ ತಮ್ಮ ಎರಡು ಸ್ವರಚಿತ ಕವನಗಳನ್ನು ಜೂ. 5ರೊಳಗೆ ಶ್ರೀಮಠದ ಟ್ರಸ್ಟ್‌ ಕಮಿಟಿಯಲ್ಲಿ ಕೊಟ್ಟು, ಇಲ್ಲವೆ ಇ-ಮೇಲ್: [email protected] ವೆಬ್‌ಸೈಟ್: www.srisiddharoodhaswamiji.comಗೆ ಕಳುಹಿಸಿ ಹೆಸರು ನೋಂದಾಯಿಸಿಕೊಳ್ಳ‌ಬಹುದು. ಯಾವುದೇ ಶುಲ್ಕ ಇಲ್ಲ. ಮಾಹಿತಿಗಾಗಿ ಮೊ: 9448116616, 9886371303 ಸಂಪರ್ಕಿಸಬೇಕು ಎಂದರು.

ನಾರಾಯಣಪ್ರಸಾದ ಪಾಠಕ, ಧರಣೇಂದ್ರ ಜವಳಿ, ಬಸವರಾಜ ಸಂಕನಗೌಡರ, ವಿಜಯಲಕ್ಷ್ಮೀ ಪಾಟೀಲ, ಈರಣ್ಣ ತುಪ್ಪದ ಇನ್ನಿತರರಿದ್ದರು.

ಸದ್ಗುರು ಜೀವನ ಚರಿತ್ರೆ ಸಂಶೋಧನೆಗೆ ಅವಕಾಶ: ಮಾಳಗಿ

ಸದ್ಗುರು ಶ್ರೀ ಸಿದ್ಧಾರೂಢಸ್ವಾಮಿಗಳ ಜೀವನ ಚರಿತ್ರೆ ಹಾಗೂ ತತ್ವ ಸಿದ್ಧಾಂತಗಳನ್ನು ಇನ್ನಷ್ಟು ಸಂಶೋಧನೆ, ಪ್ರಬಂಧ ಮಂಡಿಸುವ ಸಲುವಾಗಿ ಧಾರವಾಡದ ಕರ್ನಾಟಕ ವಿವಿ ಕನ್ನಡ ಅಧ್ಯಯನ ವಿಭಾಗವು ಪ್ರಸಕ್ತ ಶೈಕ್ಷಣಿಕ ಅಕಾಡೆಮಿಯಿಂದ ಈ ವಿಷಯಗಳಲ್ಲಿ ಪಿಎಚ್‌ಡಿ ಆಯ್ಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದೆ ಎಂದು ಶ್ರೀ ಸಿದ್ಧಾರೂಢ ಮಠ ಟ್ರಸ್ಟ್‌ ಕಮಿಟಿ ಅಧ್ಯಕ್ಷ ಡಿ.ಡಿ. ಮಾಳಗಿ ಹೇಳಿದರು. ಸಿದ್ಧಾರೂಢರ ಜೀವನ ಚರಿತ್ರೆ ಹಾಗೂ ಅವರ ತತ್ವ-ಸಿದ್ಧಾಂತಗಳ ಬಗ್ಗೆ ಇದುವರೆಗೆ 16 ಗ್ರಂಥಗಳು ಬಂದಿವೆ. ಮೂರು ಪಿಎಚ್‌ಡಿ, ಒಂದು ಎಂಫಿಲ್ ಸಂದಿವೆ. ಆದರೂ ಅವು ಸಿದ್ಧಾರೂಢಸ್ವಾಮಿಗಳ ಕುರಿತು ಸಂಶೋಧನಾತ್ಮಕವಾಗಿ ಅಭಿವ್ಯಕ್ತವಾಗಿಲ್ಲ. ಆದ್ದರಿಂದ ಆಸಕ್ತರು, ವಿದ್ಯಾರ್ಥಿಗಳು ಸದ್ಗುರುವಿನ ಕುರಿತು ಇನ್ನಷ್ಟು ಉತ್ತಮವಾಗಿ ಸಂಶೋಧನೆ ಮಾಡುವ ನಿಟ್ಟಿನಲ್ಲಿ ಕೆಯುಡಿಯ ಡಾ| ಆರ್‌.ಸಿ. ಹಿರೇಮಠ ಕನ್ನಡ ಅಧ್ಯಯನ ವಿಭಾಗದ ಮುಖ್ಯಸ್ಥ ನಾಗಯ್ಯ, ಆರ್‌.ಸಿ. ಹಿರೇಮಠ ಅವರನ್ನು ಸಂಪರ್ಕಿಸಲಾಗಿದೆ. ಅದಕ್ಕೆ ಅವರು ಸ್ಪಂದಿಸಿದ್ದು, ಶೈಕ್ಷಣಿಕ ವರ್ಷದಿಂದಲೇ ಆರಂಭಿಸಲಾಗುವುದು ಎಂದಿದ್ದಾರೆ. ಸದ್ಗುರುವಿನ ವಿಷಯವಾಗಿ ಪಿಎಚ್.ಡಿ ಅಧ್ಯಯನ ಮಾಡಲು ವಚನ ಸಾಹಿತ್ಯದಲ್ಲಿ ಅದ್ವೈತ, ಸಿದ್ಧಾರೂಢರು ಮತ್ತು ಅವರ ಸಮಕಾಲೀನ ಮಹಾತ್ಮರು, ಸಿದ್ಧಾರೂಢರು ಮತ್ತು ಅವರ ಶಿಷ್ಯವೃಂದ ಹಾಗೂ ಸಿದ್ಧಾರೂಢರ ದರ್ಶನಕ್ಕೆ ಬಂದ ಮಹಾತ್ಮರು ಎಂಬ ನಾಲ್ಕು ವಿಷಯ ಆಯ್ಕೆ ಮಾಡಿ ಕನ್ನಡ ಅಧ್ಯಯನ ವಿಭಾಗಕ್ಕೆ ನೀಡಲಾಗಿದೆ. ಈ ವಿಷಯಗಳಲ್ಲಿ ಪಿಎಚ್‌ಡಿಯಲ್ಲಿ ಸಂಶೋಧನೆ ಮಾಡಲು 3-4 ವಿದ್ಯಾರ್ಥಿಗಳನ್ನು ಈಗಾಗಲೇ ಗುರುತಿಸಲಾಗಿದೆ. ಅದಕ್ಕೆ ಅವರು ಆಸಕ್ತಿ ತೋರಿದ್ದಾರೆ ಎಂದರು.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.