ತಹಶೀಲ್ದಾರ್ ಕಚೇರಿಗೆ ಮುತ್ತಿಗೆ
Team Udayavani, Jan 13, 2018, 11:13 AM IST
ಅಫಜಲಪುರ: ತಾಲೂಕಿನ ಅನೇಕ ಕಡೆಗಳಲ್ಲಿ ತೊಗರಿ ಖರೀದಿ ಕೇಂದ್ರ ಆರಂಭಿಸಲಾಗಿದೆ. ಆದರೆ ಪಟ್ಟಣದಲ್ಲಿ ತೊಗರಿ ಖರೀದಿ ಕೇಂದ್ರ ಆರಂಭಿಸಿಲ್ಲ. ಇದರಿಂದ ಪಟ್ಟಣದ ರೈತರಿಗೆ ತೀವ್ರ ಸಮಸ್ಯೆಯಾಗುತ್ತಿದೆ. ಹೀಗಾಗಿ ಪಟ್ಟಣದಲ್ಲೊಂದು ತೊಗರಿ ಖರೀದಿ ಕೇಂದ್ರ ಆರಂಭಿಸಬೇಕೆಂದು ಒತ್ತಾಯಿಸಿ ಪಟ್ಟಣದ ರೈತರು ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ಉದ್ದೇಶಿಸಿ ಮುಖಂಡರಾದ ಸೂರ್ಯಕಾಂತ ನಾಕೇದಾರ, ಸಿದ್ರಾಮಪ್ಪ ಮನಮಿ, ಚಂದ್ರಶೇಖರ ಕರ್ಜಗಿ,
ಜಿ.ಪಂ ಸದಸ್ಯ ಅರುಣಕುಮಾರ ಪಾಟೀಲ್, ಮಾಜಿ ಸದಸ್ಯರಾದ ಮತೀನ್ ಪಟೇಲ್, ಸಿದ್ದಾರ್ಥ ಬಸರಿಗಿಡ
ಮಾತನಾಡಿದರು.
ಪಟ್ಟಣದಲ್ಲಿ ತೊಗರಿ ಖರೀದಿ ಕೇಂದ್ರ ತೆರೆಯದೆ ಇರುವುದರಿಂದ ಇಲ್ಲಿನ ರೈತರಿಗೆ ಅನಾನೂಕೂಲ ಆಗುತ್ತಿದೆ.
ಖರೀದಿ ಕೇಂದ್ರ ತೆರೆಯುವಂತೆ ಸರ್ಕಾರಕ್ಕೆ ಎರಡೂಮೂರು ಬಾರಿ ಮನವಿ ಸಲ್ಲಿಸಿದರೂ ಕ್ರಮ ಕೈಗೊಳ್ಳದಿರುವುದನ್ನು ನೋಡಿದರೆ ಸರ್ಕಾರ ರೈತರೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ಇನ್ನು ಮೂರು ದಿನಗಳ ಕಾಲ ಗಡುವು ನೀಡಲಾಗುವುದು. ಖರೀದಿ ಕೇಂದ್ರ ತೆರೆಯದಿದ್ದರೆ ರೈತರು ಬೆಳೆದ ತೊಗರಿಯನ್ನು ತಂದು ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿಟ್ಟು ಹೆದ್ದಾರಿ ತಡೆದು ಪ್ರತಿಭಟನೆ ಮಾಡಲಾಗುತ್ತದೆ ಎಂದು ಎಚ್ಚರಿಸಿದರು.
ಸ್ಥಳಕ್ಕೆ ಆಗಮಿಸಿದ ಪ್ರೊಬೇಷನರಿ ಕೆಎಎಸ್ ಅಧಿಕಾರಿ ವರ್ಷಾ ಬೇಗಾರ್, ಕೃಷಿ ಅಧಿಕಾರಿ ಶರಣಗೌಡ ಪಾಟೀಲ,
ತೊಗರಿ ಖರೀದಿ ಕೇಂದ್ರದ ತಾಲೂಕು ನೋಡಲ್ ಅಧಿಕಾರಿ ಶರಣಗೌಡ ಬಿರಾದಾರ ಮಾತನಾಡಿ, ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ಮೂರುದಿನಗಳ ಒಳಗಾಗಿ ಪಟ್ಟಣದಲ್ಲಿ ಖರೀದಿ ಕೇಂದ್ರ ತೆರೆಯಲಾಗುವುದು ಎಂದು ಭರವಸೆ ನೀಡಿದರು. ನಂತರ ರೈತರು ಪ್ರತಿಭಟನೆ ಹಿಂದಕ್ಕೆ ಪಡೆದರು.
ಮುಖಂಡರಾದ ಶಿವಪುತ್ರಪ್ಪ ಸಂಗೋಳಗಿ, ಸದಾಶಿವ ಮೇತ್ರಿ, ಸಿದ್ರಾಮಪ್ಪ ಮನಮಿ, ಶಂಕರ ಸೋಬಾನಿ,
ಭೀಮಾಶಂಕರ ದಾನಮಗುಡಿ, ಮದಾದೇವಪ್ಪ ಕಲಕೇರಿ, ಚಂದ್ರಾಮಪ್ಪ ಬಳಗುಂಡಿ, ಶಿವಾನಂದ ಗಾಡಿಸಾಹುಕಾರ,
ಗಂಗಾಧರ ಶ್ರೀಗಿರಿ, ಚಿದಾನಂದ ಮಠ, ಸಂಜು ನಿಂಬಾಳ, ಸುಭಾಷ ರಾಠೊಡ, ಸತೀಶ ಮಾಳಗೆ, ಅಮರನಾಥ ಮೇತ್ರಿ, ಜಕ್ಕಪ್ಪ ಪೂಜಾರಿ, ಮಂಜುನಾಥ ಕಲಕೇರಿ, ನಾಗು ಮಾಡ್ಯಾಳ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್